ಪ್ರೇಯಸಿಗಾಗಿ ಗರ್ಭಿಣಿ ಪತ್ನಿಯನ್ನೇ ಕೊಂದ ಪತಿ


Team Udayavani, Jan 17, 2019, 6:26 AM IST

gul-10.jpg

ವಾಡಿ: ಪ್ರೇಯಸಿಗಾಗಿ ಪತಿ ತನ್ನ ಗರ್ಭಿಣಿ ಪತ್ನಿಯನ್ನೇ ಕೊಂದು ಹೂತುಹಾಕಿದ ಪ್ರಕರಣ ತಿಂಗಳ ನಂತರ ಬೆಳಕಿಗೆ ಬಂದಿದೆ.

ತಿಂಗಳ ಹಿಂದೆಯಷ್ಟೇ ಪಟ್ಟಣ ಸಮೀಪದ ಲಕ್ಷ್ಮೀಪುರವಾಡಿ ಗ್ರಾಮದ ಕರಿಷ್ಮಾ (ರೇಷ್ಮಾ) ವಿಜಯಕುಮಾರ ಪವಾರ (23) ಎನ್ನುವರು ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದರು. ನಂತರ ಪೊಲೀಸರು ನಡೆಸಿದ ತನಿಖೆಯಿಂದ ಪರಹತಾಬಾದ ಸಮೀಪದ ಕಲಿಫತ್‌ ದರ್ಗಾ ಹತ್ತಿರದ ಹೆದ್ದಾರಿ ಬದಿಯಲ್ಲಿ ಅವರ ಶವ ಪತ್ತೆಯಾಗಿದೆ.

ಪತಿ ವಿಜಯಕುಮಾರ ಪವಾರ ಹಾಗೂ ಆತನ ಪ್ರೇಯಸಿಯಾದ ಅದೇ ಗ್ರಾಮದ ಪೂಜಾ ರಾಠೊಡ ಎನ್ನುವರೇ ಕೊಲೆ ಮಾಡಿದ ಪ್ರಮುಖ ಆರೋಪಿಗಳಾಗಿದ್ದಾರೆ. ಪತ್ನಿ ಕಾಣೆಯಾಗಿದ್ದಾಳೆ ಎಂದು ಹುಡುಕಾಟ ನಡೆಸುತ್ತಿದ್ದ ಪತಿಯೇ ಕೊಲೆ ಮಾಡಿದ್ದಾನೆ ಎನ್ನುವ ವಿಷಯ ತನಿಖೆಯಿಂದ ಬೆಳಕಿಗೆ ಬಂದಿದೆ.

ಘಟನೆ ವಿವರ: ಕೊಲೆಯಾದ ರೇಷ್ಮಾ ಮೂಲತಃ ವಿಜಯಪುರ ಜಿಲ್ಲೆಯ ಡೋಮನಾಳ ತಾಂಡಾ ನಿವಾಸಿಯಾಗಿದ್ದು, 2017ರಲ್ಲಿ ಲಕ್ಷ್ಮೀಪುರವಾಡಿ ಗ್ರಾಮದ ವಿಜಯಕುಮಾರ ಪವಾರ ಎನ್ನುವಾತನೊಂದಿಗೆ ವಿವಾಹವಾಗಿತ್ತು. ಮದುವೆಗೂ ಮುಂಚೆ ಆರೋಪಿ ವಿಜಯಕುಮಾರನು ಪೂಜಾ ಎನ್ನುವಾಕೆಯೊಂದಿಗೆ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆಕೆಯೊಂದಿಗೆ ದೈಹಿಕ ಸಂಬಂಧವಿತ್ತು ಎನ್ನುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ.

ಮದುವೆಯ ನಂತರವೂ ವಿಜಯಕುಮಾರನ ಪ್ರಣಯದಾಟ ಮುಂದುವರಿದಿತ್ತು. ಕಾರಣ ಪತ್ನಿಯೊಂದಿಗೆ ಪದೇಪದೆ ಜಗಳ ಮಾಡುತ್ತಿದ್ದ ವಿಜಯಕುಮಾರ, 2018ರ ಡಿ.4 ರಂದು ಶಾಶ್ವತವಾಗಿ ಪತ್ನಿಯನ್ನು ಮುಗಿಸುವ ಸಂಚು ರೂಪಿಸಿದ್ದ. ತವರು ಮನೆಗೆ ಕಳುಹಿಸುವ ನೆಪದಲ್ಲಿ ಹೆಂಡತಿಯನ್ನು ಬೈಕ್‌ ಮೇಲೆ ಕರೆದೊಯ್ದ ಆರೋಪಿ ವಿಜಯಕುಮಾರ, ಪ್ರೇಯಸಿ ಪೂಜಾಳನ್ನು ಮೊದಲೇ ನಿಗದಿಪಡಿಸಲಾದ ಕೊಲೆ ಮಾಡುವ ಸ್ಥಳಕ್ಕೆ ಕಳುಹಿಸಿದ್ದ.

ಇಬ್ಬರೂ ಸೇರಿ ನಾಲ್ಕು ತಿಂಗಳ ಗರ್ಭಿಣಿ ರೇಷ್ಮಾಳ ಕತ್ತು ಹಿಸುಕಿ ಅಮಾನುಷವಾಗಿ ಕೊಂದು ಹಾಕಿ, ರಸ್ತೆ ಪಕ್ಕದ ಗುಂಡಿಯಲ್ಲಿ ಶವ ಹೂತುಹಾಕಿದ್ದರು. ಡಿ.7 ರಂದು ಅಳಿಯನ ಮನೆಯಿಂದ ಮಗಳು ಕಾಣೆಯಾಗಿದ್ದಾಳೆ ಎನ್ನುವ ಕುರಿತು ಕಿಶನ್‌ ರಾಠೊಡ ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆರೋಪಿ ವಿಜಯಕುಮಾರ ಕೂಡ ಪತ್ನಿಯ ಹುಡುಕಾಟದ ನಾಟಕವಾಡಿದ್ದ ಎಂದು ಸಿಪಿಐ ಪಂಚಾಕ್ಷರಿ ಸಾಲಿಮಠ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಎಸ್‌ಪಿ ಎನ್‌.ಶಶಿಕುಮಾರ, ಹೆಚ್ಚುವರಿ ಎಸ್‌ಪಿ, ಶಹಾಬಾದ ಡಿವೈಎಸ್‌ಪಿ ಕೆ.ಬಸವರಾಜ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡ ಸಿಪಿಐ ಪಂಚಾಕ್ಷರಿ ಸಾಲಿಮಠ, ಪಿಎಸ್‌ಐ ವಿಜಯಕುಮಾರ ಭಾವಗಿ, ಎಎಸ್‌ಐ ಶಿವಕಾಂತ ಹಾಗೂ ಪೇದೆಗಳಾದ ಲಕ್ಷ್ಮಣ ವಾಣಿ, ದತ್ತು ಜಾನೆ, ಚಂದ್ರಶೇಖರ, ದೊಡ್ಡಪ್ಪ, ಶಬ್ಬೀರ್‌, ಅಶೋಕ, ರುದ್ರುಗೌಡ ಹಾಗೂ ಹೀರಾಲಾಲ ಜಟಿಲವಾದ ಪ್ರಕರಣವನ್ನು ವೈಜ್ಞಾನಿಕ ವಿಧಾನಗಳ ಸಹಾಯದಿಂದ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ವಿಜಯಕುಮಾರ ಮತ್ತು ಪೂಜಾ ಸದ್ಯ ಪೊಲೀಸರ ಬಂಧನದಲ್ಲಿದ್ದು, ಗುರುವಾರ ಸಹಾಯಕ ಆಯುಕ್ತರ ಸಮ್ಮುಖದಲ್ಲಿ ಶವ ಹೊರತೆಗೆದು ಪಂಚನಾಮೆ ನಡೆಸಲಿದ್ದಾರೆ.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.