ಎಸ್ಸೆಸ್ಸೆಲ್ಸಿ ಪರೀಕ್ಷೇ ಶುರು ಆಲ್‌ ದಿ ಬೆಸ್ಟ್‌


Team Udayavani, Mar 21, 2019, 5:34 AM IST

gul-1.jpg

ಕಲಬುರಗಿ: ರಾಜ್ಯಾದ್ಯಂತ ಗುರುವಾರ (ಮಾ.21ರಿಂದ ಏ.4ರ ವರೆಗೆ)ದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭವಾಗಲಿದ್ದು, ನಗರ ಮತ್ತು ಜಿಲ್ಲಾದ್ಯಂತ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಜಿಲ್ಲೆಯಲ್ಲಿ ಕ್ಲಸ್ಟರ್‌ ಸಹಿತ 449 ಶಾಲೆಗಳು ಮತ್ತು ಕ್ಲಸ್ಟರ್‌ ರಹಿತ 309 ಶಾಲೆಗಳು ಸೇರಿದಂತೆ 758 ಶಾಲೆಗಳಿದ್ದು, ಒಟ್ಟು 42,761 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ. ಕಲಬುರಗಿ ದಕ್ಷಿಣ ಮತ್ತು ಉತ್ತರ ಶೈಕ್ಷಣಿಕ ವಲಯ ಸೇರಿದಂತೆ ಜಿಲ್ಲಾದ್ಯಂತ 133 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಬರೆಯಲಿದ್ದಾರೆ.

ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳು ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. 133 ಪರೀಕ್ಷಾ ಕೇಂದ್ರಗಳಲ್ಲಿ ಪೈಕಿ 121 ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಪರೀಕ್ಷೆಗಳು ನಡೆಯಲಿದೆ.

ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರ 121 ಕೊಠಡಿಗಳು, 1,084 ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕಾಮೆರಾ ಅಳವಡಿಸಲಾಗಿದೆ. ಜತೆಗೆ ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೆ ಒಬ್ಬರು ಸ್ಥಾನಿಕ ಜಾಗೃತ ದಳದ ಅಧಿಕಾರಿಯನ್ನು ನಿಯೋಜಿಸಲಾಗಿದೆ. ಅಲ್ಲದೇ, ಎಲ್ಲ ಪರೀಕ್ಷಾ ಕೇಂದ್ರಗಳಿಗೂ ಪೊಲೀಸ್‌ ಬಿಗಿ ಭದ್ರತೆ ಒದಗಿಸಲಾಗಿದೆ.

ವಿಚಕ್ಷಣಾ ದಳ ನೇಮಕ: ಪರೀಕ್ಷೆ ಕೇಂದ್ರಗಳಲ್ಲಿ ಅಕ್ರಮ ತಡೆಗಟ್ಟಲು ಜಿಲ್ಲಾ ಹಂತದಲ್ಲಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನಾಲ್ಕು ವಿಚಕ್ಷಣಾ ದಳದ ತಂಡ ರಚಿಸಲಾಗಿದೆ. ಡಿಡಿಪಿಐ ಸೇರಿದಂತೆ ನಾಲ್ವರು ಅಧಿಕಾರಿಗಳ ನೇತೃತ್ವದಲ್ಲಿ ತಲಾ ಮೂವರನ್ನು ಒಳಗೊಂಡ ತಂಡ ರಚಿಸಲಾಗಿದೆ. ಪರೀಕ್ಷೆ ನಡೆಯುವ ದಿನಗಳಲ್ಲಿ ಪ್ರತಿ ತಂಡ ಎರಡು ತಾಲೂಕುಗಳಿಗೆ ಭೇಟಿ ನೀಡಲಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

22 ಸೂಕ್ಷ್ಮ-ಅತಿ ಸೂಕ್ಷ್ಮ ಕೇಂದ್ರ: ಜಿಲ್ಲಾದ್ಯಂತ 17 ಸೂಕ್ಷ್ಮ ಮತ್ತು 5 ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳೆಂದು ಗುರುತಿಸಲಾಗಿದೆ. ಇದರಲ್ಲಿ ಕಲಬುರಗಿ (ದ), ಜೇವರ್ಗಿ, ಸೇಡಂನಲ್ಲಿ ತಲಾ 4, ಕಲಬುರಗಿ (ಉ), ಅಫಜಲಪುರದಲ್ಲಿ ತಲಾ ಎರಡು ಹಾಗೂ ಆಳಂದದಲ್ಲಿ 1 ಸೂಕ್ಷ್ಮಕೇಂದ್ರವನ್ನು ಗುರುತಿಸಲಾಗಿದೆ. ಅದೇ ರೀತಿ ಕಲಬುರಗಿ (ದ) 3 ಮತ್ತು ಆಳಂದದಲ್ಲಿ ಎರಡು ಪರೀಕ್ಷಾ ಕೇಂದ್ರಗಳನ್ನು ಅತಿ ಸೂಕ್ಷ್ಮ ಕೇಂದ್ರಗಳೆಂದು ಗುರುತಿಸಲಾಗಿದೆ.

ನಿಷೇಧಾಜ್ಞೆ ಜಾರಿ: ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಶಾಂತಿಯುತ ಮತ್ತು ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಜಿಲ್ಲಾದ್ಯಂತ ಎಲ್ಲ 133 ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತಲಿನ 200 ಮೀಟರ್‌ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರದ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಬೇರೆ ವ್ಯಕ್ತಿಗಳು ಮೊಬೈಲ್‌, ಬ್ಲೂಟೂತ್‌ ಹಾಗೂ ವೈರಲೆಸ್‌ ಸೆಟ್‌, ಇಲೆಕ್ಟ್ರಾನಿಕ್‌ ವಸ್ತುಗಳ ಉಪಯೋಗಕ್ಕೆ ನಿಷೇಧ ವಿಧಿಸಲಾಗಿದೆ. ಅಲ್ಲದೇ, ಝೆರಾಕ್ಸ್‌ ಮತ್ತು ಬುಕ್‌ ಸ್ಟಾಲ್‌ಗ‌ಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಶಹಬಾದ
ಶಹಾಬಾದ: ತಾಲೂಕಿನ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ಪರೀಕ್ಷೆ ಗುರುವಾರ ನಡೆಯಲಿದ್ದು, ಬುಧವಾರ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ನಗರದ ಪರೀಕ್ಷಾ ಕೇಂದ್ರಗಳಾದ ಗಂಗಮ್ಮ ಶಾಲೆಯಲ್ಲಿ 279 ವಿದ್ಯಾರ್ಥಿಗಳು, ಬಾಲವಿದ್ಯಾ ಮಂದಿರ ಶಾಲೆಯಲ್ಲಿ 328 ವಿದ್ಯಾರ್ಥಿಗಳು, ಎಮ್‌ಸಿಸಿ ಶಾಲೆಯಲ್ಲಿ 326 ವಿದ್ಯಾರ್ಥಿಗಳು ಹಾಗೂ ಭಂಕೂರಿನ ಸರಕಾರಿ ಪ್ರೌಢಶಾಲೆಯಲ್ಲಿ 315 ವಿದ್ಯಾರ್ಥಿಗಳು ಸೇರಿದಂತೆ ಹೋಬಳಿ ವಲಯದಲ್ಲಿ ಸುಮಾರು 1248 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಸುಗಮವಾಗಿ ಹಾಗೂ ನಕಲು ಮತ್ತು ಇನ್ನಿತರ ಅವ್ಯವಹಾರ ತಡೆಗಟ್ಟಲು ಪ್ರತಿ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಅಲ್ಲದೇ ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸ್ಥಾನಿಕ ಜಾಗೃತ ದಳ ನೇಮಿಸಲಾಗಿ¨

ಚಿಂಚೋಳಿಯಲ್ಲಿ ನಕಲು ತಡೆಗೆ ಬಿಗಿ ಭದ್ರತೆ 
ಚಿಂಚೋಳಿ: 2018-19ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ತಾಲೂಕಿನ ಸರಕಾರಿ ಪ್ರೌಢಶಾಲೆ ಮತ್ತು ಅನುದಾನಿತ ಪ್ರೌಢಶಾಲೆ ಸೇರಿದಂತೆ ಒಟ್ಟು 51 ಪ್ರೌಢ ಶಾಲೆಗಳಿಂದ 3046 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಬಿಇಒ ನಿಂಗಪ್ಪ ಸಿಂಪಿ ತಿಳಿಸಿದ್ದಾರೆ.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 1455ವಿದ್ಯಾರ್ಥಿಗಳು, 1591 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಲಿದ್ದಾರೆ.

ತಾಲೂಕಿನ ಸರಕಾರಿ ಬಾಲಕರ ಪ್ರೌಢಶಾಲೆ ಚಂದಾಪುರ ಕೇಂದ್ರದಲ್ಲಿ 825 ವಿದ್ಯಾರ್ಥಿಗಳು, ಕನ್ಯಾ ಪ್ರೌಢಶಾಲೆ ಚಿಂಚೋಳಿ ಪರೀಕ್ಷಾ ಕೇಂದ್ರದಲ್ಲಿ 825, ಸರಕಾರಿ ಪ್ರೌಢಶಾಲೆ ಐನೋಳಿ 241 ವಿದ್ಯಾರ್ಥಿಗಳು, ಸರಕಾರಿ ಪ್ರೌಢಶಾಲೆ ಚಿಮ್ಮನಚೋಡ 491 ವಿದ್ಯಾರ್ಥಿಗಳು,ಸರಕಾರಿ ಪ್ರೌಢಶಾಲೆ ಚಂದನಕೇರಾ 491 ವಿದ್ಯಾರ್ಥಿಗಳು, ಸರಕಾರಿ ಬಾಲಕರ ಪ್ರೌಢಶಾಲೆ ಸುಲೇಪೇಟ 891, ಬಿ.ಬಿ. ಸಜ್ಜನಶೆಟ್ಟಿ ಅನುದಾನಿತ ಪ್ರೌಢಶಾಲೆ ಸುಲೇಪೇಟ 893, ಸರಕಾರಿ ಪ್ರೌಢಶಾಲೆ ರಟಕಲ್‌ 323 ಸೇರಿದಂತೆ ಒಟ್ಟು 3046 ಪರೀಕ್ಷಾರ್ಥಿಗಳು ಹಾಜರಾಗಲಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ನಕಲು ನಡೆಯದಂತೆ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಪರೀಕ್ಷಾರ್ಥಿಗಳು ಉತ್ತರ ಬರೆಯುವುದಕ್ಕಾಗಿ ಡೆಸ್ಕ ವ್ಯವಸ್ಥೆ ಕುಡಿಯುವ ನೀರು ಅನುಕೂಲ ಮಾಡಲಾಗಿದೆ. ಪರೀಕ್ಷೆ ಕೇಂದ್ರದ ಸುತ್ತ ಬಿಗಿ ಪೊಲೀಸ್‌ ಭದ್ರತೆ ಮಾಡಲಾಗಿದೆ ಎಂದು ಹೇಳಿದರು.

ಅಫಜಲಪುರದಲ್ಲಿ ಪರೀಕ್ಷೆಗೆ ಸಜ್ಜು 
ಅಫಜಲಪುರ: ದ್ವಿತೀಯ ಪಿಯು ಪರೀಕ್ಷೆ ಯಶಸ್ವಿಯಾಗಿ ಮುಗಿದ ಬಳಿಕ ಈಗ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗುತ್ತಿವೆ. ತಾಲೂಕಿನ ಗೊಬ್ಬೂರ(ಬಿ), ರೇವೂರ(ಬಿ), ಬಂದರವಾಡ, ದೇವಲ ಗಾಣಗಾಪುರ, ಸ್ಟೇಷನ್‌ ಗಾಣಗಾಪುರ, ಅತನೂರ, ಬಂಕಲಗಾ, ಕರ್ಜಗಿ, ಮಣೂರ ಹಾಗೂ ಪಟ್ಟಣದ ಸರ್ಕಾರಿ ಪ್ರೌಢ ಶಾಲೆ ಮತ್ತು ಮಹಾಂತಮ್ಮ ಪಾಟೀಲ ಪ್ರೌಢ ಶಾಲೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ಮಾಡಲಾಗಿದೆ.

ಒಟ್ಟು 3031 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು ಈ ಪೈಕಿ 1695 ಗಂಡು, 1336 ಹೆಣ್ಣು ಮಕ್ಕಳು ಪರೀಕ್ಷೆ ಬರೆಯುತ್ತಿದ್ದಾರೆ. 11 ಪರೀಕ್ಷಾ ಕೇಂದ್ರಗಳ 178 ಕೊಠಡಿಗಳ ಪೈಕಿ 100 ಕೊಠಡಿಗಳಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ. 11 ಮುಖ್ಯ ಅಧೀಕ್ಷಕರು, 2 ಉಪ ಅಧೀಕ್ಷಕರು, 11 ಪ್ರಶ್ನೆ ಪತ್ರಿಕೆ ಮಾರ್ಗಾಧಿಕಾರಿಗಳು, 11 ಸ್ಥಳೀಯ ಜಾಗೃತದಳ, 194 ಕೊಠಡಿ ಮೇಲ್ವಿಚಾರಕರನ್ನು ನೇಮಿಸಲಾಗಿದೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.