ಕಾಣೆಯಾಗಿದ್ದ ಯುವಕನ ಶವ ನಾಲೆಯಲ್ಲಿ ಪತ
Team Udayavani, Aug 9, 2018, 3:02 PM IST
ಅರಕಲಗೂಡು: ಕಳೆದ ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ತಾಲೂಕಿನ ದೊಡ್ಡನಾಯಕನ ಕೊಪ್ಪಲು ಗ್ರಾಮದ ಯುವಕ ಶವ ಬುಧವಾರ ನಾಲೆಯಲ್ಲಿ ಪತ್ತೆಯಾಗಿದೆ.
ದೊಡ್ಡನಾಯಕನಕೊಪ್ಪಲು ಗ್ರಾಮದ ನಾಗ ರಾಜು (21) ಎಂಬಾತ ಸೋಮವಾರ ಮನೆ ಯಿಂದ ಹೊರ ಹೋದವ ವಾಪಸ್ಸಾಗಿರಲಿಲ್ಲ. ಆತ ಕಾಣೆಯಾಗಿದ್ದಾನೆ ಎಂದು ಆತನ ತಂದೆ ದಾಸೇ ಗೌಡ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ, ಆತನ ಶವ ಹಂಪಾ ಪುರದ ಬಳಿ ನಾಲೆಯಲ್ಲಿ ಬುಧವಾರ ಪತ್ತೆ ಯಾಗಿದ್ದು, ಆತನ ಕುತ್ತಿಗೆ ಭಾಗವನ್ನು ಸೀಳಿ ಕೊಲೆ ಮಾಡಿ ಶವವನ್ನು ನಾಲೆಯಲ್ಲಿ ಬೀಸಾಡಲಾಗಿದೆ.
ಮಂಗಳವಾರ ರಾಮೇನಹಳ್ಳಿ ಬಳಿ ನಾಗರಾಜು ಬೈಕ್ ಪತ್ತೆಯಾಗಿತ್ತು. ಬುಧವಾರ 12 ಗಂಟೆ ಸುಮಾರಿಗೆ ಹಂಪಾಪುರ ಬಳಿ ನಾಲೆಯಲ್ಲಿ ತೇಲುತ್ತಿದ್ದ ಶವವನ್ನು ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹೊರ ತೆಗೆದು ಅರಕಲಗೂಡು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಮೃತನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಪ್ರಕರಣ ಸಂಬಂಧ ಕೊಲೆ ಮೊಕದ್ದಮೆ ದಾಖಲಿಸಿಕೊಂಡು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ
BJP ಸ್ಥಳೀಯ ಮುಖಂಡರ ಅಸಹಕಾರ: ಬಿಎಸ್ವೈ ಬಳಿ ರಕ್ಷಣೆಗೆ ಮೊರೆಯಿಟ್ಟ ಎಚ್.ಡಿ.ರೇವಣ್ಣ