ಮಾಡಾಳು ಶ್ರೀ ಸ್ವರ್ಣಗೌರಿ ಜಾತ್ರಾ ಮಹೋತ್ಸವ


Team Udayavani, Sep 13, 2018, 3:04 PM IST

has-1.jpg

ಅರಸೀಕೆರೆ: ತಾಲೂಕಿನ ಸುಕ್ಷೇತ್ರ ಮಾಡಾಳು ಗ್ರಾಮದ ಸ್ವರ್ಣಗೌರಿದೇವಿ ಜಾತ್ರಾ ಮಹೋತ್ಸವಕ್ಕೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸುಕೇತ್ರ ಕೋಡಿ ಮಠದ ಪೀಠಾಧ್ಯಕ್ಷ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ದೇವಿಗೆ ಶಾಸ್ತ್ರೋಕ್ತವಾಗಿ ಪೂಜಾ ಕೈಂಕರ್ಯ ನೆರವೇರಿಸಿ ಚಾಲನೆ ನೀಡಿದರು.

ರಾಜ್ಯದಲ್ಲಿ ಪ್ರಸಿದ್ಧಿ ಪಡೆದಿರುವ ಗ್ರಾಮದ ಸ್ವರ್ಣ ಗೌರಿದೇವಿಯ ಮೂರ್ತಿಯನ್ನು ಮೂಲ ಸನ್ನಿಧಿ ಬಾವಿಮನೆಯಿಂದ ಪ್ರತಿವರ್ಷದಂತೆ ಗೌರಿ ಹಬ್ಬದ ದಿನವಾದ ಬುಧವಾರ ಪೂಜಾ ಕೈಂಕರ್ಯ ನೆರವೇರಿಸಿ, ನಂತರ ಶ್ರೀಗಳ ನೇತೃತ್ವದಲ್ಲಿ ವಿವಿಧ ಮಂಗಳ ವಾದ್ಯಗಳೊಂದಿಗೆ ಗ್ರಾಮದ ಹೆಬ್ಟಾಗಿಲ್ಲಿರುವ ಶ್ರೀ ಬಸವೇಶ್ವರ ದೇವಾಲಯಕ್ಕೆ ಮೆರವಣಿಗೆ
ಯಲ್ಲಿ ಕರೆ ತರಲಾಯಿತು.

ದಾರಿಯುದ್ದಕ್ಕೂ ಭಕ್ತರು ಕರ್ಪೂರದ ಆರತಿ ಹಚ್ಚುವ ಮೂಲಕ ತಮ್ಮ ಭಕ್ತಿಭಾವ ಸಮರ್ಪಿಸಿದರು. ಶ್ರೀದೇವಿಯ ಪ್ರತಿಷ್ಠಾಪನೆಯ ಧಾರ್ಮಿಕ ವಿಧಿವಿಧಾನಗಳು ನೆರವೇರಿಸಿದ ಬಳಿಕ ಭಕ್ತರು ಸಾಲಿನಲ್ಲಿ ನಿಂತು ಸ್ವರ್ಣಗೌರಿ ದೇವಿಯ ದರ್ಶನ ಪಡೆದರು. ನಂತರ ಪೂಜಾ ಕಾರ್ಯಗಳನ್ನು ನೆರವೇರಿಸಲು ಅವಕಾಶ ಕಲ್ಪಿಸಲಾಯಿತು. 

ಈ ಸಂದರ್ಭದಲ್ಲಿ ಜಿಪಂ ಸದಸ್ಯ ಮಾಡಾಳು ಸ್ವಾಮಿ, ತಾಪಂ ಸದಸ್ಯರಾದ ಯಶೋದಮ್ಮ, ವನಜಾ ಪ್ರಕಾಶ್‌ಮೂರ್ತಿ, ಗ್ರಾಪಂ ಅಧ್ಯಕ್ಷ ಚಂದ್ರ ಶೇಖರ್‌, ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮದ ಮುಖಂಡರು ಇದ್ದರು.

ಭಕ್ತಸಾಗರ: ಗೌರಿ ಹಬ್ಬದ ಅಂಗವಾಗಿ ಮುಂಜಾನೆಯಿಂದಲೇ ಗ್ರಾಮಕ್ಕೆ ಭಕ್ತರ ಸಮೂಹ ಆಗಮಿ ಸಿತ್ತು. ಎಲ್ಲಿ ನೋಡಿದರೂ ಸ್ವರ್ಣಗೌರಿ ದೇವಿಯ ಭಕ್ತರೇ ತುಂಬಿದ್ದರು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಸಾರಿಗೆ ಸಂಸ್ಥೆ ಬಸ್‌ಗಳು ಮತ್ತು ಖಾಸಗಿ ವಾಹನಗಳಿಂದ ಮಾಡಾಳು ಗ್ರಾಮಕ್ಕೆ ಬಂದಿದ್ದರು.

ಬಸವೇಶ್ವರ ದೇವಾಲಯದಿಂದ ಹುಳಿಯಾರ್‌ ರಸ್ತೆ ಯವರೆಗೂ ಭಕ್ತರು ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ತಮ್ಮ ಹರಕೆ, ಕಾಣಿಕೆ ಸಲ್ಲಿಸುತ್ತಿದ್ದ ದೃಶ್ಯ ಕಂಡು ಬಂತು.  ನೂರಾರು ಭಕ್ತರು ದೇವಾಲಯ ಮುಂಭಾಗದಲ್ಲಿ ನೂತನವಾಗಿ ನಿರ್ಮಿಸಿರುವ ಅಗ್ನಿ ಕುಂಡದಲ್ಲಿ ಅಪಾರ ಪ್ರಮಾಣದ ಕರ್ಪೂರ ಸಮರ್ಪಿಸಿ, ಗುಗ್ಗಳ ಸೇವೆ ಸಲ್ಲಿಸಿದರು. ಶ್ರೀದೇವಿಗೆ ಪ್ರಿಯವಾದ ಮಡಿಲಅಕ್ಕಿಯನ್ನು ಸೀರೆಗಳ ಕುಪ್ಪಸಗಳನ್ನು ನೀಡಿ ಮಹಿಳೆಯರು ತಮ್ಮ ಹರಕೆ ತೀರಿಸಿದರು. ಇನ್ನೂ 9 ದಿನಗಳ ಕಾಲ ಗ್ರಾಮದಲ್ಲಿ ಶ್ರೀದೇವಿಯ ಜಾತ್ರಾ ಮಹೋತ್ಸವವು ಅತ್ಯಂತ ಸಂಭ್ರಮದಿಂದ ನಡೆಯಲಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಮಾಡಾಳು ಗ್ರಾಮಕ್ಕೆ ಬರುತ್ತಾರೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.