ವಿಜ್ಞಾನಿಗಳ ಸೃಷ್ಟಿಸುವ ಹೊಣೆ ಶಿಕ್ಷಕರದ್ದು
Team Udayavani, Jan 19, 2019, 7:06 AM IST
ಶಹಾಬಾದ: ಭವಿಷ್ಯದ ವಿಜ್ಞಾನಿಗಳನ್ನು ಸೃಷ್ಟಿಸುವ ಹೆಚ್ಚಿನ ಹೊಣೆಗಾರಿಕೆ ಇರುವುದು ಶಿಕ್ಷಕರಲ್ಲಿ ಮಾತ್ರ ಎಂದು ಭಂಕೂರ ಸರಕಾರಿ ಪ್ರೌಢಶಾಲೆ ವಿಜ್ಞಾನ ಶಿಕ್ಷಕಿ ಸೀತಮ್ಮ ಎನ್. ಹೇಳಿದರು. ಭಂಕೂರ ಗ್ರಾಮದ ಬಸವ ಸಮಿತಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಮಕ್ಕಳ ವಿಜ್ಞಾನ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ಒಂದು ಸಮಸ್ಯೆ ಎದುರಾದಾಗ ಅದನ್ನು ಬಗೆಹರಿಸುವಲ್ಲಿ ವೈಜ್ಞಾನಿಕವಾಗಿ ಚಿಂತನೆ ನಡೆಸಬೇಕಾಗುತ್ತದೆ. ವಿಜ್ಞಾನ ವಿಷಯಗಳ ವಿಚಾರಧಾರೆ ಎತ್ತರಕ್ಕೆ ಕೊಂಡೊಯ್ಯುವಂತೆ ಮಾಡುತ್ತದೆ. ಚಿಕ್ಕಂದಿನಲ್ಲಿ ಮಕ್ಕಳಿಗೆ ವಿಜ್ಞಾನ ವಿಷಯದ ಬಗ್ಗೆ ಆಸಕ್ತಿ ಮೂಡಿಸುವುದರಿಂದ ಅವರಿಗೆ ಉನ್ನತ ಶಿಕ್ಷಣಕ್ಕೆ ಹೋಗಲು ಪ್ರೇರಣೆಯಾಗುತ್ತದೆ ಎಂದರು. ಮಕ್ಕಳಲ್ಲಿ ವೈಜ್ಞಾನಿಕ ಪ್ರಜ್ಞೆ ಹೆಚ್ಚಿದಂತೆಲ್ಲ ದೇಶದ ಅಭಿವೃದ್ಧಿ ತಾನೆ ಮುಂದೆ ಸಾಗುತ್ತದೆ.ಆದ್ದರಿಂದ ಮಕ್ಕಳು ವಿಜ್ಞಾನದ ಬಗ್ಗೆ ಹೆಚ್ಚು ಆಸಕ್ತಿ ಹೊಂದಬೇಕೆಂದು ಹೇಳಿದರು.
ಶಿಕ್ಷಕ ವಿಷ್ಣತೀರ್ಥ ಆಲೂರ ಮಾತನಾಡಿ, ವಿಜ್ಞಾನ ಜೀವನದ ಅವಿಭಾಜ್ಯ ಅಂಗ. ದೈನಂದಿನ ಚಟುವಟಿಕೆಗಳಲ್ಲಿ ನಾವು ವಿಜ್ಞಾನವನ್ನೇ ಅಳವಡಿಸಿಕೊಂಡಿದ್ದೇವೆ. ವಿಜ್ಞಾನ ಬಿಟ್ಟು ನಾವಿಲ್ಲ, ನಮ್ಮನ್ನು ಬಿಟ್ಟು ವಿಜ್ಞಾನವಿಲ್ಲ ಎನ್ನುವುದು ಸತ್ಯ ಎಂದರು.
ಅತಿಥಿಯಾಗಿದ್ದ ಶಿಕ್ಷಕ ಅಲ್ತಾಫ್ ಹುಸೇನ್ ಮಾತನಾಡಿದರು. ಶಾಲೆ ಕಾರ್ಯದರ್ಶಿ ರೇವಣಸಿದ್ದಪ್ಪ ಮುಸ್ತಾರಿ, ಮುಖ್ಯ ಶಿಕ್ಷಕಿ ಅರುಣಾ ಜಾಯಿ, ಶಿಕ್ಷಕರಾದ ದತ್ತಾತ್ರೇಯ ಕುಲಕರ್ಣಿ, ರಮೇಶ ಅಳ್ಳೋಳ್ಳಿ, ರಶ್ಮಿ ಪಾಟೀಲ, ಶ್ರೀದೇವಿ ಗೌರಮ್ಮ, ಅನ್ನಪೂರ್ಣ ಸಿಂಘ, ಸುಧಿಧೀರ ಕುಲಕರ್ಣಿ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ: ರಾಜಸ್ಥಾನಿ ಮಹಿಳೆ !
Kolkata Raiders ಕೋಚ್ ಬಗ್ಗೆ ಆಟಗಾರ ಡೇವಿಡ್ ವೀಸ್ ಆರೋಪ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ