ನೀರಿನ ಸಮಸ್ಯೆ ವಿಪರೀತ


Team Udayavani, Feb 12, 2019, 8:29 AM IST

gul-5.jpg

ಚಿಂಚೋಳಿ: ತಾಲೂಕಿನ ಅತಿ ಹಿಂದುಳಿದ ಪ್ರದೇಶಗಳಾದ ರುಮ್ಮನಗೂಡ, ಪಸ್ತಪುರ ಗ್ರಾಪಂಗಳ ವ್ಯಾಪ್ತಿಯ 14 ಗ್ರಾಮಗಳಲ್ಲಿ ಇದೀಗ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ. ದೂರದ ಗ್ರಾಮಗಳಿಗೆ ತೆರಳಿ ತಲೆ ಮೇಲೆ ಕೊಡ ಹೊತ್ತುಕೊಂಡು ನೀರು ಪರಿಸ್ಥಿತಿ ಉಂಟಾಗಿದ್ದರು ಸಹ ಅಧಿಕಾರಿಗಳ ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದು ಗ್ರಾಮಸ್ಥರು ದೂರುತ್ತಿದ್ದಾರೆ.

ತಾಲೂಕಿನ ರುಮ್ಮನಗೂಡ ಮತ್ತು ಪಸ್ತಪುರ, ಚಂದನಕೇರಾ, ಚೆಂಗಟಾ, ಖಾನಾಪುರ, ಭೂಯಾರ(ಬಿ), ಕೊಟಗಾ, ರಾಣಾಪುರ, ಸಾಸರಗಾಂವ ಗ್ರಾಮಗಳು ಸೇರಿದಂತೆ ಸುತ್ತಲಿನ ತಾಂಡಾಗಳಿಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಕಳೆದ 10 ವರ್ಷಗಳ ಹಿಂದೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅಡಿ 19 ಕೋಟಿ ರೂ. ಖರ್ಚು ಮಾಡಿ ಗ್ರಾಮ ಮತ್ತು ತಾಂಡಾಗಳಲ್ಲಿ ಪೈಪ್‌ಲೈನ್‌ ಮಾಡಲಾಗಿತ್ತು. ಆದರೆ ಕೆಲವು ಗ್ರಾಮಗಳಲ್ಲಿ ಪೈಪ್‌ಗ್ಳು ಒಡೆದು ಹೋಗಿವೆ. ಅಲ್ಲದೇ ಕೆಲವು ಗ್ರಾಮಗಳಲ್ಲಿ ಪೈಪ್‌ಗ್ಳು ಕಿತ್ತು ಹೋಗಿವೆ. ಹೀಗಾಗಿ ಜನರಿಗೆ ಸಮರ್ಪಕವಾಗಿ ಶುದ್ಧ ನೀರು ಪೂರೈಕೆಯಾಗುತ್ತಿಲ್ಲ. ರುಮ್ಮನಗೂಡ ಗ್ರಾಮದ ಎಲ್ಲ ಓಣಿಗಳಲ್ಲಿ ಪೈಪ್‌ಲೈನ್‌ ಮಾಡಲಾಗಿದೆ. ಆದರೆ ಪೈಪ್‌ಗ್ಳು ಕೆಲವು ಕಡೆಗಳಲ್ಲಿ ಕಿತ್ತು ಹೋಗಿವೆ. ಕಳೆದ ಒಂದು ತಿಂಗಳಿಂದ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ ಎಂದು ಪಿಡಿಒ ಮತ್ತು ತಾಪಂ ಅಧಿಕಾರಿಗಳಿಗೆ ಅಲ್ಲದೇ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು ಸಹ ಗ್ರಾಮಸ್ಥರು ಅನುಭವಿಸುತ್ತಿರುವ ಸಮಸ್ಯೆ ಯಾರು ಕೇಳುತ್ತಿಲ್ಲ ಎಂದು ಗ್ರಾಪಂ ಸದಸ್ಯ ವೀರಾರೆಡ್ಡಿ ಪಾಟೀಲ ಬೇಸರ ವ್ಯಕ್ತಪಡಿಸಿದ್ದಾರೆ.

ರುಮ್ಮನಗೂಡ, ಗಂಜಗಿರಿ, ತಾಡಪಳ್ಳಿ, ಹೂವಿನಬಾವಿ, ಹುಲಿ ತಾಂಡಾಗಳಲ್ಲಿ ಕುಡಿಯುವ ನೀರಿನ ಪೂರೈಸುವ ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಇದರಿಂದ ಬಹಳಷ್ಟು ತೊಂದರೆಯಾಗುತ್ತಿದೆ. ಕೊಳವೆಬಾವಿ ದುರಸ್ತಿ ಮಾಡಬೇಕು. ಅಲ್ಲದೇ ಟ್ಯಾಂಕರ್‌ ಮೂಲಕ ನೀರು ಪೂರೈಸಬೇಕು ಎಂದು ಗ್ರಾಮಸ್ಥರು ಚಿಂಚೋಳಿ ಪಟ್ಟಣದಲ್ಲಿ ಖಾಲಿ ಕೊಡಗಳೊಂದಿಗೆ ಪ್ರತಿಭಟನೆ ನಡೆಸಿದರೂ ಇನ್ನುವರೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ ಎಂದು ಗ್ರಾಮಸ್ಥ ಸೂರ್ಯಕಾಂತ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರುಮ್ಮನಗೂಡ ಸುತ್ತಲು ನೀರಿನ ಸಮಸ್ಯೆ ಉಂಟಾಗಿರುವುದರಿಂದ ಸಾಸರಗಾಂವದಿಂದ ಜನರು ತಲೆ ಮತ್ತು ವಾಹನಗಳ ಮೇಲೆ ನೀರು ತರುವಂತಾಗಿದೆ. ಹಳ್ಳಿಯಲ್ಲಿ ಮಹಿಳೆಯರು ಕೇವಲ ನೀರು ತರುವುದಕ್ಕಾಗಿ ಸಮಯ ಮೀಸಲಿಡುವಂತಾಗಿದೆ. ದನಕರುಗಳನ್ನು 5 ಕಿಮೀ ದೂರದಲ್ಲಿರುವ ಕೋಡ್ಲಿ ಅಲ್ಲಾಪುರ ಕೆರೆಗೆ ನೀರು ಕುಡಿಸುವುದಕ್ಕಾಗಿ ಹೊಡೆದುಕೊಂಡು ಹೋಗಬೇಕಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಳ್ಳುತ್ತಿದ್ದಾರೆ.

ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದರು ಸಹ ಶಾಸಕ ಡಾ| ಉಮೇಶ ಜಾಧವ ನಮ್ಮ ಗ್ರಾಮಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಕೇಳಿಲ್ಲ ಎಂದು ಜನರು ದೂರುತ್ತಿದ್ದಾರೆ.

ತಹಶೀಲ್ದಾರ್‌, ತಾಪಂ ಅಧಿಕಾರಿ ಇನ್ನಿತರ ಇಲಾಖೆ ಅಧಿಕಾರಿಗಳು ತಾಲೂಕಿನ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಬಿಜೆಪಿ ಮುಖಂಡ ಭೀಮಶೆಟ್ಟಿ ಮುಕ್ಕಾ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

10 ವರ್ಷಗಳ ಹಿಂದೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅಡಿ 19 ಕೋಟಿ ರೂ. ಖರ್ಚು ಮಾಡಿ ಗ್ರಾಮ ಮತ್ತು ತಾಂಡಾಗಳಲ್ಲಿ ಪೈಪ್‌ಲೈನ್‌ ಮಾಡಲಾಗಿತ್ತು. ಆದರೆ ಕೆಲವು ಗ್ರಾಮಗಳಲ್ಲಿ ಪೈಪ್‌ಗ್ಳು ಒಡೆದು ಹೋಗಿವೆ. ಅಲ್ಲದೇ ಕೆಲವು ಗ್ರಾಮಗಳಲ್ಲಿ ಪೈಪ್‌ಗ್ಳು ಕಿತ್ತು ಹೋಗಿವೆ. ಹೀಗಾಗಿ ಜನರಿಗೆ ಸಮರ್ಪಕವಾಗಿ ಶುದ್ಧ ನೀರು ಪೂರೈಕೆಯಾಗುತ್ತಿಲ್ಲ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.