ಗಣಿಗಾರಿಕೆಯಿಂದ ಪರಿಸರಕ್ಕೆ ಆಗದಿರಲಿ ಧಕ್ಕೆ


Team Udayavani, Feb 15, 2019, 6:00 AM IST

gul-1.jpg

ಕಲಬುರಗಿ: ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆಯಲ್ಲಿ ಅತಿ ಹೆಚ್ಚು ಗಣಿಗಾರಿಕೆಗೆ ಪರವಾನಗಿ ನೀಡಲಾಗಿದೆ. ಗಣಿ ಗುತ್ತಿಗೆ ಪಡೆದವರು ಪರಿಸರ ಹಾಳು ಮಾಡದಂತೆ ಎಚ್ಚರಿಕೆ ವಹಿಸಿ ಗಣಿಗಾರಿಕೆಯಲ್ಲಿ ತೊಡಗಬೇಕಾದ ಅವಶ್ಯಕತೆಯಿದೆ ಎಂದು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ ಹೇಳಿದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಜಿಲ್ಲಾಧಿಕಾರಿ ಕಾರ್ಯಾಲಯ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಗಣಿ ಗುತ್ತಿಗೆ ಪಡೆದವರಿಗೆ ಗಣಿ-ಭೂವಿಜ್ಞಾನ ಇಲಾಖೆ ಕಾಯ್ದೆ ಮತ್ತು ನಿಯಮ, ಗಣಿ ಸುರಕ್ಷತೆ ವಿಧಾನ, ಸ್ಫೋಟಕ ವಿಧಾನ ಮತ್ತು ಪರಿಸರ ಸಂರಕ್ಷಣೆ ಕುರಿತು ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆ ಸಮನಾಗಿ ಕಾಪಾಡಿಕೊಳ್ಳುವುದು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಕಲಬುರಗಿ ವಿಭಾಗದಲ್ಲಿ ಹೆಚ್‌.ಕೆ.ಆರ್‌.ಡಿ.ಬಿ.ಯಿಂದ ಭೃಹತ್‌ ಕಾಮಗಾರಿಗಳನ್ನು ಹಮ್ಮಿಕೊಂಡಿದ್ದು, ಅವುಗಳಿಗೆ ಅವಶ್ಯಕವಿರುವ ಮರಳು, ಜೆಲ್ಲಿ, ಕಲ್ಲುಗಳಂತಹ ಗಣಿಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ. 

ಗಣಿ ಗುತ್ತಿಗೆ ಪಡೆದವರು ಗಣಿ ಮತ್ತು ಭೂ ವಿಜ್ಞಾನಗಳ ಅಧಿನಿಯಮ ಪರಿಪಾಲಿಸಬೇಕು. ಈ ಹಿಂದೆ ಪರಿಸರಕ್ಕೆ ಸಂಬಂಧಪಟ್ಟ ಕಾಳಜಿ ಕಡಿಮೆ ಇತ್ತು. ಇತ್ತೀಚೆಯ ಎರಡು ದಶಕಗಳಿಂದ ಪರಿಸರ ಜಾಗೃತಿ ಹೆಚ್ಚಾಗಿದ್ದು, ವಿವಿಧ ಸಂಸ್ಥೆಗಳು ಪರಿಸರ ಸಂರಕ್ಷಣೆಯಲ್ಲಿ ತೊಡಗಿವೆ. ರಾಷ್ಟ್ರೀಯ ಹಸಿರು ಟ್ರಿಬುನಲ್‌ ಸಹಿತ ಪರಿಸರಕ್ಕೆ ಹಾನಿ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುತ್ತಿದೆ ಎಂದರು. 

ಜಿಲ್ಲೆಯಲ್ಲಿ 16 ಬೃಹತ್‌ ಮತ್ತು 180 ಸಣ್ಣ ಗಣಿ ಗುತ್ತಿಗೆಗೆ ಪರವಾನಗಿ ನೀಡಲಾಗಿದೆ. ಗಣಿ ಗುತ್ತಿಗೆ ಪಡೆದವರು ಗಣಿ ನಿಯಮ ಪಾಲಿಸದಿದ್ದಲ್ಲಿ ಗಣಿ ನಿಯಮಗಳ ತಿದ್ದುಪಡಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ವಹಿಸಲಾಗುವುದು. ಜಿಲ್ಲೆಯಲ್ಲಿ ಮರಳು ಗಣಿಗಾರಿಕೆ ಸೂಕ್ತ ರೀತಿಯಲ್ಲಿ ಕೈಗೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ನ್ಯಾಯಯುತವಾಗಿ ಮರಳು ಗಣಿಗಾರಿಕೆ ಮಾಡುವವರಿಗೆ ಯಾವುದೇ ತೊಂದರೆಯಿಲ್ಲ.

ಅಕ್ರಮ ಮರಳು ಸಾಗಾಣಿಕೆ ತಡೆಯಲು ಕಟ್ಟಿಸಂಗಾವಿ ಹತ್ತಿರ ಚೆಕ್‌ಪೋಸ್ಟ್‌ ನಿರ್ಮಿಸಲಾಗಿದ್ದು, ದೇವದುರ್ಗ, ಶಹಾಪುರ ಕಡೆಗಳಿಂದ ಜಿಲ್ಲೆಗೆ ಆಗಮಿಸುವ ಮರಳಿನ ಮೇಲೆ ನಿಗಾ ಇಡಲಾಗಿದೆ ಎಂದರು.

ಬಳ್ಳಾರಿ ವಲಯದ ಮೈನ್ಸ್‌ ಸೇಫ್ಟ ನಿರ್ದೇಶಕ ಮನೀಶ ಮುರುಕುಟೆ ಮಾತನಾಡಿ, ಗಣಿ ವ್ಯವಸ್ಥಾಪಕರು ಗಣಿಯಲ್ಲಿ ಸಣ್ಣ ಪ್ರಮಾಣದ  ಸ್ಪೋಟಕ ಬಳಸಲು ಸಶಕ್ತರಾಗಿರುತ್ತಾರೆ. 33 ಮಿಲಿ ಮೀಟರ್‌ ವ್ಯಾಸ ಹಾಗೂ ಎರಡು ಮೀಟರ್‌ಗಿಂತ ಹೆಚ್ಚಿನ ಆಳದಲ್ಲಿ ಸ್ಪೋಟಕ ಬಳಸುವವರು ಡಿ.ಜಿ.ಎಂ. ಎಸ್‌.ದಿಂದ ವಿಶೇಷ ಪರವಾನಗಿ ಪಡೆಯಬೇಕು. ಪರವಾನಗಿ ಇಲ್ಲದೇ ಸ್ಪೋಟಕ ಬಳಸುವುದು ಗಂಭೀರ ಅಪರಾಧವಾಗಿದೆ ಎಂದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪಿ. ರೇಣುಕಾದೇವಿ, ಭೂ ವಿಜ್ಞಾನಿಗಳು, ಗಣಿ ಗುತ್ತಿಗೆ ಪಡೆದವರು ಹಾಜರಿದ್ದರು. ಪರವಾನಗಿ ಕಡ್ಡಾಯ ದೇಶದಲ್ಲಿ 89 ತರಹದ ಖನಿಜಗಳ ಗಣಿಗಾರಿಕೆ ನಡೆಯುತ್ತಿದೆ. ದೇಶದ ಒಟ್ಟು ದೇಶಿಯ ಉತ್ಪಾದನೆಯ ಶೇ. 2.5ರಷ್ಟು ಭಾಗ ಖನಿಜ ಗಣಿಗಾರಿಕೆಯದ್ದಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಬಳ್ಳಾರಿಯ ಡಿ.ಜಿ.ಎಂ.ಎಸ್‌. ಕಚೇರಿಯಿಂದ 13 ಲೈಮ್‌ ಸ್ಟೋನ್‌ ಹಾಗೂ ಎರಡು ಸ್ಟೋನ್‌ ಪಾಲಿಶ್‌ ಗಣಿಗಾರಿಕೆಗೆ ಪರವಾನಗಿ ನೀಡಲಾಗಿದೆ. ಪರವಾನಗಿ ಪಡೆದ ಗಣಿಗಳ ಮೇಲೆ ಡಿ.ಜಿ.ಎಂ.ಎಸ್‌. ಕಚೇರಿ ಕಾಲಕಾಲಕ್ಕೆ ತಪಾಸಣೆ ಕೈಗೊಂಡು ಪರಿಶೀಲಿಸುತ್ತದೆ. ಪರವಾನಗಿ ಪಡೆಯದ ಗಣಿಗಳ ಮೇಲೆ ರಾಜ್ಯ ಸರ್ಕಾರ ರಾಜ್ಯದ ಖನಿಜ ಕಳುವು ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳುತ್ತದೆ. ಕಾರಣ ಗಣಿಗಾರಿಕೆಯಲ್ಲಿ ತೊಡಗಿರುವ ಎಲ್ಲರೂ ಕಡ್ಡಾಯವಾಗಿ ಪರವಾನಗಿ ಪಡೆಯಬೇಕು.  ಮನೀಶ ಮುರುಕುಟೆ, ಬಳ್ಳಾರಿ ವಲಯದ ಮೈನ್ಸ್‌ ಸೇಫ್ಟಿ ನಿರ್ದೇಶಕ 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.