ದಶಕ ಕಳೆದ್ರೂ ತೆರೆದಿಲ್ಲ ಜಿಮ್‌


Team Udayavani, Jan 26, 2019, 7:55 AM IST

gym.jpg

ಚನ್ನರಾಯಪಟ್ಟಣ: ತಾಲೂಕು ಕ್ರೀಡಾಂಗಣದಲ್ಲಿರುವ ಸಾರ್ವಜನಿಕ ಮಲ್ಟಿ ಜಿಮ್‌ ಬಳಕೆಗೆ ನೀಡದ ಕಾರಣ ಪಾಳು ಬಿದ್ದಿದೆ. ಕೊಠಡಿ ಬಾಗಿಲು ತೆರೆದು 10 ವರ್ಷಗಳೇ ಕಳೆದಿದ್ದು, ಅಲ್ಲಿನ ಪರಿಕರಗಳು ಧೂಳು ತುಂಬಿಕೊಂಡು ತಕ್ಕು ಹಿಡಿಯುತ್ತಿವೆ. ಲಕ್ಷಾಂತರ ರೂ. ಜನರ ತೆರಿಗೆ ಹಣ ನೀರಿನಲ್ಲಿ ಹೋಮ ಮಾಡಿದಂತಾಗಿದೆ.

ಯುವಜನ ಮತ್ತು ಕ್ರೀಡಾ ಇಲಾಖೆಯು 10 ವರ್ಷಗಳ ಹಿಂದೆ 5 ಲಕ್ಷ ರೂ. ವೆಚ್ಚ ಮಾಡಿ ಮಲ್ಟಿ ಜಿಮ್‌ ಪ್ರಾರಂಭಿಸಿ, ಅಗತ್ಯ ಪರಿಕರಗಳನ್ನೂ ಒದಗಿಸಿದೆ. ಆದರೆ, ಜನರ ಧೂಳು ತುಂಬಿಕೊಂಡು ತುಕ್ಕು ಹಿಡಿಯುತ್ತಿವೆ. ಒಂದು ದಶಕದಿಂದ ಜಿಮ್‌ ಪರಿಕರವನ್ನು ಒಂದು ದಿನವೂ ಬಳಸದೆ ಕೊಠಡಿಯಲ್ಲಿ ಇರಿಸಲಾಗಿದೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಕಣ್ಣು ಮುಚ್ಚಿಕೂತಿದ್ದಾರೆ.

ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ತಾಲೂಕು ಕ್ರೀಡಾಂಗಣದ ಒಂದು ಕೋಣೆಯನ್ನು ಮಲ್ಟಿಜಿಮ್‌ ಮಾಡಿ ಅಲ್ಲಿಗೆ ಅಗತ್ಯವಿರುವ ಪರಿಕರವನ್ನು ಲಕ್ಷಾಂತರ ರೂ. ವೆಚ್ಚ ಮಾಡಿ ಪೂರೈಕೆ ಮಾಡಿದೆ. ಆದರೆ, ಇದು ಸಾರ್ವಜನಿಕರ ಉಪಯೋಗಕ್ಕೆ ನೀಡದಿರುವುದರಿಂದ ಕೋಣೆಯ ಒಳಗೆ ಇಲಿ ಹೆಗ್ಗಣಗಳ ವಾಸ ಮಾಡುತ್ತಿವೆ.

ಪಾಳು ಬಿದ್ದಿವೆ: ಹಣವಂತರು ಖಾಸಗಿ ಜಿಮ್‌ಗಳಿಗೆ ತೆರಳಿ ಸದೃಢ ದೇಹ ಹೊಂದಿ, ಉತ್ತಮ ಕ್ರೀಡಾಪಟುಗಳಾಗಿ ಹೊರ ಹೊಮ್ಮುತ್ತಾರೆ. ಆದರೆ, ಬಡ ಕೂಲಿ ಕಾರ್ಮಿಕರ ಮಕ್ಕಳು, ಬಡವರಿಗೆ ಸೂಕ್ತ ಸೌಲಭ್ಯವಿಲ್ಲದೆ ಕ್ರೀಡಾ ಚಟುವಟಿಕೆಗಳಿಂದ ದೂರ ಉಳಿಯುತ್ತಾರೆ. ಇಂತಹವರಿಗಾಗಿ ಸರ್ಕಾರ ಜಿಮ್‌ ಪ್ರಾರಂಭಿಸಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕೊಠಡಿ ಬಾಗಿಲು ತೆರೆಯದೇ ಪಾಳು ಬಿದ್ದಿದೆ.

ಕೊಠಡಿಯಲ್ಲಿ ದಶಕದಿಂದ ಧೂಳು ಹಿಡಿಯುತ್ತಿರುವ ಜಿಮ್‌ ಪರಿಕರದ ಬಗ್ಗೆ ಕ್ರೀಡಾಸಕ್ತರು, ಯುವಕರು ತಹಶೀಲ್ದಾರ್‌ ಹಾಗೂ ತಾಪಂ ಇಒ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಯುವಜನ ಮತ್ತು ಕ್ರೀಡಾ ಇಲಾಖೆ ಕಚೇರಿ ಜಿಲ್ಲಾ ಕೇಂದ್ರದಲ್ಲಿದೆ. ಇದರ ಜವಾಬ್ದಾರಿ ಅವರದ್ದು ಎಂದು ಹೇಳಿ ಕೈ ತೊಳೆದುಕೊಳ್ಳುತ್ತಿದೆ.

ಓರ್ವ ಸಿಬ್ಬಂದಿ ನೇಮಿಸಬಹುದು

ಅಭಿವೃದ್ಧಿ ಹೆಸರಿನಲ್ಲಿ ಎರಡು ದಶಕದಿಂದ ತಾಲೂಕು ಕ್ರೀಡಾಂಗಣಕ್ಕೆ 3 ಕೋಟಿ ರೂ. ವೆಚ್ಚ ಮಾಡಿದ್ದರೂ ಅಗತ್ಯ ಇರುವ ಜಿಮ್‌ ಕೊಠಡಿ ನಿರ್ಮಾಣಕ್ಕೆ ಮುಂದಾಗಲಿಲ್ಲ. ಪಾಳು ಬಿದ್ದಿರುವ ಜಿಮ್‌ ಕೊಠಡಿ ಬಾಗಿಲು ತೆರೆದು ಮಾಸಿಕ ಇಂತಿಷ್ಟು ಹಣ ನಿಗದಿ ಮಾಡಿ ಅದರಲ್ಲಿ ಬರುವ ಹಣದಿಂದ ಓರ್ವ ಕೆಲಸಗಾರರ ನೇಮಿಸಿ ಉಪಯೋಗಕ್ಕೆ ಅವಕಾಶ ಕಲ್ಪಿಸಬಹುದು. ಇದನ್ನು ಮಾಡುವಲ್ಲಿಯೂ ಅಧಿಕಾರಿಗಳು ವಿಫ‌ಲರಾಗಿದ್ದಾರೆ.

ಶಾಮಸುಂದರ್‌ ಕೆ.ಅಣ್ಣೇನಹಳ್ಳಿ

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.