ಪ್ರತಿ ಬೇಸಿಗೆಯಲ್ಲೂ ಜಲಕ್ಷಾಮ


Team Udayavani, Mar 19, 2019, 6:46 AM IST

gul-3.jpg

ಶಹಾಬಾದ: ನಗರದಿಂದ ಕೇವಲ ನಾಲ್ಕು ಕಿ.ಮೀ. ದೂರದಲ್ಲಿರುವ ತೊನಸಿನಹಳ್ಳಿ (ಎಸ್‌) ಗ್ರಾಮದಲ್ಲಿ ಪ್ರತಿ ವರ್ಷ ಬೇಸಿಗೆಯಲ್ಲಿ ಕುಡಿವ ನೀರಿಗಾಗಿ ಹಾಹಾಕಾರ ಭುಗಿಲೆಳುತ್ತದೆ. ಈ ವೇಳೆ ಗ್ರಾಮಸ್ಥರು ನಿತ್ಯ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಸುಮಾರು ಏಳು ಸಾವಿರ ಜನಸಂಖ್ಯೆ ಹೊಂದಿರುವ ತೊನಸಿನಹಳ್ಳಿ (ಎಸ್‌) ಗ್ರಾಪಂ ಕೇಂದ್ರ ಸ್ಥಾನ ಹೊಂದಿದ್ದು, ತರನಳ್ಳಿ ಹಾಗೂ ಗೋಳಾ ಗ್ರಾಮವನ್ನು ಒಳಗೊಂಡಿದೆ. ಮೂರು ಗ್ರಾಮಗಳು ಸೇರಿ ಒಟ್ಟು 22 ಸದಸ್ಯ ಬಲವನ್ನು ಹೊಂದಿದೆ. ತೊನಸಿನಹಳ್ಳಿ (ಎಸ್‌) ಗ್ರಾಮ ಆರು ಸದಸ್ಯರನ್ನು ಹೊಂದಿದೆ.

ಪಾತಾಳಕ್ಕಿಳಿದ ಬಾವಿ ನೀರು: ಬೇಸಿಗೆ ಬಂದರೆ ಇಲ್ಲಿ ಕುಡಿಯುವ ನೀರಿನ ಸಮಸ್ಯೆ ತಾಂಡವವಾಡುತ್ತದೆ. ಆದರೂ ಇಲ್ಲಿವರೆಗೂ ಯಾರು ಶಾಶ್ವತ ಕ್ರಮ ಕೈಗೊಂಡಿಲ್ಲ. ಹೀಗಾಗಿ ಗ್ರಾಮಸ್ಥರು ನೀರಿಗಾಗಿ ನಿತ್ಯ ಅಲೆಯುವಂತಾಗಿದೆ. 

ಗ್ರಾಮದಲ್ಲಿರುವ ಹಾರ ಬಾವಿ, ಊರಾನ ಬಾವಿ, ಮಠದ ಬಾವಿ ಸೇರಿದಂತೆ ಜಲಮೂಲಗಳು ಬತ್ತಿ ಹೋಗಿವೆ. ಇರುವ ಒಂದೆರಡು ಕೊಳವೆ ಬಾವಿಗಳಲ್ಲಿನ ನೀರು ಪಾತಾಳಕ್ಕೆ ಇಳಿದಿದೆ.

 ಗ್ರಾಮಸ್ಥರ ಆರೋಪ: ಸುಮಾರು ದಶಕಗಳಿಂದ ಇಲ್ಲಿನ ಗ್ರಾಮಸ್ಥರು ಜನಪ್ರತಿನಿಧಿಗಳಿಗೆ ಕೇಳುವ ಬೇಡಿಕೆ ಎಂದರೆ “ಅದು ಸಮರ್ಪಕ ಕುಡಿಯುವ ನೀರು ಒದಗಿಸಿ’. ಆದರೆ ಜನಪ್ರತಿನಿಧಿ ಗಳು ಮಾತ್ರ ಭರವಸೆ ನೀಡುತ್ತ ಬಂದಿದ್ದಾರೆ ಹೊರತು ಇಲ್ಲಿಯವರೆಗೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ.

ಮಳೆಗಾಲ, ಚಳಿಗಾಲ ಬಂದಾಗ ಮಾತ್ರ ಅಂತರ್ಜಲ ಹೆಚ್ಚಾಗಿ ಬೋರ್‌ ವೆಲ್‌ ಹಾಗೂ ಬಾವಿಯಲ್ಲಿ ನೀರು ಬರುತ್ತದೆ. ಆ ನೀರು ಗ್ರಾಮಸ್ಥರ ಬೇಡಿಕೆಗೆ ಅನುಗುಣವಾಗಿ ದಾಹ ತಣಿಸುವುದಿಲ್ಲ. ಜಲಕ್ಷಾಮದ ಬಗ್ಗೆ ಗ್ರಾಪಂ, ತಾಪಂ, ಜಿಪಂ ಅಧಿ ಕಾರಿಗಳು ಹಾಗೂ ಶಾಸಕರ ಗಮನಕ್ಕೂ ತಂದರೂ ಇಲ್ಲಿಯವರೆಗೆ ಯಾರೋಬ್ಬರೂ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿಲ್ಲ ಎಂಬುದು ಗ್ರಾಮಸ್ಥರ ಆರೋಪ.

ಆಶಾ ಭಾವನೆ: ಈಗಾಗಲೇ ಗ್ರಾಪಂನವರು ಮುತುರ್ಜಿ ವಹಿಸಿ ನೀರಿನ ಸಮಸ್ಯೆಯಾಗದಂತೆ ತೆಗನೂರ ಗ್ರಾಮದ ಹಳ್ಳದಲ್ಲಿ ಕೊಳವೆ ಬಾವಿ ಕೊರೆಸಲಾಗಿದೆ. ಅಲ್ಲಿಂದ ಗ್ರಾಮದ ಬಾವಿಗಳಿಗೆ ನೀರು ತುಂಬಿಸಲಾಗುತ್ತಿದೆ. ಆದರೆ ಆ ನೀರು ಸಾಕಾಗುತ್ತಿಲ್ಲ. ಕೆಲ ದಿನಗಳ ಹಿಂದಷ್ಟೇ ಸಚಿವ ಪ್ರಿಯಾಂಕ ಖರ್ಗೆ, ಶಾಸಕ ಬಸವರಾಜ ಮತ್ತಿಮಡು ಅವರು ಗೋಳಾ (ಕೆ) ಗ್ರಾಮದ ಕಾಗಿಣಾ ನದಿಯಿಂದ ಎಚ್‌ ಕೆಆರ್‌ಡಿಬಿಯ 2 ಕೋಟಿ ಅನುದಾನದಲ್ಲಿ ಶಾಶ್ವತ ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಆದರೆ ಅದು ಯಾವಾಗ ಪ್ರಾರಂಭವಾಗುತ್ತದೆ. ಯಾವಾಗ ನೀರು ನಮ್ಮೂರಿಗೆ ಬರುತ್ತದೆ ಎಂದು ಗ್ರಾಮಸ್ಥರು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಗ್ರಾಮಕ್ಕೆ ಹೋದಾಗ ಜನರಿಂದ ಬಂದ ಬೇಡಿಕೆ ಎಂದರೆ ಕುಡಿಯುವ ನೀರಿನ
ವ್ಯವಸ್ಥೆ ಮಾಡಿಕೊಡಿ ಎಂದು. ಅದಕ್ಕಾಗಿ ಸತತ ಪರಿಶ್ರಮ ಪಟ್ಟು ಗೋಳಾ(ಕೆ) ಗ್ರಾಮದ ಕಾಗಿಣಾ ನದಿಯಿಂದ ತೊನಸನಹಳ್ಳಿ ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆಗಾಗಿ ಎಚ್‌ಕೆಆರ್‌ಡಿಬಿಯಿಂದ ಎರಡು ಕೋಟಿ ಅನುದಾನ ಮಂಜೂರಾತಿ ಮಾಡಿಸಿದ್ದೇನೆ. ಕೆಲವೇ ದಿನಗಳಲ್ಲಿ ಕಾಮಗಾರಿ ಪ್ರಾರಂಭವಾಗುತ್ತದೆ. ಗ್ರಾಮಸ್ಥರಲ್ಲಿ ಯಾವುದೇ ಅನುಮಾನ ಬೇಡ.
 ಬಸವರಾಜ ಮತ್ತಿಮಡು, ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ

ಅಂತರ್ಜಲ ಮಟ್ಟ ಸಂಪೂರ್ಣ ಕುಸಿದ ಪರಿಣಾಮ ಗ್ರಾಮದ ಸುತ್ತ-ಮುತ್ತಲಿನ ಪ್ರದೇಶದಲ್ಲಿ ಕೊಳವೆ ಬಾವಿ ಕೊರೆಸಿದರೂ ನೀರು ಸಿಗುತ್ತಿಲ್ಲ. ಆದ್ದರಿಂದ ಗ್ರಾಪಂನಿಂದ 12 ಕಿ.ಮೀ. ದೂರವಿರುವ ತೆಗನೂರ ಗ್ರಾಮದ ಹಳ್ಳದಲ್ಲಿ ಕೊಳವೆ ಬಾವಿ ಕೊರೆಸಲಾಗಿದೆ. ಅಲ್ಲಿಂದ ನೀರು ಪೂರೈಕೆ ಮಾಡುತ್ತಿದ್ದೇವೆ. ಆದರೂ ನೀರಿನ ಸಮಸ್ಯೆಯಿದೆ. ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ನಿರಂತರ ಶಾಸಕರೊಂದಿಗೆ ಮಾತುಕತೆ ನಡೆಸಿದ್ದೇವೆ. ಸದ್ಯದಲ್ಲಿಯೇ ಸಮಸ್ಯೆಗೆ ಪರಿಹಾರ ಸಿಗಲಿದೆ. 
 ವಿಜಯಕುಮಾರ ಮಾಣಿಕ್‌, ತೊನಸನಹಳ್ಳಿ(ಎಸ್‌) ಗ್ರಾಪಂ ಅಧ್ಯಕ್ಷ

„ಮಲ್ಲಿನಾಥ ಪಾಟೀಲ

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.