ಅಗ್ರಿಗೋಲ್ಡ್‌ ಪರಿಹಾರ ಹಣಕ್ಕಾಗಿ ಗ್ರಾಮಸ್ಥರ ಧರಣಿ


Team Udayavani, Feb 3, 2019, 7:20 AM IST

agri.jpg

ಹಾಸನ: ಅಗ್ರಿಗೋಲ್ಡ್‌ ಸಂಸ್ಥೆಯಿಂದ ವಂಚನೆಗೊಳ ಗಾದ ಗ್ರಾಹಕರಿಗೆ ಮತ್ತು ಏಜೆಂಟರಿಗೆ ಕೂಡಲೇ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಅಗ್ರಿಗೋಲ್ಡ್‌ ಕಸ್ಟಮರ್ ಮತ್ತು ಏಜೆಂಟ್ಸ್‌ ವೆಲ್‌ಫೇರ್‌ ಅಸೋಸಿಯೇಶನ್‌ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹೂಡಿಕೆದಾರರು ಪ್ರತಿಭಟನೆ ನಡೆಸಿದರು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಜಿಲ್ಲಾ ಧಿಕಾರಿ ಕಚೇರಿ ಆವರಣಕ್ಕೆ ಬಂದು ಧರಣಿ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಅಗ್ರಿಗೋಲ್ಡ್‌ ಸಂಸ್ಥೆಯು ಲಕ್ಷಾಂತರ ಜನರಿಗೆ ಉದ್ಯೋಗ ಕಲ್ಪಸುತ್ತೇವೆಂದು, ನೂರಾರು ವ್ಯಾಪಾರಗಳನ್ನು ಮಾಡುತ್ತೇವೆಂದು ಹೇಳಿ ಈಗ ದಿವಾಳಿಯಾಗಿರು ವುದಾಗಿ ಘೋಷಿಸಲ್ಪಟ್ಟಿದೆ.

ಒಟ್ಟು ಎಂಟು ರಾಜ್ಯ ಗಳಲ್ಲಿನ ಲಕ್ಷಾಂತರ ಕುಟುಂಬಗಳ ಆರ್ಥಿಕ ಅಭಿ ವೃದ್ಧಿಗೆ ಮುಂದಾಗಿರುವುದಾಗಿ ಜನಸಾಮಾನ್ಯರಲ್ಲಿ ನಂಬಿಕೆ ಹುಟ್ಟಿಸಿ ಹೂಡಿಕೆಯನ್ನು ಆಕರ್ಷಿಸಿತ್ತು. ಅಗ್ರಿಗೋಲ್ಡ್‌ ಸಂಸ್ಥೆಯು ಕರ್ನಾಟಕ ರಾಜ್ಯದಲ್ಲೇ ಸುಮಾರು 8.50 ಲಕ್ಷದಷ್ಟು ಗ್ರಾಹಕರನ್ನು ಪಡೆದು ಸುಮಾರು 2500 ಕೋಟಿ ಹಣವನ್ನು ಠೇವಣಿಯಾಗಿ ಸಂಗ್ರಹಿಸಿತ್ತು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ದೇಶದ ಎಂಟು ರಾಜ್ಯಗಳಲ್ಲಿ ವ್ಯವಹಾರ ಹೊಂದಿದ್ದ ಈ ಅಗ್ರಿಗೋಲ್ಡ್‌ ಸಂಸ್ಥೆಯಿಂದ ವಂಚನೆ ಗೊಳಗಾದವರು ಪರಿಹಾರಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಸ್ಥೆಯು ಒಟ್ಟು 35ಲಕ್ಷ ಖಾತೆ ಗಳನ್ನು ಹೊಂದಿದ್ದು, ಸುಮಾರು 7623 ಕೋಟಿ ಹಣ ಪಾವತಿಸಬೇಕಾಗಿದೆ. ಆದರೆ ಸಂಸ್ಥೆ ದಿವಾಳಿ ಯಾಗಿರುವ ಹಿನ್ನೆಲೆಯಲ್ಲಿ ಲಕ್ಷಾಂತರ ಗ್ರಾಹಕರು ಮತ್ತು ಏಜೆಂಟರು ಹಣ ಕಳೆದುಕೊಂಡು 105 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಾಜ್ಯ ಸರ್ಕಾರ ಅಗ್ರಿಗೋಲ್ಡ್‌ಗೆ ಸೇರಿದ ಸ್ಥಿರಾಸ್ತಿಯನ್ನು ವಶಪಡಿಸಿ ಕೊಂಡಿದೆ. ಈ ಆಸ್ತಿಯ ಬೆಲೆ 500 ಕೋಟಿ ಯಾಗಿದ್ದು, ಕರ್ನಾಟಕದ ಗ್ರಾಹಕರಿಗೆ ಸುಮಾರು 2500 ಕೋಟಿ ರೂ. ಸಂಸ್ಥೆಯಿಂದ ಸಿಗಬೇಕಾಗಿದೆ. ಆದರೆ ಆಂಧ್ರಪ್ರದೇಶದಲ್ಲಿ ಈ ಸಂಸ್ಥೆಯ ಆಸ್ತಿಗಳನ್ನು ಅಲ್ಲಿನ ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದ್ದು, ಅವುಗಳ ಮೌಲ್ಯ ಲಕ್ಷ ಕೋಟಿಯಲ್ಲಿದೆ. ಈ ಆಸ್ತಿ ಗಳನ್ನು ಸಹ ಅಲ್ಲಿನ ಸರಕಾರ ಮಾರಾಟ ಮಾಡ ಬೇಕು. ಆದ್ದರಿಂದ ಬಂದ ಹಣವನ್ನು ಕರ್ನಾಟಕದಲ್ಲಿ ವಂಚನೆಗೊಳಗಾಗಿರುವ ಗ್ರಾಹಕರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಅಗ್ರಿಗೋಲ್ಡ್‌ ಸಂಸ್ಥೆಯಿಂದ ವಂಚನೆಗೀಡಾಗಿ ರುವ ಗ್ರಾಹಕರಿಗೆ ಹಾಗೂ ಏಜೆಂಟರಿಗೆ ಆಂಧ್ರ ಪ್ರದೇಶದಲ್ಲಿ ಸಿಕ್ಕ ರೀತಿಯಲ್ಲಿಯೇ ಕರ್ನಾಟದಲ್ಲೂ ಪರಿಹಾರ ಸಿಗಬೇಕು ಎಂದೂ ಪ್ರತಿಭಟನಾಕಾರರು ಮನವಿ ಮಾಡಿದ್ದಾರೆ.

ಅಗ್ರಿಗೋಲ್ಡ್‌ ಕಸ್ಟಮರ್ ಮತ್ತು ಏಜೆಂಟ್ಸ್‌ ವೆಲ್‌ಫೇರ್‌ ಅಸೋಸಿಯೇಶನ್‌ ಜಿಲ್ಲಾ ಸಮಿತಿ ಗೌರವಾ ಧ್ಯಕ್ಷ ಎಂ.ಸಿ. ಡೋಂಗ್ರೆ, ಅಧ್ಯಕ್ಷ ಯೋಗೀಶ್‌, ಉಪಾಧ್ಯಕ್ಷ ಬಿ.ಎನ್‌. ಶಿವಪ್ಪ, ಪ್ರಧಾನ ಕಾರ್ಯದಶಿ ಸುದರ್ಶನ್‌, ಸಹ ಕಾರ್ಯದರ್ಶಿ ಎಂ.ಸಿ. ಮಂಜೇಗೌಡ, ಖಜಾಂಚಿ ಗಣೇಶ್‌, ಮಹಿಳಾ ಅಧ್ಯಕ್ಷೆ ಶಕುಂತಲಾ, ಕಾರ್ಯದರ್ಶಿ ಜೆ.ಕೆ. ಸುಜಾತ ಹಾಗೂ ಸದಸ್ಯರಾದ ಮೋಹನ್‌ ಕುಮಾರ್‌ ಇತರರಿದ್ದರು.

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.