ಶಿರಾಡಿ ಘಾಟ್ನಲ್ಲಿಬಸ್ ಸಂಚಾರ ಆರಂಭ
Team Udayavani, Oct 4, 2018, 1:37 PM IST
ಸಕಲೇಶಪುರ: ಶಿರಾಡಿ ಘಾಟ್ನಲ್ಲಿ ಪ್ರಯಾಣಿಕರ ಬಸ್ಗಳ ಸಂಚಾರಕ್ಕೆ ಬುಧವಾರದಿಂದ ಅವಕಾಶ ನೀಡಿದ್ದ ರಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಹೋಗಲು ಪ್ರಯಾಣಿಕರಿಗೆ ಅನುಕೂಲವಾಗಿದೆ. ಕಳೆದ ಜೂನ್, ಜುಲೈ, ಆಗಸ್ಟ್ ಮಾಹೆಯಲ್ಲಿ ಸುರಿದ ವ್ಯಾಪಕ ಮಳೆಯಿಂದಾಗಿ ಶಿರಾಡಿ ಘಾಟ್ನಲ್ಲಿ ಅಲ್ಲಲ್ಲಿ ಭೂ ಕುಸಿತ ಉಂಟಾಗಿ ರಸ್ತೆಯನ್ನು ಬಂದ್ ಮಾಡಲಾಗಿತ್ತು.
ಕಳೆದ ಸೆಪ್ಟೆಂಬರ್ ಮೊದಲ ವಾರದಿಂದ ಲಘು ವಾಹನಗಳಿಗೆ ಶಿರಾಡಿಯಲ್ಲಿ ಸಂಚರಿಸಲು ಅವಕಾಶ ನೀಡಲಾಗಿದ್ದು ಬಸ್ಗಳ ಸಂಚಾರಕ್ಕೆ ಅವಕಾಶ ನೀಡು ವಂತೆ ಸಾರ್ವಜನಿಕ ವಲಯದಿಂದ ಒತ್ತಡ ಬಂದಿದ್ದರಿಂದ ಅ.3 ರಿಂದ ಶಿರಾಡಿ ಘಾಟ್ನಲ್ಲಿ ಪ್ರಯಾಣಿಕರ ವಾಹನಗಳ ಸಂಚಾರಕ್ಕೆ ಅವಕಾಶ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಮಾಡಿದ್ದರು.
ಇದರಿಂದ ದಕ್ಷಿಣ ಕನ್ನಡದ ಪುಣ್ಯ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ, ಧರ್ಮ ಸ್ಥಳಕ್ಕೆ ಹೋಗಲು ಭಕ್ತಾದಿಗಳಿಗೆ ಬಹಳ
ಅನೂಕೂಲವಾಗುತ್ತಿದೆ. ಜೊತೆಗೆ ದಕ್ಷಿಣ ಕನ್ನಡದ ವಿವಿಧ ವಿದ್ಯಾ ಸಂಸ್ಥೆಗಳಲ್ಲಿ ಓದುತ್ತಿರುವ ಸಕಲೇಶಪುರ ತಾಲೂಕಿನ ವಿದ್ಯಾರ್ಥಿಗಳು ಮತ್ತು ಪೋಷಕರಿಗೂ ಸಹ ಬಹಳ ಅನುಕೂಲ ವಾಗುತ್ತಿದ್ದು ಜೊತೆಗೆ ಬೆಂಗಳೂರು ಮಂಗಳೂರು ನಡುವೆ ವ್ಯಾಪಾರ, ಉದ್ಯೋಗ ಮತ್ತಿತರ ಉದ್ದೇಶಗಳಿಂದ ತಿರುಗಾಡುವವರಿಗೂ ಸಹ ಅನು ಕೂಲವಾಗುತ್ತಿದೆ. ಇದೇ ವೇಳೆ ಭಾರಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡುವ ನಿಟ್ಟಿನಲ್ಲಿ ಚಿಂತನೆ ಮಾಡಲಾಗುತ್ತಿದ್ದು ಇನ್ನು ಕೆಲವು ದಿನಗಳಲ್ಲಿ ಶಿರಾಡಿಯಲ್ಲಿ ಬಾರಿ ವಾಹನಗಳ ಸಂಚಾರ ಸಹ ಆರಂಭಗೊಳ್ಳುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ