ಯುವಕರಿಗೆ ಉದ್ಯೋಗ ಹಕ್ಕು ನೀಡಿ: ಕಾಂತಾ
Team Udayavani, Jan 17, 2019, 6:22 AM IST
ಕಲಬುರಗಿ: ದೇಶದ ಜನರು ಘನತೆಯಿಂದ ಜೀವನ ನಡೆಸಲು ಯುವಕರ ಕೈಗಳಿಗೆ ಉದ್ಯೋಗ ನೀಡುವುದರೊಂದಿಗೆ ‘ರೈಟ್ ಟು ವರ್ಕ್’ ಜಾರಿಗೆ ತರುವ ಮೂಲಕ ಉದ್ಯೋಗ ಮಾಡುವ ಹಕ್ಕು ಖಾತರಿ ಒದಗಿಸಬೇಕೆಂದು ಮಾಜಿ ಕಾರ್ಮಿಕ ಸಚಿವ ಎಸ್.ಕೆ. ಕಾಂತಾ ಹೇಳಿದರು.
ನಗರದಲ್ಲಿ ಉದ್ಯೋಗಕ್ಕಾಗಿ ಯುವ ಜನರು ವೇದಿಕೆ ವತಿಯಿಂದ ಬುಧವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಉದ್ಯೋಗದ ಲೆಕ್ಕ ಕೊಡಿ ಮತ್ತು ಕಾನೂನು ತಿದ್ದುಪಡಿ ಮೂಲಕ (ಫಿಕ್ಸೆಡ್ಟರ್ಮ್ಎಂಪ್ಲಾಯಿಮೆಂಟ್) ಉದ್ಯೋಗ ಭದ್ರತೆ ಕಿತ್ತು ಹಾಕಿದ್ದು ಯಾಕೆ ಎನ್ನುವ ಪ್ರಶ್ನೆ ಕೇಳುವ ಜಾಥಾದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಜಾಥಾವನ್ನು ಕಲಬುರಗಿಯ ಎಲ್ಲ ಪ್ರಜ್ಞಾವಂತ ನಾಗರೀಕರು ಬೆಂಬಲಿಸಬೇಕು. ರಾಜ್ಯಾದ್ಯಾಂತ ಈ ಹೋರಾಟ ಪಸರಿಸಲಿ ಮತ್ತು ಸರ್ಕಾರಗಳಿಗೆ ಎಚ್ಚರಿಕೆಯನ್ನು ನೀಡಲಿ ಎಂದರು.
ಉದ್ಯೋಗಕ್ಕಾಗಿ ಯುವಜನರು ವೇದಿಕೆಯ ರಾಜ್ಯ ಸಂಚಾಲಕ ಸರೋವರ್ ಬೆಂಕಿಕೆರೆ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಜವಾಬ್ದಾರಿ ಮರೆತಿವೆ. ಚುನಾವಣೆಗೂ ಮುನ್ನ ಕೊಟ್ಟ ಆಶ್ವಾಸನೆಗಳನ್ನು ಈಡೇರಿಸಬೇಕು. ನಾವು ಕೇವಲ ಉದ್ಯೋಗ ಕೇಳುತ್ತಿಲ್ಲ. ದೇಶ ನಿರ್ಮಾಣದಲ್ಲಿ ಯುವಜನರ ಭಾಗಿದಾರಿಕೆ ಕೇಳುತ್ತಿದ್ದೇವೆ ಎಂದರು.
ಜಾಥಾದಲ್ಲಿ ವೇದಿಕೆ ಜಿಲ್ಲಾ ಸಂಚಾಲಕ ರಾಜೇಂದ್ರ ರಾಜ್ವಾಳ, ಶಿವಲಿಂಗಪ್ಪ ಕಿನ್ನೂರ, ಡಿಎಸ್ಎಫ್ನ ಗುರುರಾಜ ಭಂಡಾರಿ, ಕೆವಿಎಸ್ನ ಲಕ್ಷ್ಮಣ ಮಂಡಲಗೇರ, ವಕೀಲ ಸಂತೋಷ ಗುಡೂರು. ಕಾಶಿನಾಥ ಡಾಂಗೆ, ಎಸ್.ಜಿ. ಭಾರತಿ ಹಾಗೂ ಆರೋಗ್ಯ ಇಲಾಖೆ, ಎಪಿಎಂಸಿ ಇಲಾಖೆಗಳ ಗುತ್ತಿಗೆ ನೌಕರರು, ವಿದ್ಯಾರ್ಥಿಗಳು ಹಾಜರಿದ್ದರು.
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತಯಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಮೆರವಣಿಗೆ ಜಾಥಾ ನಡೆಸಲಾಯಿತು. ರಾಜ್ಯದ ಎಲ್ಲ 30 ಜಿಲ್ಲೆಗಳಲ್ಲಿ ಜಾಥಾ ನಡೆಯುತ್ತಿದ್ದು, ಜ.27ರಂದು ಬೆಂಗಳೂರಿನಲ್ಲಿ ಅಂತ್ಯಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು