ಸುಡು ಬಿಸಿಲಿಗೆ ಬಸವಳಿದ ಜನತೆ
Team Udayavani, Mar 19, 2019, 6:34 AM IST
ಕಲಬುರಗಿ: ನಗರದ ನೂತನ ವಿದ್ಯಾಲಯ ಆವರಣದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಪರಿವರ್ತನಾ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಜನತೆ ಬೀರು ಬಿಸಿಲಿಗೆ ಬಸವಳಿದು ಹೋದರು. ರಾಹುಲ್ ಗಾಂಧಿ ಭಾಷಣ ಕೇಳಲೆಂದು ಬಂದಿದ್ದ ಸಹಸ್ರಾರು ಜನರು ಸುಡು ಬಿಸಿಲಿನ ತಾಪಕ್ಕೆ ಹೈರಾಣಾದರು.
ಲೋಕಸಭಾ ಚುನಾವಣೆಯ ಮೂರನೇ ಹಂತದಲ್ಲಿ ಏ.23ಕ್ಕೆ ಮತದಾನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ
ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರ, ಕಾಂಗ್ರೆಸ್ ಭದ್ರಕೋಟೆಯಾಗಿರುವ ಕಲಬುರಗಿಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಿತು. ಖರ್ಗೆ ಪರ ಪ್ರಚಾರಕ್ಕೆಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸಿದ್ದರಿಂದ ಕಲಬುರಗಿ, ಯಾದಗಿರಿ, ಬೀದರ್ ಮತ್ತಿತರ ಕಡೆಗಳಿಂದ ಕಾಂಗ್ರೆಸ್ ಕಾರ್ಯಕರ್ತರು, ಬೆಂಬಲಿಗರು ಸೇರಿದಂತೆ ಸಾವಿರಾರು ಜನರು ಪಾಲ್ಗೊಂಡಿದ್ದರು.
ರಾಹುಲ್ ಭಾಷಣ ಕೇಳಲೆಂದು ರ್ಯಾಲಿ ಆವರಣಕ್ಕೆ ಬೆಳಿಗ್ಗೆ 10ರಿಂದಲೇ ಜನತೆ ಬರತೊಡಗಿದ್ದರು. ಮಧ್ಯಾಹ್ನ 1.30ಕ್ಕೆ ರಾಹುಲ್ ಮೈದಾನಕ್ಕೆ ಬಂದರು. ನಂತರದಲ್ಲಿ ಪ್ರಮುಖ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ದಿನೇಶ ಗುಂಡೂರಾವ್ ಭಾಷಣದ ಬಳಿಕ ರಾಹುಲ್ ತಮ್ಮ ಭಾಷಣ ಶುರು ಮಾಡಿದರು.
ಅಷ್ಟರೊಳಗೆ ಜನತೆ ಸೂರ್ಯನ ಪ್ರತಾಪಕ್ಕೆ ತತ್ತರಿಸಿದರು. ಇದರ ನಡುವೆ ಸುಡು ಬಿಸಿಲಿಗೆ ನೀರಿನ ದಾಹ ಹೆಚ್ಚಾಗಿದ್ದರಿಂದ ನೀರಿಗಾಗಿ ಮೈದಾನದೊಳಗೆ ಜನತೆ ಪರಿತಪಿಸುವ ದೃಶ್ಯ ಕಂಡು ಬಂತು. ಅಲ್ಲದೇ, ರಾಹುಲ್ ಗಾಂಧಿ ಭಾಷಣ ಮುಗಿಯುತ್ತಿದ್ದಂತೆ ಮೈದಾನದಿಂದ ಹೊರಬಂದ ಜನರು ಹೋಟೆಲ್, ಬೇಕರಿ, ಎಳನೀರು ಅಂಗಡಿಗಳಲ್ಲಿ ಸೇರಿಕೊಂಡು ದಾಹ ನೀಗಿಸಿಕೊಂಡು ನಿಟ್ಟುಸಿರು ಬಿಟ್ಟರು.
ರಾಹುಲ್ ಗಾಂಧಿ ಕಾರ್ಯಕ್ರಮದಿಂದಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಅಲ್ಲಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿದ್ದರಿಂದ ಕಾರ್ಯಕ್ರಮ ಮುಗಿದ ಬಳಿಕ ಕೂಡ ಬಿಸಿಲಿನಲ್ಲಿ ಮನೆಗಳಿಗೆ ತೆರಳುವವರು ಹಾಗೂ ಸಾರ್ವಜನಿಕರು, ವಾಹನ ಸವಾರರು ಪರದಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
MUST WATCH
ಹೊಸ ಸೇರ್ಪಡೆ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ