ಶಾಲೆ ಕಟ್ಟಡವೇ ಆಯ್ತುಗಡಿನಾಡ ಎಕ್ಸಪ್ರಸ್‌


Team Udayavani, Mar 22, 2019, 10:33 AM IST

gul-3.jpg

ಆಳಂದ: ಛುಕ್‌..ಬುಕ್‌.. ಸದ್ದು ಇಲ್ಲದೆ ಬಂತು ಗಡಿನಾಡಿನ ಫಲಕ ಹಾಕಿದ ಎಕ್ಸಪ್ರಸ್‌ ರೈಲು. ಬರುತ್ತಿದ್ದಂತೆ ತಡಮಾಡದೆ ಬಡ-ಬಡನೆ ಹತ್ತಿದರು ಮಕ್ಕಳು, ಶಿಕ್ಷಕರು. ಆದರೂ ಅದು ಮುಂದಕ್ಕೆ ಹೋಗಲಿಲ್ಲ. ಹೋಗದಿದ್ದರೂ ಅವರೆಲ್ಲರಿಗೂ ರೈಲಿನಲ್ಲೇ ಕುಳಿತಂತೆ ಭಾಸವಾಯಿತು.

ಇಂಥಹದ್ದೊಂದು ಗಳಿಗೆಗೆ ಸಾಕ್ಷಿಯಾಗಲು ಕಾರಣವಾಗಿದ್ದು ಗುರು ಬಂಗರಗಿ ಅವರ ಕಲಾ ತಂಡ. ಈ ತಂಡ ತಾಲೂಕಿನ ನಿರಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡಕ್ಕೆ ದಾನಿಗಳ ನೆರವಿನಿಂದ ಬಿಡಿಸಿದ ರೈಲಿನ ಪೇಂಟಿಂಗ್‌ ಎಲ್ಲರ ಗಮನ ಸೆಳೆಯುತ್ತಿದೆ. 

ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುತ್ತಾರೆ. ಕೂಲಿ ಮಾಡುವರು ಸಹ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಈ ಶಾಲೆ ಎಲ್ಲರನ್ನೂ ತನ್ನತ್ತ ಆಕರ್ಷಿಸುತ್ತಿದೆ.

ಶಾಲೆಯ ಅಭಿವೃದ್ಧಿಗಾಗಿ ದಾನಿಗಳ ಸಹಕಾರ ಪಡೆದು, ಉತ್ತಮ ಕಲಿಕಾ ವಾತಾವರಣ ಕಲ್ಪಿಸಲು ಸತತ ಪ್ರಯತ್ನ ನಡೆದಿದೆ. ಗ್ರಾಮದ ಯುವ ಮುಖಂಡ ವಿಜಯಕುಮಾರ ಕೋರೆ ಸಹಾಯ ಹಸ್ತದಿಂದ ಶಾಲೆಗೆ ರೈಲು ಬಣ್ಣ ಲೇಪನ ಮಾಡಿಸಲಾಗಿದೆ ಎಂದು ಶಾಲೆಯ ಶಿಕ್ಷಕ ರಾಜ್ಯ ಸಂಪನ್ಮೂಲ ವ್ಯಕ್ತಿ ಹುಸೇನ ವಡಗೇರಿ ಹರ್ಷ ವ್ಯಕ್ತಪಡಿಸುತ್ತಾರೆ.
 
ಗ್ರಾಪಂ ಅಭಿವೃದ್ಧಿ ಅಧಿಕಾರಿ ದಶರಥ ಪಾತ್ರೆ ಕುಡಿಯಲು ನೀರಿನ ವ್ಯವಸ್ಥೆ ಹಾಗೂ ಮುಖ್ಯ ಶಿಕ್ಷಕರ ಕೋಣೆಗೆ ಅಂದವಾದ ನೆಲಹಾಸಿಗೆ ಮತ್ತು ನಲಿಕಲಿ ಮಾದರಿ ಶಾಲೆ ಮಾಡುವ ಉದ್ದೇಶದಿಂದ ವೃತ್ತಾಕಾರದ ಟೇಬಲ್‌ಗ‌ಳನ್ನು ಕೊಡಿಸಿದ್ದಾರೆ.
 
ಇನ್ನೊಬ್ಬ ದಾನಿ, ನಿರಗುಡಿ ಗ್ರಾಪಂ ಅಧ್ಯಕ್ಷ ಸಿದ್ಧಾರಾಮ ದೇಶಮುಖ ಮಕ್ಕಳಿಗೆ ಟೇಬಲ್‌ಗ‌ಳ ವ್ಯವಸ್ಥೆ ಮಾಡಿಸುವುದಾಗಿ ಭರವಸೆ ಕೊಟ್ಟಿದ್ದಾರೆ. ಈಗಾಗಲೇ ಇನ್‌ಫೋಸಿಸ್‌ ಸಂಸ್ಥೆ ಶಾಲೆಗೆ ಐದು ಕಂಪ್ಯೂಟರ್‌ಗಳನ್ನು ದೇಣಿಗೆಯಾಗಿ ನೀಡಿದ್ದು, ಚಂದ್ರಶೇಖರ ಕಟ್ಟಿಮನಿ ಅವರ ಶ್ರಮವೂ ಇದರಲ್ಲಿದೆ ಎಂದು ಶಿಕ್ಷಕಿ ಚಂದ್ರಕಲಾ ಮೂಲಗೆ ತಿಳಿಸುತ್ತಾರೆ. 

ಕ್ರಿಯಾಶೀಲ ಶಿಕ್ಷಕರಾದ ಜೀತೇಂದ್ರ ತಳವಾರ, ಎ.ಜಿ.ಟಿ ಶಿಕ್ಷಕರು ಪ್ರತಿಭಾವಂತ ವಿದ್ಯಾರ್ಥಿನಿಯಾದ ಶಬಾನಾಳಿಗೆ ಹತ್ತನೇ ತರಗತಿಗೆ ಬೇಕಾದ ಎಲ್ಲ ಪರಿಕರಗಳನ್ನು ವ್ಯವಸ್ಥೆ ಮಾಡಿದ್ದಾರೆ. ಶಾಲೆಯ ಹಳೆ ವಿದ್ಯಾರ್ಥಿಗಳಲ್ಲಿ ಉದ್ಯೋಗಸ್ಥರಾದವರು ಇಂದಿನ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ನೀಡಿದ್ದಾರೆ ಎಂದು ಮುಖ್ಯ ಶಿಕ್ಷಕ ದಿಗಂಬರ ಬಂಡಗರ ಹರ್ಷ ವ್ಯಕ್ತಪಡಿಸುತ್ತಾರೆ.

ಶಿಕ್ಷಕರಾದ ಚಂದ್ರಕಲಾ ಮೂಲಗೆ, ಚಂದ್ರಶೇಖರ ಕಟ್ಟಿಮನಿ, ಜೇತೇಂದ್ರ ತಳವಾರ, ರಾಜೇಂದ್ರ ನಾಗೂರೆ, ಅತಿಥಿ ಶಿಕ್ಷಕರಾದ ಜಯಶ್ರೀ, ಪ್ರೀತಿ ಮೂಲಗೆ, ಅಂಬಿಕಾ ನಾಗೂರೆ, ಸಂಗೀತಾ ಗಂಭೀರೆ, ಶ್ರವಣಕುಮಾರ, ರಾಹುಲ್‌ ಮೂಲಗೆ, ವಿಕಾಸ ದೇಶಮುಖ ರವಿ ಹೀರಾಪುರ ಹಾಗೂ ನಿರಗುಡಿ ಗ್ರಾಮಸ್ಥರು ಶಾಲೆಯನ್ನು ಮಾದರಿಯನ್ನಾಗಿಸುವ ನಿಟ್ಟಿನಲ್ಲಿ ಸಂಕಲ್ಪ ತೊಟ್ಟಿದ್ದಾರೆ.

„ಮಹಾದೇವ ವಡಗಾಂವ

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.