ಮುಲ್ಲಾಮಾರಿ ನೀರು ಸೇಡಂಗ
Team Udayavani, Feb 15, 2019, 6:38 AM IST
ಚಿಂಚೋಳಿ: ತಾಲೂಕಿನ ಕೆಳದಂಡೆ ಮುಲ್ಲಾಮಾರಿ ಜಲಾಶಯದಿಂದ ಹರಿ ಬಿಡಲಾಗಿದ್ದ ನೀರು ಸೇಡಂ ಪಟ್ಟಣಕ್ಕೆ ಇನ್ನೆರಡು ದಿನಗಳಲ್ಲಿ ತಲುಪಲಿವೆ ಎಂದು ಯೋಜನೆ ಎಇಇ ವಿಕಾಸರಾವ್ ಕುಲಕರ್ಣಿ ತಿಳಿಸಿದ್ದಾರೆ.
ಚಿಂಚೋಳಿ ಮತ್ತು ಸೇಡಂ ತಾಲೂಕಿನ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾದ ಹಿನ್ನಲೆಯಲ್ಲಿ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿ ಆದೇಶದ ಮೇರೆಗೆ ನಾಗರಾಳ ಗ್ರಾಮದ ಬಳಿ ಇರುವ ಕೆಳದಂಡೆ ಮುಲ್ಲಾಮಾರಿ ಜಲಾಶಯದಿಂದ ಫೆ.7ರಂದು ಒಂದು ಗೇಟು ಮೇಲೆತ್ತಿ ಪ್ರತಿನಿತ್ಯ 275 ಕ್ಯೂಸೆಕ್ ನೀರು ಬಿಡಲಾಗಿದೆ.
ಹೀಗಾಗಿ ಕನಕಪುರ, ಗೌಡನಹಳ್ಳಿ, ನಿಮಾಹೊಸಳ್ಳಿ, ಚಂದಾಪುರ, ಗರಗಪಳ್ಳಿ, ಸೇಡಂ ತಾಲೂಕಿನ ಲಾವಾಡಿ ಬ್ಯಾರೇಜ್ಗಳಲ್ಲಿ ಹೆಚ್ಚು ನೀರಿನ ಸಂಗ್ರಹವಾಗಿದೆ. ಇದರಿಂದ ಬೇಸಿಗೆ ದಿನಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಉಪಯೋಗ ಆಗಲಿದೆ. ಅಲ್ಲದೆ ಬಾವಿ, ಕೊಳವೆಬಾವಿಗಳಲ್ಲಿ ಅಂರ್ತಜಲ ಹೆಚ್ಚಳ ಅಗಲಿದೆ ಎಂದು ತಿಳಿಸಿದ್ದಾರೆ. ಜಲಾಶಯದಲ್ಲಿ ನೀರಿನ ಸಂಗ್ರಹ ಹೆಚ್ಚು ಇರುವುದರಿಂದ ಯಾವುದೇ ಸಮಸ್ಯೆ ಇಲ್ಲ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿಯೂ ನೀರು ಹರಿ ಬಿಡಬಹುದಾಗಿದೆ.
ಮುಲ್ಲಾಮಾರಿ ನದಿಗೆ ನೀರು ಹರಿದು ಬಿಟ್ಟಿದ್ದರಿಂದ ಬತ್ತಿದ್ದ ಪಂಚಲಿಂಗೇಶ್ವರ ಬುಗ್ಗಿಯಲ್ಲಿ ನೀರು ಹರಿಯುತ್ತಿದೆ. ನದಿ ದಂಡೆಯಲ್ಲಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್