15ವರೆಗೆ ಹಾಸನ-ಮಂಗಳೂರು ರೈಲು ರದ್ದು
Team Udayavani, Sep 1, 2018, 5:05 PM IST
ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ರೈಲು ಹಳಿಗಳ ಮೇಲೆ ಸಾಕಷ್ಟು ಭೂ ಕುಸಿತವಾಗಿದೆ. ಹೀಗಾಗಿ ತೆರವು ಕಾರ್ಯಾಚರಣೆ ನಿರಂತರವಾಗಿ ನಡೆಯುತ್ತಿದ್ದು, ಈಗಾಗಲೇ ರದ್ದುಗೊಂಡಿರುವ ಹಾಸನ – ಮಂಗಳೂರು ನಡುವೆ ರೈಲು ಸಂಚಾರ ವನ್ನು ಸೆ.15ರವರೆಗೆ ಮುಂದೂಡಲಾಗಿದೆ.
ಆ.14 ಸುರಿದ ಭಾರೀ ಮಳೆಯಿಂದ ಸಕಲೇಶ ಪುರ – ಸುಬ್ರಹ್ಮಣ್ಯ ನಡುವಿನ ಘಟ್ಟ ಪ್ರದೇಶದ 56 ಕಿ.ಮೀ. ರೈಲು ಮಾರ್ಗದಲ್ಲಿ 68 ಕಡೆ ರೈಲು ಹಳಿಗಳ ಮೇಲೆ ಗುಡ್ಡ, ಮರ, ಬೃಹತ್ ಬಂಡೆ, ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿತವಾಗಿದೆ. ರೈಲು ಸಿಬ್ಬಂದಿ ಪರಿಹಾರ ಕಾರ್ಯಾಚರಣೆಯನ್ನು ಹಗಲು ರಾತ್ರಿ ನಡೆಸುತ್ತಿದ್ದಾರೆ. ಈಗಾಗಲೇ 40 ಕಡೆ ಮಣ್ಣು ತೆರವುಗೊಳಿ ಸಲಾಗಿದೆ. ಇನ್ನೂ 28 ಕಡೆ ಹಳಿಗಳ ಮೇಲೆ ಬಿದ್ದಿರುವ ಮಣ್ಣು, ಕಲ್ಲು, ಮರಗಳನ್ನು ರೈಲ್ವೆ ಸಿಬ್ಬಂದಿ, ಸ್ಥಳೀಯ ಕಾರ್ಮಿಕರು ಯಂತ್ರೋಪಕರಣಗಳನ್ನು ಬಳಸಿ ತೆರವು ಮಾಡುವ ಕಾರ್ಯಾ ಚರಣೆಯನ್ನು ಮುಂದು ವರಿಸಿದ್ದಾರೆ.
12 ದಿನ ತೆರವು: ಕೆಲವು ಕಡೆ ಲೋಡ್ಗಟ್ಟಲೇ ಮಣ್ಣು ಹಳಿಯ ಮೇಲೆ ಕುಸಿತವಾಗಿರುವ ಕಾರಣ ಅದನ್ನು ಹೊರಗಡೆ ಸಾಗಿಸುವುದೇ ಸವಾಲಾಗಿದೆ. ಕೆಲವು ಕಡೆ ಬಂಡೆಗಳು ಉರುಳಿ ಬಿದ್ದು, ಹಳಿಯೇ ಬಗ್ಗಿದೆ. ಹೀಗಾಗಿ ತೆರವು ಮಾಡಲು ವಿಳಂಬವಾಗುತ್ತಿದೆ. ಹೀಗಾಗಿ ಮಣ್ಣು ತೆರವು ಕಾರ್ಯಾಚರಣೆ ಪೂರ್ಣಗೊಳ್ಳಲು ಇನ್ನೂ 10-12 ದಿನಗಳು ಬೇಕಾಗಬಹುದು ಎನ್ನಲಾಗುತ್ತಿದೆ. ಬೆಂಗಳೂರು – ಕಣ್ಣೂರು- ಕಾರವಾರ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ಸೆ.11ರವರೆಗೆ ರದ್ದುಪಡಿಸ ಲಾಗಿದೆ. ಕಣ್ಣೂರು-ಕಾರವಾರ – ಬೆಂಗಳೂರು ಎಕ್ಸ್ ಪ್ರಸ್ ರೈಲು ಸಂಚಾರ ಸೆ.15ರವರೆಗೂ ಆರಂಭವಾಗು ವುದೇ ಇಲ್ಲ. ಯಶವಂತಪುರ – ಕಾರವಾರ ಎಕ್ಸ್ ಪ್ರಸ್, ಕಾರವಾರ – ಯಶವಂತಪುರ ಎಕ್ಸ್ಪ್ರೆಸ್ ಸೆ.14ರ ವರೆಗೂ ಸಂಚಾರ ಮಾಡುವುದಿಲ್ಲ. ಹೀಗೆ 8 ರೈಲುಗಳು ಈ ಮಾರ್ಗದಲ್ಲಿ ರದ್ದಾಗಿವೆ. ಆದರೆ, ಯಶ ವಂತಪುರ – ಕಾರವಾರ ಎಕ್ಸ್ಪ್ರೆಸ್ ರೈಲು ಸಂಚಾರ ಹಾಸನದವರೆಗೆ ಮುಂದುವರಿಯುತ್ತದೆ ಎಂದು ವಿವರ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು