ನೀರಿನ ಸಂರಕ್ಷಣೆಗೆ ಮುಂದಾಗಿ: ಕುಷ್ಟಗಿ
Team Udayavani, Jan 21, 2019, 9:04 AM IST
ಕಲಬುರಗಿ: ಮಕ್ಕಳು ನೀರಿನ ಮಹತ್ವ ಅರಿತು ಅದರ ಸಂರಕ್ಷಣೆಗೆ ಮುಂದಾಗಬೇಕು ಎಂದು ಪ್ರೊ| ವಸಂತ ಕುಷ್ಟಗಿ ಹೇಳಿದರು. ಇನ್ಟ್ಯಾಕ್ ಅಧ್ಯಯನ ಮತ್ತು ರೋಟರಿ ಕ್ಲಬ್ ಸಂಯುಕ್ತಾಶ್ರಯದಲ್ಲಿ ‘ನನ್ನ ನೀರಿನ ಪರಂಪರೆ’ ಎನ್ನುವ ವಿಷಯ ಕುರಿತು ರೋಟರಿ ಕ್ಲಬ್ನಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರಮಟ್ಟದ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.
ನೀರಿಗಾಗಿ ಅನೇಕ ಕಡೆಗಳಲ್ಲಿ ಹಾಹಾಕಾರವಿದೆ. ಕೆಲವೆಡೆ ಇದಕ್ಕಾಗಿಯೇ ಕಾದಾಟಗಳಾಗಿವೆ. ಮುಂದೊಂದು ದಿನ ನೀರಿಗಾಗಿ ಪರಿತಪಿಸುವ ಪರಿಸ್ಥಿತಿ ಬರಬಹುದು. ಹೀಗಾಗಿ ನೀರನ್ನು ಸಂರಕ್ಷಿಸಿ ಎಂದರು.
ಇನ್ಟ್ಯಾಕ್ ಸಂಚಾಲಕ ಡಾ| ಶಂಭುಲಿಂಗ ಎಸ್. ವಾಣಿ ಮಾತನಾಡಿ, ಈ ಸ್ಪರ್ಧೆ ದೇಶದ 196 ಇನ್ಟ್ಯಾಕ್ ಅಧ್ಯಯನಗಳಲ್ಲಿ ನಡೆಯುತ್ತಿದ್ದು, ಇದರಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದಲ್ಲಿ 100 ಟ್ರೋಫಿಗಳನ್ನು, ರಾಷ್ಟ್ರಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗುಜರಾತ ರಾಜ್ಯದ ಉಚಿತ ಶೈಕ್ಷಣಿಕ ಪ್ರವಾಸ ಹಮ್ಮಿಕೊಳ್ಳಲಾಗುವುದು. ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಪ್ರಮಾಣ ಪತ್ರ ವಿತರಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ವಿಜ್ಞಾನ ಕೇಂದ್ರದ ಅಧಿಕಾರಿ ಸಿ.ಎನ್. ಲಕ್ಷ್ನೀನಾರಾಯಣ ಮಾತನಾಡಿ, ನೀರು ಇದ್ದರೆ ನೆಲ, ನೆಲವಿದ್ದರೆ ನಾವು-ನಿವೆಲ್ಲ, ನೀರಿಲ್ಲದಿದ್ದರೆ ಜಗತ್ತೇ ಶೂನ್ಯ ಎಂದರು.
ಇನ್ಟ್ಯಾಕ್ ಅಧ್ಯಕ್ಷ ಡಾ| ಬಿ.ಎಸ್.ಗುಲಶೆಟ್ಟಿ, ರೋಟರಿ ಕ್ಲಬ್ ಅಧ್ಯಕ್ಷ ವಿಶ್ವನಾಥ ಯಕ್ಕಳ್ಳಿ, ಕಾರ್ಯದರ್ಶಿ ಬಿ. ಶ್ರೀನಿವಾಸರಾವ್ ಮಾತನಾಡಿದರು. ರೋಟರಿ ಕ್ಲಬ್ ಪದಾಧಿಕಾರಿಗಳಾದ ರಮೇಶ ಪಾಟೀಲ, ವಿದ್ಯಾಸಾಗರ, ಸಂಧ್ಯಾರಾಜ ಹಾಗೂ ಇನ್ಟ್ಯಾಕ್ ಪದಾಧಿಕಾರಿಗಳಾದ ಡಾ| ನಬಿಸಾ, ಡಾ| ಶ್ರೀನಾಥ, ಪ್ರೊ| ರಾಘವೇಂದ್ರ, ಡಾ| ರವಿಕುಮಾರ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ