ಮೌಲ್ಯ ನಿಂತ ನೀರಲ್ಲ: ಮಂಜುನಾಥ
Team Udayavani, Jan 21, 2019, 9:10 AM IST
ಕಲಬುರಗಿ: ಸಮಾಜ ಬದಲಾದ ಹಾಗೆ ಮೌಲ್ಯಗಳು ಬದಲಾಗುತ್ತವೆ. ಹೀಗಾಗಿ ಮೌಲ್ಯಗಳು ನಿಂತ ನೀರಲ್ಲ ಎಂದು ಬೆಂಗಳೂರಿನ ಸಾಮಾಜಿಕ ಮತ್ತು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಾ| ಬಿ.ಆರ್. ಮಂಜುನಾಥ ಹೇಳಿದರು.
ನಗರದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಶರಣಬಸವೇಶ್ವರ ಕಲಾ ಮಹಾ ವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ ಸಾಂಸ್ಥಿಕ ಮೌಲ್ಯಗಳು, ರಾಷ್ಟ್ರೀಯತೆ ಮತ್ತು ಸಾಮಾಜಿಕ ಜವಾಬ್ದಾರಿ’ ಕುರಿತು ಹಮ್ಮಿಕೊಳ್ಳಲಾಗಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.
ಸಂವೇದನಾಶೀಲತೆ ಬೆಳೆಸಿಕೊಂಡರೆ ಮೌಲ್ಯಗಳು ತಾನಾಗಿಯೇ ಬೆಳವಣಿಗೆ ಹೊಂದುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಯೌವನಾವಸ್ಥೆಯಲ್ಲಿಯೇ ಮೌಲ್ಯಗಳು ಚಿಗುರೊಡೆಯುವಂತ ಚಟುವಟಿಕೆಗಳಲ್ಲಿ ಆಸಕ್ತಿಯಿಂದ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.
ಮೌಲ್ಯವಿಲ್ಲದ ಜೀವನ ಜೀವನವಲ್ಲ, ಉತ್ತಮ ಜೀವನಕ್ಕೆ ಮೌಲ್ಯಗಳು ಬೇಕೆಬೇಕು. ವ್ಯಕ್ತಿತ್ವ ವೃದ್ಧಿಸಿಕೊಳ್ಳುವುದರಿಂದ ಉದಾತ್ತ ಗುಣಧರ್ಮದ ಮೌಲ್ಯಗಳು, ಸಾಮಾಜಿಕ ಹೊಣೆಗಾರಿಕೆಗಳು ಪ್ರಾಪ್ತವಾಗುತ್ತವೆ ಎಂದರು.
ಕಲೆ, ಸಂಗೀತ ಮತ್ತು ಸಾಹಿತ್ಯ ಪ್ರಕಾರಗಳು ನಮ್ಮಲ್ಲಿ ಸಂವೇದನೆ ಜಾಗೃತಗೊಳಿಸುತ್ತವೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಇರುವವರು ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದಕ್ಕೆ ಪರಿಹಾರ ಮಾನವಿಕ ಶಾಸ್ತ್ರದ ಅಧ್ಯಯನದಲ್ಲಿ ಇದೆ ಎಂದು ಹೇಳಿದರು.
ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ| ಶಿವರಾಜ ಶಾಸ್ತ್ರೀ ಹೇರೂರ, ಡಾ| ರೇಣುಕಾ ಕನಕೇರಿ, ಪ್ರೊ| ಜಗದೇವಿ ಕಲಶೆಟ್ಟಿ, ಪ್ರೊ| ವಿ.ಬಿ. ಬಿರಾದಾರ, ಪ್ರೊ| ಛಾಯಾ ಭರತನೂರ, ಗೌಸ್ ಪಟೇಲ್ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.
ಪ್ರಾಚಾರ್ಯ ಡಾ| ಡಿ.ಟಿ. ಅಂಗಡಿ ಅಧ್ಯಕ್ಷತೆ ವಹಿಸಿದ್ದರು. ಸಂಗೀತ ವಿಭಾಗದ ವಿದ್ಯಾರ್ಥಿಗಳು ಪ್ರಾರ್ಥಿಸಿದರು, ಡಾ| ಸುರೇಶಕುಮಾರ ನಂದಗಾಂವ ಸ್ವಾಗತಿಸಿದರು. ಪ್ರೊ| ಶರಣಮ್ಮ ವಾರದ ನಿರೂಪಿಸಿದರು, ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ| ವೆಂಕಣ್ಣ ಡೊಣ್ಣೆಗೌಡರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ