ಇಂದು-ನಾಳೆ ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆ ಅನಾವರಣ


Team Udayavani, Jan 17, 2019, 5:56 AM IST

gul-4.jpg

ಕಲಬುರಗಿ: ವಿದ್ಯಾರ್ಥಿಗಳ ತಲೆಯಲ್ಲಿ ಹೊಳೆಯುವ ವೈಜ್ಞಾನಿಕ ಸಂಶೋಧನೆಗೆ ಗುರುತಿಸುವ ಹಾಗೂ ಪ್ರೋತ್ಸಾಹಿಸುವ ನಿಟ್ಟಿನ ಮೂರು ದಿನಗಳ ಆವಿಷ್ಕಾರೋತ್ಸವ ಇಲ್ಲಿನ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಬುಧವಾರ ಆರಂಭಗೊಂಡಿದೆ.

ವಿದ್ಯಾರ್ಥಿಗಳಲ್ಲದೇ ರೈತರು ಇತರ ಸಾಮಾನ್ಯ ಜನರು ತಾವು ಕಂಡುಕೊಂಡ ವಿಭಿನ್ನ ಸಂಶೋಧನೆಯನ್ನು ಪ್ರಚುಪಡಿಸುವುದಕ್ಕೆ ಉತ್ತಮ ಅವಕಾಶದ ವೇದಿಕೆಯನ್ನು ಜಿಲ್ಲಾ ವಿಜ್ಞಾನ ಕೇಂದ್ರ ಕಳೆದ ಮೂರು ವರ್ಷಗಳಿಂದ ಆವಿಷ್ಕಾರೋತ್ಸವ ಆಯೋಜಿಸುತ್ತಾ ಬರುತ್ತಿದ್ದು, ಕರ್ನಾಟಕ ಕೇಂದ್ರೀಯ ವಿವಿ ಕುಲಪತಿ ಪ್ರೊ| ಎಚ್.ಎಂ. ಮಹೇಶ್ವರಯ್ಯ ಬುಧವಾರ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಯಾರ ತಲೆಯಲ್ಲಿ ಯಾವ ನಿಟ್ಟಿನ ಸಂಶೋಧನೆ ಅಡಗಿರುತ್ತದೆಯೋ ಎಂಬುದನ್ನು ಸರಳವಾಗಿ ಗುರುತಿಸಲಿಕ್ಕಾಗುವುದಿಲ್ಲ. ಆದರೆ ಅವರ ಪ್ರತಿಭೆ ಗುರುತಿಸುವ ಇಂತಹ ಆವಿಷ್ಕಾರೋತ್ಸಗಳನ್ನು ವಿಜ್ಞಾನ ಕೇಂದ್ರ ಆಯೋಜಿಸುತ್ತಾ ಬಂದಿರುವುದು ಸ್ವಾಗತಾರ್ಹ ಎಂದರು.

ವಿಶ್ವದಾದ್ಯಂತ ದೇಶಗಳು ಅಧುನಿಕತೆಯ ಜೀವನದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಹೆಚ್ಚಿನ ರೀತಿಯಲ್ಲಿ ಬಳಸಿಕೊಂಡು ವೇಗವಾಗಿ ಪ್ರಗತಿಯತ್ತ ಮುಖ ಮಾಡುತ್ತಿವೆ. ಮಾನವ ಸಂಪನ್ಮೂಲ ಮತ್ತು ನೈಸರ್ಗಿಕ ಸಂಪನ್ಮೂಲದಿಂದ ಸಂಪದ್ಭರಿತವಾಗಿರುವ ಭಾರತವು ಇದಕ್ಕು ಒಂದು ಹೆಜ್ಜೆ ಮುಂದೆ ಹೋಗಿ ವಿಶ್ವದಲ್ಲಿಯೆ ಮೊದಲಿಗರಾಗಿ ದೈನಂದಿನ ಜೀವನಕ್ಕೆ ಸಹಾಯಕವಾಗಬಲ್ಲ ಹೊಸ ಆವಿಷ್ಕಾರಕ್ಕೆ ಮುನ್ನಡಿ ಬರೆಯಬೇಕು ಎಂದು ಮಕ್ಕಳಿಗೆ ಕರೆ ನೀಡಿದರು.

ಬೆಂಗಳೂರಿನ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಂತ್ರಜ್ಞಾನ ವಸ್ತುಸಂಗ್ರಹಾಲಯದ ಕ್ಯೂರೇಟರ್‌ ಸಜು ಭಾಸ್ಕರನ್‌ ಮಾತನಾಡಿ, ಮಕ್ಕಳಿಗೆ ಸಹಾಯಕವಾಗಲೆಂದೆ ಕಲಬುರಗಿ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಇನೋವೇಷನ್‌ ಹಬ್‌ ಸ್ಥಾಪಿಸಲಾಗಿದೆ ಎಂದರು. ಪಿಡಿಎ ಇಂಜಿನಿಯರಿಂಗ್‌ ಕಾಲೇಜ್‌ನ ಪ್ರಾಚಾರ್ಯರಾದ ಡಾ| ಎಸ್‌. ಎಸ್‌. ಹೆಬ್ಟಾಳ ಅಧ್ಯಕ್ಷತೆ ವಹಿಸಿದ್ದರು.

ಇದಕ್ಕೂ ಮುಂಚೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ವಿಜ್ಞಾನ ಕೇಂದ್ರದ ಅಧಿಕಾರಿ ಸಿ.ಎನ್‌. ಲಕ್ಷ್ಮೀನಾರಾಯಣ ಹಾಗೂ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದ ಕ್ಯೂರೆಟ್ರ್‌ ಸಜು ಭಾಸ್ಕರ್‌, ಈ ವರ್ಷ ಆವಿಷ್ಕಾರದ ಸಲುವಾಗಿ 152 ಸಂಶೋಧನಾ ಮಾದರಿ ಪ್ರಸ್ತಾವನೆಗಳು ಬಂದಿದ್ದವು. ಆದರೆ ಅವುಗಳನ್ನು ಪರಿಷ್ಕರಿಸಿ-ಶೋಧಿಸಿ 38 ಸಂಶೋಧನೆಗಳಿಗೆ ಅವಕಾಶ ನೀಡಲಾಗಿದೆ. ಇದನ್ನು ವೈಜ್ಞಾನಿಕವಾಗಿ ನಿಖರವಾಗಿ ದೃಢಿಪಟ್ಟಲ್ಲಿ ಅದನ್ನು ಪೇಟೆಂಟ್‌ಗೆ ಅಳವಡಿಸುವುದನ್ನು ಅವರ ಅನುಮತಿಯೊಂದಿಗೆ ವಿಜ್ಞಾನ ಕೇಂದ್ರ ಮಾಡಲಿದೆ ಎಂದು ವಿವರಿಸಿದರು.

ಕೀಟನಾಶಕ ಸಿಂಪಡಿಸಲು ಡ್ರೋನ್‌ ಬಳಕೆ
ರೈತರು ಬೆಳೆಗಳಿಗೆ ಕೀಟನಾಶಕ ಸಿಂಪಡಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಡ್ರೋನ್‌ ಬಳಕೆ ಮಾಡಬಹುದು ಎಂಬುದನ್ನು ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಅಂತೀಮ ವರ್ಷದ ವಿದ್ಯಾರ್ಥಿಗಳಾದ ವಿರೇಶ ಹಾಗೂ ಸುನೀತಾ ನಿರೂಪಿಸಿದ ಡ್ರೋನ್‌ ಆವಿಷ್ಕಾರೋತ್ಸವದಲ್ಲಿ ಗಮನ ಸೆಳೆಯಿತು. ಅದೇ ರೀತಿ ಇನ್‌ಫಿಂಕ್ಟ್ ಸಲ್ಯೂಷನ್‌ ವತಿಯಿಂದ ವಿದ್ಯಾರ್ಥಿಗಳು ಮಣ್ಣಿನಲ್ಲಿನ ತೇವಾಂಶ ನಿಖರವಾಗಿ ಅಳೆಯುವ ಹಾಗೂ ಮಣ್ಣಿನಲ್ಲಿನ ಲವಣಾಂಶಗಳನ್ನು ಅರಿಯುವ ಸಾಧನ ಪ್ರಸ್ತುಪಡಿಸಿರುವುದು ಸಹ ಹಲವರ ಗಮನ ಸೆಳೆಯಿತು. ಗುರುವಾರ-ಶುಕ್ರವಾರ ಆವಿಷ್ಕಾರೋತ್ಸವ ನಡೆಯಲಿದೆ.

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.