ಉಗ್ರರಿಗೆ ಕಂಡಲ್ಲಿ ಗುಂಡಿಕ್ಕಿ
Team Udayavani, Feb 17, 2019, 7:57 AM IST
ಶಹಾಬಾದ: ದೇಶ ವಿರೋಧ ಚಟುವಟಿಕೆ ನಡೆಸುವ ಉಗ್ರರ ಮೇಲೆ ಕಂಡಲ್ಲಿ ಗುಂಡಿಕ್ಕುವ ಆದೇಶ ಹೊರಡಿಸಬೇಕು ಎಂದು ಶರಣಬಸವೇಶ್ವರ ಜ್ಞಾನ ವಿಕಾಸ ಪೀಠ ಸಂಸ್ಥೆ ಕಾರ್ಯದರ್ಶಿ ಭೀಮಾಶಂಕರ ಮುತ್ತಟ್ಟಿ ಆಗ್ರಹಿಸಿದರು.
ಜಮ್ಮು ಕಾಶ್ಮೀರಲ್ಲಿ ಉಗ್ರರು ನಡೆಸಿದ ದಾಳಿ ಖಂಡಿಸಿ ಶರಣಬಸವೇಶ್ವರ ಜ್ಞಾನ ವಿಕಾಸ ಪೀಠ ಸಂಸ್ಥೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹಲವಾರು ವರ್ಷಗಳಿಂದಲೂ ಪಾಕಿಸ್ತಾನದ ಉಗ್ರ ಸಂಘಟನೆಗಳು ದೇಶದ ಸೈನಿಕರ ಮೇಲೆ ಅಟ್ಟಹಾಸ ಮೆರೆಯುತ್ತಿವೆ. ಇದರ ಪರಿಣಾಮ ಸೈನಿಕರು ಜೀವ ಕಳೆದುಕೊಳ್ಳುತ್ತಿದ್ದಾರೆ. ಇವರನ್ನೇ ನಂಬಿ ಜೀವನ ಸಾಗಿಸುತ್ತಿರುವ ಕುಟುಂಬಗಳು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ. ಪ್ರಪಂಚದ ಎಲ್ಲ ದೇಶಗಳನ್ನು ಭಯೋತ್ಪಾದನೆ ಭೂತ ಬೆನ್ನತ್ತಿ ಕಾಡುತ್ತಿದ್ದರೂ ಹತ್ತಿಕ್ಕುವ ಕೆಲಸಗಳು ಆಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.
ಪದವಿ ಕಾಲೇಜಿನ ಪ್ರಾಚಾರ್ಯ ಚಂದ್ರಶೇಖರ, ಶಕುಂತಲಾ ಹೋಳಿ, ಬಿ.ಎಚ್. ಹೊಸಕೇರಿ, ಪ್ರೌಢಶಾಲೆ ಮುಖ್ಯಶಿಕ್ಷಕಿ ಸಾವಿತ್ರಿ ಕಾಡಲೂರ, ಪ್ರಾಥಮಿಕ ಮುಖ್ಯಶಿಕ್ಷಕಿ ಮೀನಾಕ್ಷಿ, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದರು.
ಎಸ್.ಜಿ.ವರ್ಮಾ ಶಾಲೆ: ಶಿಕ್ಷಕ ಶರಣು ತುಂಗಳ ಮಾತನಾಡಿ, ಕಾಶ್ಮೀರದ ಫುಲ್ವಾಮಾದಲ್ಲಿ ನಡೆದ ದಾಳಿಯನ್ನು ಖಂಡಿಸಿ, ಉಗ್ರರಿಗೆ ಪಾಠ ಕಲಿಸಬೇಕು ಎಂದು ಹೇಳಿದರು.
ಮುಖ್ಯಶಿಕ್ಷಕಿ ದಮಯಂತಿ ಸೂರ್ಯವಂಶಿ, ಶಿಕ್ಷಕರಾದ ಚನ್ನಬಸಪ್ಪ ಕೊಲ್ಲೂರ, ಮಹೇಶ್ವರಿ ಗುಳಿಗಿ, ವಿಜಯಲಕ್ಷ್ಮೀ ವೆಂಕಟೇಶ, ರಾಜೇಶ್ವರಿ ಎಂ., ಗೀತಾ ಪುಂಡಲಿಕ್, ಸಲಿನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ