ಮೋದಿ ಕಲಬುರಗಿಗೆ ಬರಲಿ ಉತ್ತರ ಕೊಡುವೆ…


Team Udayavani, Feb 22, 2019, 6:21 AM IST

gul-1.jpg

ಕಲಬುರಗಿ: ಕಲಬುರಗಿ ನನ್ನ ನಾಡು. ಕಲಬುರಗಿ ಜನರೇ ನನ್ನನ್ನು ಬೆಳೆಸಿದ್ದಾರೆ. 11 ಚುನಾವಣೆಯಲ್ಲಿ ಗೆಲ್ಲಿಸಿದ್ದಾರೆ. ಮುಂದೆಯೂ ನನ್ನನ್ನು ಗೆಲ್ಲಿಸುತ್ತಾರೆ. ಕಲಬುರಗಿ ಬಿಟ್ಟು ಬೇರೆ ಕಡೆಗೆ ಸ್ಪರ್ಧಿಸುವ ಪ್ರಶ್ನೆಯೇ ಉದ್ಭವಿಸಲ್ಲ. ಕೋಲಾರದಿಂದ ಸ್ಪರ್ಧಿಸುತ್ತೇನೆ ಎಂಬುದೆಲ್ಲಾ ಸುಳ್ಳು ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಹೇಳಿದ್ದಕ್ಕೆಲ್ಲ ಸಂಸತ್‌ನಲ್ಲಿ ಇಷ್ಟು ದಿನ ಉತ್ತರ ಕೊಟ್ಟಿದ್ದೇನೆ. ಸಂಸತ್‌ನಲ್ಲಿ ಕಲಬುರಗಿ ಜನರ ಹೆಸರು ಎತ್ತಿ ಹಿಡಿಯುವ ಕೆಲಸ ಮಾಡಿದ್ದೇನೆ. 

ಮುಂದಿನ ತಿಂಗಳು ಪ್ರಧಾನಿ ಮೋದಿ ಕಲಬುರಗಿಗೆ ಬರುತ್ತಾರೆ. ಆಗ ಏನು ಹೇಳುತ್ತಾರೋ ನೋಡಿ ಮತ್ತೆ ನಾನು ಉತ್ತರ ಕೊಡುತ್ತೇನೆ. ಕಳೆದ ಬಾರಿ ಕೂಡ ಮೋದಿ ಇಲ್ಲಿಗೆ ಬಂದು ಭಾಷಣ ಮಾಡಿ ಹೋದರು. ಈ ಸಲವೂ ಅವರು ಬಂದು ಭಾಷಣ ಮಾಡುತ್ತಾರೆ. ಅವರ ಭಾಷಣ ಎಲ್ಲರೂ ಕೇಳಿ. ಭಾಷಣ ಕೇಳಲು ನಾನು ಬೇಡ ಎನ್ನಲ್ಲ. ಎಲ್ಲರ ಭಾಷಣವನ್ನೂ ಕೇಳಬೇಕು. ನಿಮಗೆ ತಿಳಿದಿದ್ದು ಮಾಡಬೇಕು ಎಂದರು.

1951ರಲ್ಲಿ ದೇಶದ ಪರಿಸ್ಥಿತಿ ಹೇಗಿತ್ತು. 2011ರಲ್ಲಿ ಪರಿಸ್ಥಿತಿ ಹೇಗಾಯಿತು. ನೆಹರೂ, ಲಾಲ್‌ಬಹುದ್ದೂರ ಶಾಸ್ತ್ರಿ. ಇಂದಿರಾ ಗಾಂಧಿ, ಪಿ.ವಿ. ನರಸಿಂಹರಾವ್‌, ಮನಮೋಹನ್‌ಸಿಂಗ್‌ ಏನು ಮಾಡಿದರು ಎಂದು ಅಂಕಿ-ಅಂಶಗಳ ಸಮೇತ ನಾನು ಸಂಸತ್‌ನ ಮುಂದೆ ಇಟ್ಟಿದ್ದೇನೆ. ಸಂಸತ್‌ನಲ್ಲಿ ನಾನು ಕೇಳಿದ ಪ್ರಶ್ನೆಗಳಿಗೆ ಪ್ರಧಾನಿ ಮೋದಿ ಉತ್ತರಿಸಲ್ಲ ಎಂದರು. 

ಪ್ರತಿ ವರ್ಷ ಎರಡು ಕೋಟಿ ನೌಕರಿ ಕೊಡುತ್ತೇನೆ ಎಂದು ಹೇಳಿದ್ದರು. ಆದರೆ, ಕೇಂದ್ರ ಸರ್ಕಾರದ ನ್ಯಾಷನಲ್‌ ಸ್ಯಾಂಪಲ್‌ ಅರ್ಗನೈಸೇಷನ್‌ ಸರ್ವೆ (ಎನ್‌ಎಸ್‌ಒಎಸ್‌) ಪ್ರಕಾರವೇ ನಾಲ್ಕೂವರೆ ವರ್ಷ ಕೇವಲ 27 ಲಕ್ಷ ಜನರಿಗೆ ಉದ್ಯೋಗ ಸಿಕ್ಕಿದೆ. 38 ಲಕ್ಷ ಜನ ಇದ್ದ ನೌಕರಿಗಳನ್ನೇ ಕಳೆದುಕೊಂಡಿದ್ದಾರೆ. ಇದು ಐದು ವರ್ಷದಲ್ಲಿ 10 ಕೋಟಿ ಉದ್ಯೋಗ ಕೊಡುತ್ತೇವೆ ಎಂದು ಹೇಳಿದವರ ಕತೆಯಾಗಿದೆ. ಕೇಂದ್ರದಲ್ಲಿ 25 ಲಕ್ಷ ಹುದ್ದೆಗಳು ಖಾಲಿ ಇವೆ. ಈ 25 ಲಕ್ಷ ಹುದ್ದೆಗಳನ್ನಾದರೂ ಭರ್ತಿ ಮಾಡಿದ್ದರೆ ಯುವಕರಿಗೆ ಉದ್ಯೋಗ ಸಿಗುತ್ತಿತ್ತು. ಬಂಡವಾಳ, ಕಂಪನಿಗಳನ್ನು ತಂದು ನೌಕರಿ ಕೊಡಿಸುವ ಕೆಲಸವೂ ಆಗಲಿಲ್ಲ ಎಂದರು.

550 ಕೋಟಿ ತುಂಬಿ, ಇಲ್ಲವೇ ಜೈಲಿಗೆ ಹೋಗಿ ಎಂದು ಅನಿಲ ಅಂಬಾನಿಗೆ ಸುಪ್ರೀಂ ಕೋರ್ಟ್‌ ತಾಕೀತು ಮಾಡಿದೆ. ಇಂಥವರಿಗೆ ಮೋದಿ ಬೆಂಬಲವಾಗಿ ನಿಲ್ಲುತ್ತಾರೆ. ನೋಟ್‌ ಬ್ಯಾನ್‌ನಿಂದ ಭಯೋತ್ಪಾದನೆ, ಕಪ್ಪುಹಣ ಸ್ಥಗಿತವಾಗುತ್ತಿದೆ ಎಂದು ಹೇಳಿದ್ದರು. ಆದರೆ, ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ 44 ಸಿಆರ್‌ಪಿಎಫ್‌ ಯೋಧರು ಹುತಾತ್ಮರಾದರು. ಎಲ್ಲರೂ ಒಗ್ಗೂಡಿ ದೇಶದ ರಕ್ಷಣೆಗೆ ಹೋರಾಡಬೇಕು. ಸರ್ಕಾರಕ್ಕೂ ಪ್ರತಿಪಕ್ಷಗಳ ಸಾಥ್‌ ಕೊಡುತ್ತವೆ. ಇಂದಿರಾ ಗಾಂಧಿ ಪಾಕಿಸ್ತಾನ ವಿರುದ್ಧ ಯುದ್ಧ ಮಾಡಿ ಬಾಂಗ್ಲಾದೇಶವನ್ನು ವಿಮೋಚನೆಗೊಳಿಸಿದರು. ಆ ರೀತಿ ಇವರೇನಾದರೂ ಮಾಡಿದ್ರಾ? ಸುಮ್ಮನೆ ಅದು ಬಿಟ್ಟು ನೋಟ್‌ಬ್ಯಾನ್‌ನಿಂದ ಭಯೋತ್ಪಾದನೆ ನಿಂತಿತು ಎಂದು ಹೇಳುತ್ತಾರೆ. ಸುಳ್ಳು ಹೇಳುವವರಿಗೆ ಮೋಸ ಹೋಗಬೇಡಿ ಎಂದರು.

ಪ್ರಧಾನಿಮೋದಿಗೆ ವಚನದ ಚಾಟಿ ಏಟು
ಸಂಸತ್‌ನಲ್ಲಿ ಪ್ರಧಾನಿ ಮೋದಿ “ದಯವೇ ಧರ್ಮದ ಮೂಲವಯ್ಯ’ ಎಂಬ ಬಸವಣ್ಣನ ವಚನ ಹೇಳಿದ್ದಾರೆ. ಬಸವಣ್ಣನವರನ್ನು ಪ್ರಸ್ತಾಪ ಮಾಡಿದರೆ ಕರ್ನಾಟಕದಲ್ಲಿ ಮತ ಗಳಿಸಬಹುದು ಎಂದು ಮೋದಿ ತಿಳಿದುಕೊಂಡಿದ್ದಾರೆ. “ದಯವೇ ಧರ್ಮದ ಮೂಲವಯ್ಯ’ ಎಂದು ಹೇಳಿದ್ದನ್ನು ನಾನು ಒಪ್ಪಿಕೊಳ್ಳುತ್ತೇನೆ. ಅದೇ ರೀತಿ ನೀವು ನಡೆಯಬೇಕು. ಅದನ್ನು ಬಿಟ್ಟು ನಿಮಗೆ ತಿಳಿದಂಗೆ ನಡೆದುಕೊಂಡಿದ್ದೀರಿ ಎಂದು ಸಂಸತ್‌ನಲ್ಲೇ ನಾನು ಬಸವಣ್ಣನ ಮತ್ತೂಂದು ವಚನವನ್ನು ಹೀಗೆ ಹೇಳುವ ಮೂಲಕ ಪ್ರಧಾನಿಯವರಿಗೆ ಪ್ರತ್ಯುತ್ತರ ನೀಡಿದ್ದೆನೆ ಎಂದು ಖರ್ಗೆ ವಿವರಿಸಿದರು….

ಕಳಬೇಡ-ರಫೇಲ್‌ನಲ್ಲಿ ದುಡ್ಡು ಕದಿಯಬೇಡ ಕೊಲಬೇಡ- ದಲಿತರಿಗೆ, ಅಲ್ಪಸಂಖ್ಯಾತರಿಗೆ ಹೊಡೆಯಬೇಡ, ಕೊಲೆ ಮಾಡಬೇಡ ಹುಸಿಯ ನುಡಿಯಲು ಬೇಡ- ನೌಕರಿ ಕೊಡುತ್ತೇನೆ, ರೈತರ ಅನುದಾನ ದುಪ್ಪಟ್ಟು ಮಾಡುತ್ತೇನೆ ಹೇಳಿದ್ದೆ ಮುನಿಯಬೇಡ- ನಾವು ಏನಾದರೂ ಹೇಳಿದರೆ ಮುನಿಸಿಕೊಂಡು ಮಾತೇ ಆಡಲ್ಲ. ಅನ್ಯರಿಗೆ ಅಸಹ್ಯಪಡಬೇಡ- ಗಾಂಧಿ ಕುಟುಂಬ ಬಂತು, ವಂಶ ಪಾರಂಪರ್ಯ ಅಂತೆಲ್ಲ ಹೇಳಬೇಡ ತನ್ನ ಬಣ್ಣಿಸಬೇಡ- ನಾನೇ ಸರ್ಜಿಕಲ್‌ ದಾಳಿ ಮಾಡಿಸಿದೆ. ನೋಟ್‌ ಬ್ಯಾನ್‌ ಮಾಡಿದೆ ಎಂದು ಬಣ್ಣಿಸಿಕೊಳ್ಳಬೇಡ ಇದಿರ ಹಳಿಯಲು ಬೇಡ- ಐಟಿ, ಇಡಿ ಮೂಲಕ ವಿರೋಧಿಗಳಿಗೆ ತೊಂದರೆ ಕೊಡೋದು ಬೇಡ.

ಅಲ್ಲದೇ, ಬಸವಣ್ಣ, ಬುದ್ಧ, ಗಾಂಧಿ, ಅಂಬೇಡ್ಕರ್‌ ಅವರ ವಿಚಾರಗಳನ್ನು ಪ್ರಸ್ತಾಪಿಸುವವರಿಗೆ ಕರುಣೆ ಮತ್ತು ಪ್ರಜ್ಞೆ ಇರಬೇಕು. ಧರ್ಮದ ಪ್ರಕಾರ ನಡೆದುಕೊಳ್ಳಬೇಕು. ಸರಿಯಾದ ದೃಷ್ಟಿ, ಸಂಕಲ್ಪ, ಮಾತು, ಜೀವನೋಪಾಯ, ಮನೋಜಾಗ್ರತೆ ಇರಬೇಕು ಎಂಬ ಬುದ್ಧನ ಸಂದೇಶವನ್ನು ಖರ್ಗೆ ಹೇಳಿ ಪ್ರಧಾನಿ ಮೋದಿಗೆ ಟಾಂಗ್‌ ನೀಡಿದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.