ಹತ್ತು ದಿನಕಷ್ಟೇ ನೀರು!


Team Udayavani, Feb 5, 2019, 6:35 AM IST

gul-1.jpg

ವಾಡಿ: ಬೇಸಿಗೆ ಬರುವ ಮುಂಚೆಯೇ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಖಾಲಿ ಕೊಡಗಳನ್ನು ಹಿಡಿದು ಸಾರ್ವಜನಿಕರು ಪರದಾಡುತ್ತಿದ್ದಾರೆ. ಪಟ್ಟಣದ ಜನರ ಜಲಮೂಲವಾದ ಸಮೀದ ಕುಂದನೂರು ಗ್ರಾಮದ ಭೀಮಾನದಿ ಸದ್ಯ ನೀರಿಲ್ಲದೆ ಭಣಗುಡುತ್ತಿದ್ದು, ಕುಡಿಯುವ ನೀರಿನ ಸಮಸ್ಯೆ ಉಲ್ಬಣಕ್ಕೆ ಕಾರಣವಾಗಿದೆ.

ಕಳೆದ ಹತ್ತಾರು ದಿನಗಳಿಂದ ನಗರದ ಪುರಸಭೆ ವ್ಯಾಪ್ತಿಯ ವಿವಿಧ ಬಡಾವಣೆಗಳಿಗೆ ನಾಲ್ಕು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದ್ದು, ಜನರ ಜಲ ದಾಹ ನೀಗದಂತಾಗಿ ಕೊಡ ನೀರಿಗಾಗಿ ಅಲೆಯಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ. ಪುರಸಭೆ ಸುಪರ್ದಿಯಲ್ಲಿ ಒಟ್ಟು 23 ವಾರ್ಡ್‌ಗಳಿದ್ದು, 50,000 ಜನಸಂಖ್ಯೆಯಿದೆ. ಎಸಿಸಿ ಕಾಲೋನಿ ಎರಡು ವಾರ್ಡ್‌ಗಳಿಗೆ ಎಸಿಸಿ ಕಂಪನಿಯೇ ನೀರು ಸರಬರಾಜು ಮಾಡುತ್ತದೆ. ರೈಲ್ವೆ ಕಾಲೋನಿ ಬಡಾವಣೆಗೆಡ ರೈಲ್ವೆ ಇಲಾಖೆಯೇ ನೀರು ಪೂರೈಸುತ್ತದೆ. ಪುರಸಭೆ ಆಡಳಿತ, ಎಸಿಸಿ ಕಂಪನಿ ಹಾಗೂ ರೈಲ್ವೆ ಇಲಾಖೆಗಳಿಗೆ ಕುಂದನೂರಿನ ಭೀಮಾ ಮತ್ತು ಇಂಗಳಗಿ ಕಾಗಿಣಾ ನದಿಗಳೇ ಜಲಮೂಲಗಳಾಗಿದೆ.

ಆದರೆ, ಈಗ ಈ ಎರಡೂ ನದಿಗಳಲ್ಲಿ ನೀರಿನ ಪ್ರಮಾಣ ಸಂಪೂರ್ಣ ಕುಸಿದಿದ್ದು, ಕೇವಲ ಹತ್ತು ದಿನಕ್ಕಾಗುವಷ್ಟು ನೀರು ಮಾತ್ರ ಉಳಿದುಕೊಂಡಿದೆ. ತುಂಬಾ ತಡವಾಗಿ ಜಲಸಂರಕ್ಷಣೆಗೆ ಮುಂದಾಗಿರುವ ಪುರಸಭೆ ಆಡಳಿತ, ನೀರು ಮಿತವಾಗಿ ಬಳಸುವಂತೆ ಪ್ರಕಟಣೆ ಹೊರಡಿಸಿದೆ. ಸೋಮವಾರ (ಫೆ.04)ದಿಂದ ಪಟ್ಟಣದಲ್ಲಿ ಆಟೋ ಪ್ರಚಾರಕ್ಕೆ ಚಾಲನೆ ನೀಡಿರುವ ಪುರಸಭೆ ಅಧಿಕಾರಿಗಳು, ನದಿಯಲ್ಲಿ ನೀರಿಲ್ಲ. ಬಳಕೆಯಲ್ಲಿ ಎಚ್ಚರವಿರಲಿ ಎಂದು ಮನವಿ ಮಾಡುತ್ತಿದ್ದಾರೆ. ಕುಂದನೂರು ಭೀಮಾ ನದಿಪಾತ್ರದಲ್ಲಿ ನೀರಿಲ್ಲವಾಗಿದ್ದು, ಆಟದ ಮೈದಾನದಂತೆ ಗೋಚರಿಸುತ್ತಿದೆ.

ಪುರಸಭೆಗೆ ಸೇರಿದ ಜಾಕ್‌ವೆಲ್‌ ಸ್ಥಳದಲ್ಲಿ ಶೇಖರಣೆಯಾಗಿರುವ ನೀರು ಯಾತಕ್ಕೂ ಸಾಲದಂತಿದೆ. ನೀರಿನಲ್ಲಿ ಮುಳುಗಿರಬೇಕಿದ್ದ ಜಾಕ್‌ವೆಲ್‌ ಬಾವಿ ಹೊರಮುಖವಾಗಿ ಗೋಚರಿಸುತ್ತಿದ್ದು, ನೀರಿನ ಹಾಹಾಕಾರ ಸೃಷ್ಟಿಯಾಗುವ ಸಂದೇಶ ನೀಡುತ್ತಿದೆ. ಪಟ್ಟಣದ ವಿವಿಧ ಬಡಾವಣೆಯಲ್ಲಿರುವ ಬಾವಿ ಮತ್ತು ಕೊಳವೆಗಳನ್ನು ದುರಸ್ತಿಗೆ ಮುಂದಾಗಬೇಕಿದ್ದ ಆಡಳಿತ, ನೀರಡಿಕೆಯಾದ ಬಾವಿ ತೋಡಿದ್ದರಾಯ್ತು ಎಂಬ ಧೋರಣೆಗೆ ಗಂಟುಬಿದ್ದು, ಜನರ ಆಕ್ರೋಶಕ್ಕೆ ಗುರಿಯಾಗಿದೆ. ಅಕಾರಿಗಳು ಹಾಗೂ ಜನಪ್ರತಿನಿಗಳು ಎಚ್ಚೆತ್ತುಕೊಳ್ಳದಿದ್ದರೆ ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳಲಿದೆ.

ನದಿಯಲ್ಲಿ ಸಂಪೂರ್ಣ ನೀರು ಬತ್ತಿದ್ದರಿಂದ ವಾಡಿ ಪಟ್ಟಣದಲ್ಲಿ ಸದಸ್ಯ ನಾಲ್ಕು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ. ಜಲಮಂಡಳಿ ಅಧಿಕಾರಿಗಳೊಂದಿಗೆ ನದಿಗೆ ಭೇಟಿ ನೀಡಿ ನೀರಿನ ಪ್ರಮಾಣ ತಿಳಿದುಕೊಳ್ಳಲಾಗಿದೆ. ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರನ್ನು ಕಾಗಿಣಾ ನದಿಗೆ ಹರಿಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದೇವೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಬರ ನಿರ್ವಹಣೆ ಯೋಜನೆಯಡಿ ಪುರಸಭೆಗೆ ಈಗಾಗಲೇ 30 ಲಕ್ಷ ರೂ. ಹಾಗೂ ನದಿಯಲ್ಲಿ ರಿಂಗ್‌ಬೌಂಡ್‌ ನಿರ್ಮಿಸಲು 5 ಲಕ್ಷ ರೂ. ಬಿಡುಗಡೆಯಾಗಿದೆ. ಜನರಿಗೆ ನೀರಿನ ತೊಂದರೆಯಾಗದಂತೆ ಎಚ್ಚರಿಕೆ ವಹಿಸುವಂತೆ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಆದೇಶ ನೀಡಿದ್ದಾರೆ. ಸಾರ್ವಜನಿಕರು ನೀರು ಪೋಲಾಗದಂತೆ ಎಚ್ಚರಿಕೆ ವಹಿಸಬೇಕು.
ಮೈನಾಬಾಯಿ ರಾಠೊಡ, ಅಧ್ಯಕ್ಷರು, ವಾಡಿ ಪುರಸಭೆ.
ವಿಠuಲ ಹಾದಿಮನಿ, ಮುಖ್ಯಾಧಿಕಾರಿ

•ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.