ಸರಕಾರಿ ಕಾಲೇಜಿಗಾಗಿ ಸಂಸದ ಖರ್ಗೆಗೆ ಮನವಿ


Team Udayavani, Feb 22, 2019, 6:48 AM IST

gul-4.jpg

ವಾಡಿ: ಚಿತ್ತಾಪುರ ಮತಕ್ಷೇತ್ರ ವ್ಯಾಪ್ತಿಯ ವಾಡಿ ಪಟ್ಟಣದಲ್ಲಿ ಸರಕಾರಿ ಪದವಿ ಪೂರ್ವ ಹಾಗೂ ಪದವಿ ಮಹಾವಿದ್ಯಾಲಯ ಸ್ಥಾಪಿಸುವಂತೆ ಆಲ್‌ ಇಂಡಿಯಾ ಡೆಮಾಕ್ರೇಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌ (ಎಐಡಿಎಸ್‌ಒ) ಹಾಗೂ ಎಐಡಿವೈಒ ಮುಖಂಡರು ಸಂಸದ ಡಾ|ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಸಲ್ಲಿಸಿದರು.

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ನೆರವೇರಿಸಲು ಗುರುವಾರ ಕಲಬುರಗಿಗೆ ಆಗಮಿಸಿದ್ದ ಡಾ| ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ವಾಡಿ ನಗರ ಘಟಕದ ಎಐಡಿಎಸ್‌ಒ ವಿದ್ಯಾರ್ಥಿ ಮುಖಂಡರು, ಕಳೆದ ಹದಿನೈದು ವರ್ಷಗಳಿಂದ ಸರಕಾರಿ ಕಾಲೇಜಿಗಾಗಿ ಹೋರಾಡುತ್ತಿದ್ದೇವೆ. ಪ್ರತಿ ವರ್ಷವೂ ನಿಮಗೆ ಮತ್ತು ಕ್ಷೇತ್ರದ ಶಾಸಕ ಪ್ರಿಯಾಂಕ್‌ ಖರ್ಗೆ ಅವರಿಗೆ ಮನವಿ ನೀಡುತ್ತಿದ್ದೇವೆ. ಕೇವಲ ಭರವಸೆ ಮಾತ್ರ ನೀಡಲಾಗುತ್ತಿದೆ. ವಾಡಿ ಪಟ್ಟಣದ ವಿದ್ಯಾರ್ಥಿಗಳ ಸರಕಾರಿ ಕಾಲೇಜಿನ ಬೇಡಿಕೆ ಯಾವಾಗ ಪೂರೈಸುತ್ತೀರಿ ಎಂದು ನೇರವಾಗಿಯೇ ಪ್ರಶ್ನಿಸಿದ ಪ್ರಸಂಗ ನಡೆಯಿತು.

ವಾಡಿ ಪಟ್ಟಣದದಲ್ಲಿ ಹತ್ತಾರು ಖಾಸಗಿ ಶಿಕ್ಷಣ ಸಂಸ್ಥೆಗಳಿವೆ. ಸಾವಿರಾರು ಮಕ್ಕಳು ಪ್ರೌಢ ಶಿಕ್ಷಣ ಪೂರ್ಣಗೊಳಿಸಿ ಕಾಲೇಜಿಗಾಗಿ ಜಿಲ್ಲಾ ಕೇಂದ್ರಕ್ಕೆ ಒಲಸೆ ಹೋಗುತ್ತಿದ್ದಾರೆ. ಹೆಣ್ಣುಮಕ್ಕಳು ಎಸ್‌ ಎಸ್‌ಎಲ್‌ಸಿ ನಂತರ ಕಾಲೇಜಿನ ಸೌಲಭ್ಯ ಇಲ್ಲದ್ದಕ್ಕೆ ಶಿಕ್ಷಣ ಸ್ಥಗಿತಗೊಳಿಸುತ್ತಿದ್ದಾರೆ. ಖಾಸಗಿ ಕಾಲೇಜುಗಳಿಗೆ ಪರವಾನಿಗೆ ನೀಡುವ ಸರಕಾರ, ಸರಕಾರಿ ಕಾಲೇಜು ಸ್ಥಾಪನೆಗೇಕೆ ಹಿಂದೇಟು ಹಾಕುತ್ತಿದೆ ಎಂಬುದು ಅರ್ಥವಾಗುತ್ತಿಲ್ಲ.

ವಾಡಿಯಲ್ಲಿ ಸರಕಾರಿ ಕಾಲೇಜು ಸ್ಥಾಪಿಸಲು ಎಲ್ಲ ಅನುಕೂಲಗಳಿವೆ. ಸರಕಾರ ಮಾತ್ರ ಮನಸ್ಸು ಮಾಡುತ್ತಿಲ್ಲ. ಶಾಸಕರ ಇಚ್ಚಾಶಕ್ತಿ ಕೊರತೆಯಿಂದ ಬಡ ವಿದ್ಯಾರ್ಥಿಗಳು ಕಾಲೇಜು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ನೀವಾದರೂ ಕ್ರಮಕೈಗೊಳ್ಳಿ ಎಂದು ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಮಲ್ಲಿನಾಥ ಸಿಂಗೆ ಸಂಸದ ಖರ್ಗೆ ಅವರ ಗಮನ ಸೆಳೆದರು.

ಎಐಡಿಎಸ್‌ಒ ವಾಡಿ ಸಮಿತಿ ಅಧ್ಯಕ್ಷ ಶರಣು ಹೇರೂರ, ಎಐಡಿವೈಒ ಕಾರ್ಯದರ್ಶಿ ಶರಣು ವಿ.ಕೆ., ವಿದ್ಯಾರ್ಥಿ ಮುಖಂಡರಾದ ಹಣಮಂತ ಎಸ್‌.ಎಚ್‌., ಮಲ್ಲಿನಾಥ ಹುಂಡೇಕಲ್‌, ರಾಜು ಒಡೆಯರ, ಗೌತಮ ಪರತೂರಕರ, ವೆಂಕಟೇಶ ಆರ್‌.ಜಿ., ಅರುಣ ಹಿರೆಬಾನರ, ಗೋವಿಂದ
ಯಳವಾರ, ಬಸವರಾಜ ನಾಟೇಕರ, ಶ್ರೀಶೈಲ ಕಡಬೂರ ನಿಯೋಗದಲ್ಲಿದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.