ಸಿದ್ದು ಸರ್ಕಾರದ ಸಾಲಮನ್ನಾಕ್ಕೆ ಒತ್ತಾಯ


Team Udayavani, Jan 19, 2019, 7:14 AM IST

gul-9.jpg

ಆಳಂದ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 2017-18ನೇ ಸಾಲಿನಲ್ಲಿ ಕೈಗೊಂಡ ಸಾಲಮನ್ನಾ ಹಣವನ್ನು ರೈತರ ಖಾತೆಗಳಿಗೆ ವಿಳಂಬ ಮಾಡದೇ ಕೂಡಲೇ ಜಮಾ ಮಾಡಬೇಕು ಎಂದು ಆಗ್ರಹಿಸಿ ಕರವೇ (ನಾರಾಯಣಗೌಡ ಬಣದ) ಪ್ರತಿಭಟನೆ ನಡೆಸಿತು.

ಪಟ್ಟಣದ ಡಿಸಿಸಿ ಬ್ಯಾಂಕ್‌ ಶಾಖೆ ಎದುರು ಶುಕ್ರವಾರ ಕರವೇ ತಾಲೂಕು ಅಧ್ಯಕ್ಷ ಲಕ್ಷ್ಮೀಕಾಂತ ಉದನೂರ ನೇತೃತ್ವದಲ್ಲಿ ಕಾರ್ಯಕರ್ತರು, ರೈತರು ಭಾಗವಹಿಸಿ ಕೂಡಲೇ ಮನ್ನಾ ಹಣವನ್ನು ರೈತರ ಖಾತೆಗಳಿಗೆ ಜಮಾ ಮಾಡಬೇಕು ಎಂದು ಒತ್ತಾಯಿಸಿದರು.

ತಾಲೂಕಿನಲ್ಲಿನ ಅನೇಕ ಸಹಕಾರಿ ಸಂಘಗಳು ಹಾಗೂ ಡಿಸಿಸಿ ಬ್ಯಾಂಕ್‌ ಶಾಖೆಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ 2017-18ನೇ ಸಾಲಿನಲ್ಲಿ ರೈತರ ಸಾಲಮನ್ನಾ ಮಾಡಿ ಹಣವನ್ನು ವರ್ಗಾವಣೆ ಮಾಡಿದರೂ ಬ್ಯಾಂಕ್‌ ಶಾಖೆಗಳ ವ್ಯವಸ್ಥಾಪಕರು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಸಂಘದ ಅಧ್ಯಕ್ಷ ಲಕ್ಷ್ಮೀಕಾಂತ ಆಕ್ರೋಶ ವ್ಯಕ್ತಪಡಿಸಿದರು.

ಸಾಲಮನ್ನಾ ಹಣವನ್ನು ರೈತರ ಖಾತೆಗಳಿಗೆ ಜಮಾ ಮಾಡದೇ ಅನೇಕ ಬಾರಿ ಮೌಖೀಕವಾಗಿ ಮನವಿ ಮಾಡಿದರೂ ವ್ಯವಸ್ಥಾಪಕರು ಕ್ರಮ ಕೈಗೊಳ್ಳದೆ ಇರುವುದು ಅನುಮಾನಕ್ಕೆ ಎಡೆಮಾಡಿದೆ ಎಂದರು.

ತಾಲೂಕಿನ ಸರಸಂಬಾ, ಮುನ್ನಹಳ್ಳಿ, ಕೋಡಲಹಂಗರಗಾ, ರುದ್ರವಾಡಿ ಹಾಗೂ ರಿ ಇನ್ನಿತರ ಗ್ರಾಮಗಳಲ್ಲಿನ ರೈತರು ತಮ್ಮ ಖಾತೆಗೆ ಹಣ ಬಂದಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು. ಈ ಕುರಿತು ಎರಡ್ಮೂರು ದಿನಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ರಸ್ತೆ ತಡೆ ಸೇರಿದಂತೆ ಉಗ್ರ ಸ್ವರೂಪದ ಹೋರಾಟಕ್ಕೆ ನಡೆಸಲಾಗುವುದು ಎಂದು ಪ್ರತಿಭಟನಾ ನಿರತರು ಎಚ್ಚರಿಸಿದರು. ಪಿಎಸ್‌ಐ ಬಸವರಾಜ ರಂಜಳಕರ್‌ ಮಧ್ಯಸ್ಥಿಕೆಯಿಂದ ಬ್ಯಾಂಕ್‌ ಮೇಲ್ವಿಚಾರಕ ಚನ್ನಾರೆಡ್ಡಿ ಪಾಟೀಲಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಚನ್ನಾರೆಡ್ಡಿ, ಈಗಾಗಲೇ ಸಾಲಮನ್ನಾ ಪ್ರಕ್ರಿಯೆ ಚಾಲ್ತಿಯಲಿದ್ದು, ತಾಂತ್ರಿಕ ತೊಂದರೆಯಿಂದ ವಿಳಂಬವಾಗುತ್ತಿದೆ. ಎಲ್ಲ ಖಾತೆಗಳಿಗೆ ಸಾಲ ಮನ್ನಾ ಅನ್ವಯಿಸುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಕಾಲಾವಕಾಶ ನೀಡಬೇಕು ಎಂದು ಕೋರಿದರು. ನಂತರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.

ಮುಖಂಡ ಪ್ರಭುಲಿಂಗ ಬಿ. ಪೊಲೀಸ್‌ ಪಾಟೀಲ, ಆನಚಿದರಾಯ ಎಲ್‌. ಶೆಟ್ಟಿ, ಇಕ್ಬಾಲ್‌ ಬಿಲಗುಂದಿ, ಜಿಡಗಾ ಗ್ರಾಪಂ ಮಾಜಿ ಅಧ್ಯಕ್ಷ ಕಂಟು ಆರ್‌. ರಾಠೊಡ, ಶ್ರೀಶೈಲ ಮಲ್ಕಣ್ಣಾ, ಶರಣಬಸಪ್ಪ ಸಿದ್ರಾಮಪ್ಪಾ ಸಂಜುಕುಮಾರ ಮಲ್ಲಿನಾಥ ಇನ್ನಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.