ಬಜೆಟ್ ಪೂರ್ವಭಾವಿ ಸಭೆ


Team Udayavani, Jan 30, 2019, 7:29 AM IST

budget.jpg

ಚನ್ನರಾಯಪಟ್ಟಣ: ಪುರಸಭೆ ಬಜೆಟ್ ಪೂರ್ವ ಭಾವಿ ಸಭೆಯಲ್ಲಿ ಪುರಸಭೆ ಸದಸ್ಯರು ಸೇರಿದಂತೆ ಸಾರ್ವಜನಿಕರು ಬಜೆಟ್‌ಗೆ ಸಲಹೆ ನೀಡದೆ ಅಧಿಕಾರಿಗಳ ಬೆವರಿಳಿಸಿದರು. ಪಟ್ಟಣದ ಪುರಸಭೆ ಆವರಣದಲ್ಲಿ 2019-20ರ ಆಯವ್ಯಯ ಮಂಡನೆಗಾಗಿ ಪುರಸಭಾ ಆಡಳಿತಾಧಿ ಕಾರಿ ಅಧ್ಯಕ್ಷತೆಯಲ್ಲಿ ಮಂಗಳವಾರ ಸಾರ್ವಜನಿಕ ಸಲಹಾ ಸಭೆ ಏರ್ಪಡಿಸಿದ್ದರು. ಬಜೆಟ್‌ಗೆ ಸಂಬಂಧಿ ಸಿದ ಚರ್ಚೆಗಳ ಬದಲಾಗಿ ಪುರಸಭೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಹರಿಹಾಯ್ದರು.

ಅಧಿಕಾರಿಗಳ ಬೇಜವಾಬ್ದಾರಿ: ಪುರಸಭೆ ಚುನಾ ವಣೆ ನಡೆದು 6 ತಿಂಗಳಾದರೂ ಸರ್ಕಾರದ ತೊಡಕಿ ನಿಂದ ಆಡಳಿತ ಮಂಡಳಿ ಅಧಿಕಾರ ನಡೆಸುತ್ತಿಲ್ಲ. ಇದರಿಂದ ಅಧಿಕಾರಿಗಳಿಗೆ ಕೇಳುವವರಿಲ್ಲದಂತಾ ಗಿದ್ದು, ಮನಸೋ ಇಚ್ಛೆ ವರ್ತಿಸುತ್ತಿದ್ದಾರೆ. ಈ-ಸ್ವತ್ತು ಮಾಡಲು 7 ತಿಂಗಳು ಕಚೇರಿಗೆ ಅಲೆಯ ಬೇಕಾಗಿದೆ. ಖಾಸಗಿ ಶಾಲೆಗಳು ಕೋಟ್ಯಂತರ ರೂ. ತೆರಿಗೆ ಕಟ್ಟದೇ ಇದ್ದರೂ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.

ತೆರಿಗೆ ವಂಚನೆ: ಬಡವರು ಹಾಗೂ ಮಧ್ಯಮ ವರ್ಗದವರು ಸಕಾಲಕ್ಕೆ ತೆರಿಗೆ ನೀಡದೆ ಹೋದರೆ ಕುಡಿಯುವ ನೀರು ಬಂದ್‌ ಮಾಡಿ ತೊಂದರೆ ನೀಡುತ್ತಾರೆ. ಹಣವಂತರು ಪುರಸಭೆಯಿಂದ ಪರವಾನಗಿ ಪಡೆಯದೇ ಐದು ಅಂತಸ್ತಿನ ಕಟ್ಟಡ ಕಟ್ಟುತ್ತಿದ್ದರೂ ಅವರ ಗೋಜಿಗೆ ಹೋಗುವುದಿಲ್ಲ. ನಗರದಲ್ಲಿನ ಶ್ರೀಮಂತರು ಕೋಟ್ಯಂತರ ರೂ. ತೆರಿಗೆ ವಂಚನೆ ಮಾಡುತ್ತಿರುವುದರ ಹಿಂದೆ ಕಂದಾಯ ಅಧಿಕಾರಿಗಳ ಕೈವಾಡವಿದೆ ಎಂದು ಪುರ ಸಭೆ ಸದಸ್ಯ ನವೀನ್‌ ತಾರಟೆಗೆ ತೆಗೆದುಕೊಂಡರು.

ಘನ್ನಿ ಸಮೀಪದ ಹೇಮಾವತಿ ಹೋಳೆಯ ಕುಡಿಯುವ ನೀರ ಯಂತ್ರಗಾರದ ಬಳಿ ಅಕ್ರಮ ವಾಗಿ ಮರಳು ದಂಧೆ ನಡೆಸಲಾಗುತ್ತಿದೆ ಈ ಬಗ್ಗೆ ಮುಖ್ಯಾಧಿಕಾರಿ ಸಿ.ಎಸ್‌.ಬಸವರಾಜು ಅವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ವಾಗಿಲ್ಲ ಎಂದು ಶಿವರಾಂ ಆರೋಪಿಸಿದರು.

ಪೌರ ಕಾರ್ಮಿಕರ ಉಪಾಹಾರ ಅವ್ಯವಹಾರ: ಸರ್ಕಾರ ಇಂದಿರಾ ಕ್ಯಾಂಟೀನ್‌ ಇದ್ದರೂ ಪೌರಕಾರ್ಮಿಕರಿಗೆ ಖಾಸಗಿ ಹೋಟೆಲ್‌ನಲ್ಲಿ ಉಪಹಾರ ಕೊಡಿಸುವ ಮೂಲಕ ಪುರಸಭೆಯ ಲಕ್ಷಾಂತರ ಬಿಲ್‌ ಮಾಡಲಾಗುತ್ತಿದೆ. ಇದೇ ಹಣವನ್ನು ಇಂದಿರಾ ಕ್ಯಾಂಟೀನ್‌ಗೆ ನೀಡಬೇಕು. ತಮಗೆ ಕಮಿಷನ್‌ ನೀಡುವುದಿಲ್ಲ ಎಂದು ಇಂದಿರಾ ಕ್ಯಾಂಟೀನ್‌ಗೆ ಹೋಗುತ್ತಿಲ್ಲ, ಇಂದಿರಾ ಕ್ಯಾಂಟೀನ್‌ನಲ್ಲಿ ನಿತ್ಯ ಎಷ್ಟು ಉಪಾಹಾರ ಹಾಗೂ ಊಟದ ಟೋಕನ್‌ ಹೋಗುತ್ತಿದೆ ಎಂದು ಪರಿಶೀಲಿಸಬೇಕು ಎಂದು ದಂಡೋರ ಸಮಿತಿ ಅಧ್ಯಕ್ಷ ಮಂಜುನಾಥ್‌ ಒತ್ತಾಯಿಸಿದರು.

ರೈಲ್ವೆ ನಿಲ್ದಾಣದಿಂದ ನಗರಕ್ಕೆ ಆಗಮಿಸುವ ರಸ್ತೆಯಲ್ಲಿ ಬೀದಿ ದೀಪದ ಸಮಸ್ಯೆ ಇದೆ. ರಸ್ತೆ ಗುಂಡಿ ಬಿದ್ದಿದೆ. ಈ ಬಗ್ಗೆ ಗಮನ ಹರಿಸಬೇಕು ಎಂದು ಸದಸ್ಯೆ ಸುಜಾತ ತಿಳಿಸಿದರು. ಪುರಸಭೆ ಮುಖ್ಯಾಧಿಕಾರಿ ಸಿ.ಎಸ್‌.ಬಸವರಾಜು, ವ್ಯವಸ್ಥಾಪಕ ಕೃಷ್ಣೇಗೌಡ, ಪರಿಸರ ಅಭಿಯಂತರ ವೆಂಕಟೇಶ್‌, ಕಂದಾಯ ನಿರೀಕ್ಷಕ ಯತೀಶ್‌ ಮುಂತಾದವರಿದ್ದರು.

ಟಾಪ್ ನ್ಯೂಸ್

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.