ಅಸಂಘಟಿತ ಕಾರ್ಮಿಕರಿಂದ ಪ್ರತಿಭಟನೆ
Team Udayavani, Feb 1, 2019, 6:39 AM IST
ಕಲಬುರಗಿ: ಕೇಂದ್ರ ಸರ್ಕಾರ ತರಲು ಹೊರಟಿರುವ ಸಾಮಾಜಿಕ ಭದ್ರತೆ, ಕಲ್ಯಾಣ ಮತ್ತು ಔದ್ಯೋಗಿಕ, ಆರೋಗ್ಯ, ಸುರಕ್ಷಾ ಕರಡು ಮಸೂದೆ ರದ್ದುಪಡಿಸಬೇಕು. ಕಟ್ಟಡ ಕಾರ್ಮಿಕರ ಪತ್ನಿಗೆ ಹೆರಿಗೆಯಾದರೆ ಆಕೆಯ ಪತಿಗೂ ಹೆರಿಗೆ ರಜೆ ವಿಸ್ತರಣೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಕೇಂದ್ರ ಸಂಘದ ನೇತೃತ್ವದಲ್ಲಿ ನಗರದ ಅಂಚೆ ಕಚೇರಿ ಎದುರು ಅಸಂಘಟಿತ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ಅಂಚೆ ಇಲಾಖೆ ನೌಕರರ ಮೂಲಕ ಪ್ರಧಾನಿಗಳಿಗೆ ಮನವಿ ಸಲ್ಲಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬಜೇಟ್ನಲ್ಲಿ ಶೇ.3 ರಷ್ಟು ಅನುದಾನವನ್ನು ಅಸಂಘಟಿತ ಕಾರ್ಮಿಕರ ಕಲ್ಯಾಣ ಯೋಜನೆಗಳಿಗೆ ಒದಗಿಸುವಂತೆ, ಕಟ್ಟಡ ಕಾರ್ಮಿಕರ ನೋಂದಣಿ ನವೀಕರಣ ಹಾಗೂ ಸೌಲಭ್ಯ ಕೊಡಿಸುವಲ್ಲಿ ಕಾರ್ಮಿಕರ ಸಂಘಟನೆಗಳ ಪಾತ್ರ ಇರುವುದನ್ನು ಮುಂದುವರಿಸಿಕೊಂಡು ನೋಂದಾಯಿತ ಕಟ್ಟಡ ಕಾರ್ಮಿಕರ ಪತ್ನಿಯರಿಗೆ ಹೆರಿಗೆಯಾದ ಸಂದರ್ಭದಲ್ಲಿ ಪುರುಷ ಕಾರ್ಮಿಕರಿಗೂ ಹೆರಿಗೆ ರಜೆ ನೀಡುವಂತೆ ಒತ್ತಾಯಿಸಿದರು.
ಕಳೆದ ಮಂಡಳಿ ಸಭೆಯಲ್ಲಿ ನಿರ್ಣಯಿಸಿದಂತೆ ಎಲ್ಕೆಜಿಯಿಂದ ವಿದ್ಯಾಭ್ಯಾಸದ ಸೌಲಭ್ಯ, ಸ್ವಾಭಾವಿಕ ಮರಣ ಧನ ಸಹಾಯ 2 ಲಕ್ಷ ರೂ., ಮನೆ ಕಟ್ಟಲು ಸಾಲ ಹಾಗೂ ಇತರ ಸೌಲಭ್ಯಗಳ ತೀರ್ಮಾನಗಳನ್ನು ತ್ವರಿತಗತಿಯಲ್ಲಿ ಜಾರಿಗೊಳಿಸಲು ಆಗ್ರಹಿಸಿದರು.
ಜಿಲ್ಲಾ ಸಂಚಾಲಕ ಶಂಕರ ಕಟ್ಟಿಸಂಗಾವಿ, ರವಿ ಡೊಂಗರಗಾಂವ್, ಅಭಿಲಾಷ ಬಿ., ಫತ್ರು ಪಟೇಲ, ಬಾಬು ಬಡಿಗೇರ, ವೀರಶೆಟ್ಟಿ ಸುಂಠಾಣ, ಚಂದ್ರಕಾಂತ ಹೂಗಾರ, ಗುರು ಘತ್ತರಗಿ ಹಾಗೂ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!