ದರೋಡೆ ನಾಟಕವಾಡಿದ ಆರೋಪಿ ಸೆರೆ


Team Udayavani, Dec 10, 2018, 3:44 PM IST

has-1.jpg

ಹಾಸನ: ತಾನು ಕೆಲಸ ಮಾಡುತ್ತಿದ್ದ ಕಂಪನಿಯ 9.5 ಲಕ್ಷ ರೂ. ನಗದನ್ನು ಪಾವತಿಸಿದೆ ದರೋಡೆ ಕೋರರು ಅಪಹರಿಸಿದರು ಎಂದು ನಾಟಕವಾಡಿದ್ದ ನೌಕರರನ್ನು ಪೊಲೀಸರು ಬಂಧಿಸಿ 7 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಸಾಲ ಮಾಡಿಕೊಂಡಿದ್ದ ಚಂದನ್‌ ತನ್ನ ಇಬ್ಬರು ಸ್ನೇಹಿತರನ್ನು ಬಳಸಿಕೊಂಡು ದರೋಡೆಯ ನಾಟಕ ವಾಡಿ ಕಂಪನಿಯ ಹಣ ಲಪಟಾಯಿಸುವ ಪ್ರಯತ್ನ ನಡೆಸಿದ್ದುದು ತನಿಖೆಯ ವೇಳೆ ಬಯಲಾಗಿದೆ ಎಂದು ಜಿಲ್ಲಾ ಪೊಲೀಸ್‌ ಮುಖ್ಯಾಧಿಕಾರಿ ಎ.ಎನ್‌. ಪ್ರಕಾಶ್‌ಗೌಡ ಅವರು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.

ಪ್ರಕರಣದ ವಿವರ: ನಗರದ ಕೆ.ಹೊಸಕೊಪ್ಪಲು ಬಡಾವಣೆಯ ನಿವಾಸಿ ಶಾಂತೇಗೌಡ ಎಂಬವರ ಪುತ್ರ ಎಂ.ಎಸ್‌. ಚಂದನ್‌ ಎಂಬಾತ ನಗರದ ಕೈಗಾರಿಕಾಭಿವೃದ್ಧಿ ಕೇಂದ್ರದಲ್ಲಿರುವ ಪೂಜಾ ಫಿಡ್ಸ್‌ ಎಂಬ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಆತ ಚಿಕ್ಕಕಣಗಾಲ್‌ ಮತ್ತು ಜನಿವಾರ ಗ್ರಾಮಗಳ ಕೋಳಿ ಫಾರಂಗಳಿಗೆ ಪೂಜಾ ಫಿಡ್ಸ್‌ನಿಂದ ಸರಬರಾಜು ಕೋಳಿಗಳು ಮತ್ತು ಫಿಡ್ಸ್‌ನಿಂದ ವಸೂಲಾದ 9.5ಲಕ್ಷ ರೂ. ನಗದನ್ನು ಕಂಪನಿಗೆ ಪಾವತಿಸ ಬೇಕಾಗಿತ್ತು. ಆದರೆ ನ.25 ರಂದು ಭಾನುವಾರ ವಾಗಿದ್ದರಿಂದ ಕಂಪನಿಗೆ ಪಾವತಿಸದೆ ಚಂದನ್‌ ಮನೆಯಲ್ಲಿಟ್ಟುಕೊಂಡಿದ್ದ. ನ.26 ರ ಸೋಮವಾರ ಸುಮಾರು 11 ಗಂಟೆ ಸಮಯದಲ್ಲಿ ಕಂಪನಿಗೆ ಪಾವತಿಸಲೆಂದು 9.5 ಲಕ್ಷ ರೂ.ಗಳೊಂದಿಗೆ ತನ್ನ ಬೈಕಿನಲ್ಲಿ ಹಾಸನ ಬೈಪಾಸ್‌ ರಸ್ತೆಯ ರೈಲ್ವೆ ಟ್ರ್ಯಾಕ್‌ನ ಬಳಿ ಹೋಗುತ್ತಿದ್ದಾಗ ಹಿಂಬಾಲಿಸಿಕೊಂಡು ಬೈಕ್‌ ನಲ್ಲಿ ಬಂದ ಇಬ್ಬರು ಬೈಕ್‌ನ್ನು ಅಡ್ಡಗಟ್ಟಿ ಚಾಕುವಿನಿಂದ ಹಲ್ಲೆ ನಡೆಸಿ ಬ್ಯಾಗ್‌ನಲ್ಲಿದ್ದ 9.5 ಲಕ್ಷ ರೂ.,ಗಳನ್ನು ಅಪಹರಿಸಿದ್ದರು. ದರೋಡೆ ಕೋರರಿಂದ ಹಲ್ಲೆಗೊಳಗಾಗಿ ಸ್ಥಳದಲ್ಲಿಯೇ ಬಿದ್ದಿದ್ದ ಚಂದನ್‌ನನ್ನು ಕಂಡ ರಸ್ತೆಯಲ್ಲಿ ಸಂಚರಿಸಿದವರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ವಿಚಾರಣೆಯಿಂದ ಬಯಲಾದ ಸತ್ಯ: ಪೊಲೀಸರು ಸ್ಥಳಕ್ಕೆ ಹೋಗಿ ಚಂದನ್‌ನನ್ನು ಆಸ್ಪತ್ರೆಗೆ ಸಾಗಿಸಿ ಪ್ರಕರಣದ ತನಿಖೆ ನಡೆಸುತ್ತಿದ್ದರು. ಚಂದನ್‌ ಬಗ್ಗೆಯೇ ಶಂಕೆ ಬಂದಿದ್ದರಿಂದ ಆತನನ್ನು ವಿಚಾರಣೆ ಗೊಳಪಡಿದಾಗ ತಾನೇ ದರೋಡೆಯ ನಾಟಕ ಸೃಷ್ಟಿಸಿದ್ದನ್ನು ಒಪ್ಪಿಕೊಂಡಿದ್ದಾನೆ. ತಾನು ಬಹಳಷ್ಟ
ಸಾಲ ಮಾಡಿದ್ದರಿಂದ ಸಾಲ ತೀರಿಸಲು ಕಂಪನಿಗೆ ಕಟ್ಟಬೇಕಾಗಿದ್ದ ಹಣವನ್ನು ಲಪಟಾಯಿಸಲು ತನ್ನ ಸೇಹಿತರಾದ ಲೋಕಿ ಉರುಫ್ ಕೆಂಚ ಹಾಗೂ ನವೀನ ಎಂಬವರನ್ನು ಬಳಸಿಕೊಂಡು ಅವರು ದರೋಡೆ ಮಾಡುವಂತೆ ನಾಟಕ ಮಾಡಿದ್ದೆ. ಲೋಕಿ ಮತ್ತು ನವೀನ 2 ಲಕ್ಷ ರೂ. ತೆಗೆದುಕೊಂಡು ಹೋಗಿದ್ದು, 50 ಸಾವಿರ ರೂ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಖರ್ಚಾಗಿದೆ. ಇನ್ನುಳಿದ 7 ಲಕ್ಷ ರೂ. ಹಣ ಮನೆಯಲ್ಲಿ ಬಚ್ಚಿಟ್ಟಿರುವುದಾಗಿ ವಿಚಾರಣೆ
ವೇಳೆ ಚಂದನ್‌ ಒಪ್ಪಿಕೊಂಡ. ಆನಂತರ ಆತನಿಂದ 7 ಲಕ್ಷ ರೂ. ನಗದು ಹಾಗು ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ. ಚಂದನ್‌ಗೆ ಸಹಕರಿಸಿದ್ದ ಲೋಕಿ ಮತ್ತು ನವೀನ 2 ಲಕ್ಷ ರೂ. ನೊಂದಿಗೆ ತಲೆಮರೆಸಿಕೊಂಡಿದ್ದಾರೆ ಎಂದು ವಿವರಿಸಿದರು.

ಅಪರಾಧ ಹಿನ್ನೆಲೆ: ಚಂದನ್‌ಗೆ ಸಹಕರಿಸಿದ್ದ ಲೋಕಿ ಮತ್ತು ನವೀನ ಅಪರಾಧ ಹಿನ್ನೆಲೆಯುಳ್ಳವರಾಗಿದ್ದು, ರೌಡಿಶೀಟರ್‌ಗಳು. ಲೋಕಿಯು ಒಂದು ಅತ್ಯಾಚಾರ, ಒಂದು ಕೊಲೆ, 3 ಸುಲಿಗೆ, 7 ಹೊಡೆದಾಟದ ಪ್ರಕರಣಗಳಲ್ಲಿ ಭಾಗಿಯಾಗಿದ್ದು, 7 ವರ್ಷ 10 ತಿಂಗಳು ಜೈಲು ಶಿಕ್ಷೆ ಅನುಭವಿಸಿ ಇತ್ತೀಚೆಗಷ್ಟೇ ಜೈಲಿ ನಿಂದ ಹೊರ ಬಂದಿದ್ದ. ನವೀನನೂ ಒಂದು ಕೊಲೆ, ಓಂದು ಸುಲಿಗೆ, 2 ಕೊಲೆ ಯತ್ನ ಮತ್ತು ಒಂದು ಹೊಡೆದಾಟದ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಇವರಿಬ್ಬರ ಪತ್ತೆಗೆ ಬಲೆ ಬೀಸಲಾಗಿದೆ ಎಂದರು.

ಈ ಪ್ರಕರಣವನ್ನು ಭೇದಿಸಲು ಶ್ರಮಿಸಿದ ಇನ್‌ ಸ್ಪೆಕ್ಟರ್‌ ಸತ್ಯನಾರಾಯಣ, ಬಡಾವಣೆ ಠಾಣೆ ಪಿಎಸ್‌ಐ ಸುರೇಶ್‌, ಎಎಸ್‌ಐ ಕೇಶವ ಪ್ರಸಾದ್‌ ಮತ್ತು ಸಿಬ್ಬಂದಿಯವರಾದ ಸೋಮಶೇಖರ್‌, ಲೋಹಿತ್‌, ರಘು, ಪ್ರವೀಣ, ಪದೀಪ್‌ ಅವರ® ತಂಡಕ್ಕೆ 10 ಸಾವಿರ ರೂ. ಬಹುಮಾನ ಘೋಷಣೆ
ಮಾಡಲಾಗಿದೆ ಎಂ ದರು. ಎಎಸ್ಪಿ ಬಿ.ಎನ್‌.ನಂದಿನಿ, ಇನ್‌ಸ್ಪೆಕ್ಟರ್‌ ಸತ್ಯನಾರಾಯಣ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.