ಗ್ಲೋಬಲ್‌ ಶ್ರೇಣಿ ವಾಹನ ಮಾರುಕಟ್ಟೆಗೆ ಬಿಡುಗಡೆ


Team Udayavani, Jan 24, 2019, 7:01 AM IST

gul-8.jpg

ಕಲಬುರಗಿ: ಕಳೆದ 25 ವರ್ಷಗಳ ಗೂಡ್ಸ್‌ ಹಾಗೂ ಮಿನಿ ಬಸ್‌ಗಳ ಹಾಗೂ ಲಘು ವಾಹನಗಳ ತಯಾರಿಕೆಯಲ್ಲಿ ಜನರ ಪ್ರೀತಿ-ವಿಶ್ವಾಸಕ್ಕೆ ಪಾತ್ರವಾಗಿರುವ ಎಸ್‌ಎಂಎಲ್‌ ಇಸೂಝ್ ಕಂಪನಿ ಗ್ಲೋಬಲ್‌ ಶ್ರೇಣಿ ಎರಡು ಸರಕು ವಾಹನ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ನವದೆಹಲಿಯಲ್ಲಿ ಬಿಡುಗಡೆಯಾದ ನಂತರ ಬುಧವಾರ ಸಂಜೆ ನಗರದಲ್ಲಿ ನಡೆದ ಸಮಾರಂಭದಲ್ಲಿ ಎಸ್‌ಎಂಎಲ್‌ ಇಸೂಝ್ ಕಂಪನಿಯ ಎಸ್‌ಎಂಎಲ್‌ ಸಾರಥಿ-ಜಿಎಸ್‌ ಗೂಡ್ಸ್‌ ವಾಹನಗಳನ್ನು ಬಿಡುಗಡೆ ಮಾಡಲಾಯಿತು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂಪನಿ ಮಾರುಕಟ್ಟೆ ಮುಖ್ಯ ಮ್ಯಾನೇಜರ್‌ ಆರ್‌. ಭಾಸ್ಕರ್‌ ಅವರು, ಎಲ್ಲ ಹಂತದ ಸರಕುಗಳನ್ನು ಸಾಗಿಸಲು ಅನುಕೂಲವಾಗುವಂತೆ ವಿವಿಧ ಶ್ರೇಣಿ ಹಾಗೂ 5 ಲಕ್ಷ ರೂ. ದಿಂದ 12 ಲಕ್ಷ ರೂ. ವರೆಗಿನ ಮೊತ್ತದ ವಾಹನಗಳನ್ನು ಸಮರ್ಪಿಸಲಾಗುತ್ತಿದೆ ಎಂದು ವಿವರಿಸಿದರು.

ವಾಹನಗಳು ಎಲ್ಲಿಯಾದರೂ ಕೆಟ್ಟು ನಿಂತರೆ ಅಲ್ಲಿಂದಲೇ ಒಂದು ಮೆಸೆಜ್‌ ಕಳುಹಿಸಿದರೆ ಅಲ್ಲೇ ಸಮೀಪದ ಡೀಲರ್‌ದಿಂದ ಮೆಕ್ಯಾನಿಕರು ಬರುತ್ತಾರೆ. ಬಹು ಮುಖ್ಯವಾಗಿ ಬೇರೆ ಕಂಪನಿ ವಾಹನಗಳಿಗೆ ಎರಡು ವರ್ಷಗಳ ವಾರಂಟಿ ಇದ್ದರೆ, ತಮ್ಮ ವಾಹನಗಳಿಗೆ ಮೂರು ವರ್ಷ ವಾರಂಟಿ ಇದೆ. ಜತೆಗೆ ಕಂಪನಿ ವತಿಯಿಂದ 3 ವರ್ಷ ವಾಹನ ಚಾಲಕನಿಗೆ ಜೀವ ವಿಮೆ ಇದೆ. ಏನಾದರೂ ಅನಾಹುತವಾದರೆ 5 ಲಕ್ಷ ರೂ ಪರಿಹಾರ ಸಿಗುತ್ತದೆ ಎಂದು ತಿಳಿಸಿದರು.

ಎಸ್‌ಎಂಎಲ್‌ ಐಎಸ್‌ಯುಐಡ್‌ಯು ಕಂಪನಿ ಸ್ವರಾಜ್‌ ಮಜಾಡಾ ಸೇರಿದಂತೆ ಕಂಪನಿಯ ವಿವಿಧ ವಾಹನಗಳು ಸೇರಿದಂತೆ ಒಟ್ಟು 2.80 ಲಕ್ಷ ವಾಹನಗಳು ದೇಶದಲ್ಲಿ ರಸ್ತೆಗಿಳಿದಿವೆ. ಈಗ ಬಿಡುಗಡೆಯಾಗುವ ಹೊಸ ಶ್ರೇಣಿಗಳು ಪರಿಸರ ಸ್ನೇಹ ಹೊಂದಿದ್ದಲ್ಲದೇ ಉತ್ತಮ ಮೈಲೇಜ್‌ ಹೊಂದಿವೆ. ಒಟ್ಟಾರೆ ಮಲೇಷಿಯಾ ದೇಶದ ಮಾದರಿ ಹೊಂದಿವೆ ಎಂದು ಭಾಸ್ಕರ್‌ ತಿಳಿಸಿದರು. ಎಸ್‌ಎಂಎಲ್‌ ಇಸೂಝ್ ಮಾರುಕಟ್ಟೆ ಮ್ಯಾನೇಜರ್‌ ವಿಲಾಸ್‌, ಮೆ| ನಿಷ್ಠಿ ಅಟೋಮೋಟಿವ್ಸ್‌ ವ್ಯವಸ್ಥಾಪಕ ನಿರ್ದೇಶಕ ದೊಡ್ಡಪ್ಪ ಅಪ್ಪ ಇದ್ದರು.
ಗ್ರಾಹಕರಿಗೆ ನೂತನ ವಾಹನಗಳ ಕೀ ಹಸ್ತಾಂತರಿಸುವ ಮೂಲಕ ಮಾರುಕಟ್ಟೆಗೆ ಬಿಡುಗಡೆ ಮಾಡಲಾಯಿತು.
ಎಸ್‌ಎಂಎಲ್‌ ಇಸೂಝ್ ಕಂಪನಿ

ಕಲಬುರಗಿ-ಬೀದರ ಹಾಗೂ ಯಾದಗಿರಿ ಜಿಲ್ಲೆಗೆ ಮೆ| ನಿಷ್ಠಿ ಅಟೋಮೋಟಿವ್ಸ್‌ ಅಧಿಕೃತ ಡೀಲರರಾಗಿದ್ದು, ಈಗಾಗಲೇ ಬುಕ್ಕಿಂಗ್‌ ಶುರುವಾಗಿದೆ. ಟ್ರಕ್‌ಗಳನ್ನು ಹಿಂದೆಂದಿಗಿಂತಲೂ ಅಭಿವೃದ್ಧಿಗೊಳಿಸಲಾಗಿದೆ. ಇದು ಮಾಲೀಕರಿಗೆ ಮತ್ತಷ್ಟು ಹಿಡಿಸಲಾರಂಭಿಸಿದೆ. ಹಲವು ಸೌಲಭ್ಯಗಳಿರುವುದು ವಾಹನಗಳ ಖರೀದಿ ಉತ್ಸಾಹ ಇಮ್ಮಡಿಗೊಳಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.
ಆರ್‌. ಭಾಸ್ಕರ್‌, ಮುಖ್ಯ ಮಾರುಕಟ್ಟೆ ಮ್ಯಾನೇಜರ್‌, ಎಸ್‌ಎಂಎಲ್‌ ಇಸೂಝ್ ಕಂಪನಿ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.