ಆನೆ ಕಾರಿಡಾರ್ ಯೋಜನೆ ಗಗನ ಕುಸುಮ


Team Udayavani, Feb 6, 2019, 7:28 AM IST

aane-kari.jpg

ಹಾಸನ: ಜಿಲ್ಲೆಯ ಮಲೆನಾಡು ಪ್ರದೇಶಗಳಾದ ಸಕಲೇಶಪುರ ಮತ್ತು ಆಲೂರು ತಾಲೂಕಿನಲ್ಲಿ ಕಾಡಾನೆಗಳ ಉಪಟಳ ತಡೆಗೆ ಆನೆ ಕಾರಿಡಾರ್‌ ನಿರ್ಮಿಸಬೇಕೆಂಬುದು ಕಳೆದ ನಾಲ್ಕೈದು ವರ್ಷ ಗಳಿಂದಲೂ ಕೇಳಿ ಬರುತ್ತಿದೆ. ಆದರೆ ಸರ್ಕಾರಕ್ಕೆ ಇದು ವರೆಗೂ ಯೋಜನಾ ಪ್ರಸ್ತಾವನೆಯೇ ಸಲ್ಲಿಕೆಯಾಗಿಲ್ಲ. ಹಾಗಾಗಿ ಆನೆ ಕಾರಿಡಾರ್‌ ಬೇಡಿಕೆ ಅಂಗೈಯಲ್ಲಿನ ಅರಮನೆಯಂತಾಗಿದೆ.

ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿ ಯಲ್ಲಿ ಬಿಸಿಲೆ ರಕ್ಷಿತಾರಣ್ಯಕ್ಕೆ ಹೊಂದಿಕೊಂಡಂತೆ 15 ಸಾವಿರ ಎಕರೆಯಲ್ಲಿ ಆನೆ ಕಾರಿಡಾರ್‌ ನಿರ್ಮಿಸುವ ಪ್ರಸ್ತಾಪವಿದೆ. ಆನೆ ಕಾರಿಡಾರ್‌ ಪ್ರಸ್ತಾಪಿತ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಸುಮಾರು 11 ಸಾವಿರ ಎಕರೆ ಯಿದ್ದರೆ. ರೈತರು ನ್ಯಾಯಯುತ ಪರಿಹಾರ ನೀಡಿದರೆ ತಮ್ಮ ಹಿಡುವಳಿಯ 3,300 ಎಕರೆ ಬಿಟ್ಟುಕೊಡಲು ಮುಂದೆ ಬಂದಿದ್ದಾರೆ. ಆದರೆ ರೈತರ ಭೂಮಿ ಸ್ವಾಧೀನ ಪಡಿಸಿಕೊಳ್ಳುವುದೂ ಸೇರಿದಂತೆ ಆನೆ ಕಾರಿಡಾರ್‌ ಸ್ಥಾಪನೆಯ ಪ್ರಾಮಾಣಿಕ ಪ್ರಯತ್ನ ಆಗುತ್ತಿಲ್ಲ.

273 ಕೋಟಿ ರೂ. ಯೋಜನೆ: 2014 -15ನೇ ಸಾಲಿನಲ್ಲಿ ಆನೆ ಕಾರಿಡಾರ್‌ ಸ್ಥಾಪನೆಗೆ 273 ಕೋಟಿ ರೂ. ಬೇಕಾಗಬಹುದೆಂದು ಅಂದಾಜು ಮಾಡ ಲಾಗಿತ್ತು. ರೈತರಿಂದ ಸ್ವಾಧೀನಪಡಿಸಿಕೊಳ್ಳುವ ಭೂಮಿಗೆ ಪರಿಹಾರ ನಿಗದಿಯ ಸಂಬಂಧ ಒಂದು ಸಭೆ ನಡೆದು ಎಕರೆಗೆ ಗರಿಷ್ಠ 8 ಲಕ್ಷ ರೂ. ನಿಗದಿ ಪಡಿಸುವ ಪ್ರಸ್ತಾಪ ವಾಗಿತ್ತು. ಆದರೆ ಅದಕ್ಕೆ ರೈತರು ಒಪ್ಪಿರಲಿಲ್ಲ. ಅಷ್ಟಕ್ಕೆ ನಿಂತ ಪ್ರಯತ್ನ ಮತ್ತೆ ಆರಂಭವಾಗಿಯೇ ಇಲ್ಲ.

ಕಾಡಾ ನೆಗಳಿಂದ ಬೆಳೆ ಹಾನಿಯಾದಾಗ, ಜೀವ ಹಾನಿಯಾ ದಾಗ ಮಾತ್ರ ಆನೆ ಕಾರಿಡಾರ್‌ ಆರಂಭಕ್ಕೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂಬ ಜನಪ್ರತಿನಿಧಿಗಳ ಮತ್ತು ರಾಜಕಾರಣಿಗಳ ಭರವಸೆ ಬಿಟ್ಟರೆ ಬೇರೇನೂ ಆಗಿಲ್ಲ. ಅರಣ್ಯ ಇಲಾಖೆಯೂ ಒಂದೆರೆಡು ಆನೆಗಳನ್ನು ಹಿಡಿದು ಸಾಗಿಸಿ ಜನರ ಆಕ್ರೋಶವನ್ನು ತಣ್ಣಗೆ ಮಾಡುವುದಕ್ಕಷೇ ಸೀಮಿತವಾಗಿದೆ.

ಭೂ ಪರಿಹಾರದ್ದೇ ಹೊರೆ: ಕಾಡಿನಂಚಿನಲ್ಲಿರುವ ಹೆತ್ತೂರು ಹೋಬಳಿಯ ಗ್ರಾಮಗಳ ಜನರು ಕಾಡಾನೆ ಗಳ ಹಾವಳಿಯಿಂದ ಬೇಸತ್ತು ಪುನರ್ವಸತಿ ಕಲ್ಪಿಸಿದರೆ ತಮ್ಮ ಗ್ರಾಮ ತೊರೆದು ಹೋಗಲು ಸಿದ್ಧರಿದ್ದಾರೆ. ಆದರೆ ಸ್ವಾಧೀನಪಡಿಸಿಕೊಳ್ಳಲಿರುವ 3, 300 ಎಕರೆ ಭೂಮಿಗೆ ನ್ಯಾಯಯುತ ಪರಿಹಾರ ನೀಡಿದರೆ ಸಾಕು ಎಂದು ಹೇಳುತ್ತಾರೆ. ಈ ಹಿಂದೆ ಎಕರೆಗೆ 8 ಲಕ್ಷ ರೂ. ಪರಿಹಾರ ನೀಡುವ ಪ್ರಸ್ತಾಪವಾಗಿತ್ತು. ಆದಕ್ಕೆ ಒಪ್ಪಿರಲಿಲ್ಲ.

ಕಳೆದೆರಡು ವರ್ಷಗಳಿಂದ ಜಾರಿಯಾಗು ತ್ತಿರುವ ಎತ್ತಿನಹೊಳೆ ಯೋಜನೆಗೆ ಸ್ವಾಧೀನಪಡಿಸಿ ಕೊಂಡ ಭೂಮಿಗೆ ಪ್ರತಿ ಎಕರೆಗೆ 30 ಲಕ್ಷ ರೂ. ಪರಿಹಾರ ನೀಡಲಾಗಿದೆ. ಈಗ ಅಷ್ಟು ಪರಿಹಾರವನ್ನು ಆನೆ ಕಾರಿಡಾರ್‌ ನಿರ್ಮಾಣದ ಭೂ ಸ್ವಾಧೀನದ ಭೂಮಿಗೂ ನೀಡಲೇಬೇಕಾಗಿದೆ. ಹಾಗಾಗಿ ಭೂ ಪರಿಹಾರದ ಹೊರೆ ನೋಡಿ ರಾಜ್ಯ ಸರ್ಕಾರ ಕೈ ಚೆಲ್ಲಿದೆ. ಕೇಂದ್ರ ಸರ್ಕಾರ ಕ್ಯಾಂಪ್ಕೊ ನಿಧಿಯಿಂದ ನೆರವು ನೀಡಬೇಕು ಎಂಬ ವರಸೆಯನ್ನು ರಾಜ್ಯ ಸರ್ಕಾರ ಈಗ ಆರಂಭಿಸಿದೆ.

ಈಗೇನು ಮಾಡಬೇಕು?: ಆನೆ ಕಾರಿಡಾರ್‌ ನಿರ್ಮಾಣವಾಗಲೇಬೇಕೆಂಬ ಇಚ್ಛಾಶಕ್ತಿದ್ದರೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿ ಕ್ಯಾಂಪ್ಕೋ ನಿಧಿಯಿಂದ ನೆರವು ಪಡೆಯಲು ಯತ್ನಿಸಬೇಕು. ಏತನ್ಮಧ್ಯೆ ರೈತರ ಭೂ ಸ್ವಾಧೀನ ಪ್ರಕ್ರಿಯೆ ಆರಂಭಕ್ಕೆ ಸಕಲೇಶಪುರ ಉಪ ವಿಭಾಗಾಧಿ ಕಾರಿಯವರಿಗೆ ಜಿಲ್ಲಾಡಳಿತ ತಾಕೀತು ಮಾಡಿ ಭೂ ಸ್ವಾಧೀನದ ನಿಖರ ವೆಚ್ಚ ಎಷ್ಟಾಗುತ್ತದೆ ಎಂಬ ಅಂದಾಜು ಸಿದ್ಧಪಡಿಸಬೇಕು. ಈ ಪ್ರಕ್ರಿಯೆಗಳಾಗದ ಹೊರತು ಆನೆ ಕಾರಿಡಾರ್‌ ನಿರ್ಮಾಣ ಗಗನಕುಸುಮವಾದೀತು ಅಷ್ಟೇ.

ಮರ ಕಡಿಯಲು ಅನುಮತಿ: ಆನೆ ಕಾರಿಡಾರ್‌ ನಿರ್ಮಾಣಕ್ಕೆ ಭೂ ಸ್ವಾಧೀನವಾಗಲಿರುವ ಪ್ರದೇಶ ದಲ್ಲಿಯೇ ಹಿಡುವಳಿ ಪ್ರದೇಶದಲ್ಲಿ ಮರ ಕಡಿದು ಮಾರಾಟ ಮಾಡಲು ರೈತರಿಗೆ ಅನುಮತಿ ನೀಡಲು ಅರಣ್ಯ ಇಲಾಖೆ ಮುಂದಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಆದರೆ ಈ ಸಂಬಂಧ ಸ್ಪಷ್ಟನೆ ನೀಡಿರುವ ಹಾಸನ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಂಬಾಬು ಅವರು, ಆನೆಕಾರಿಡಾರ್‌ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಿರುವ 3,300 ಎಕರೆ ಪ್ರದೇಶ ಹೊರತುಪಡಿಸಿ ಏಲಕ್ಕಿ ತೋಟಗಳಲ್ಲಿನ ಮರ ಕಡಿಯಲು ಅನುಮತಿ ನೀಡಬೇಕೆಂಬ ಮನವಿ ರೈತರಿಂದ ಬಂದಿದೆ.

ಏಲಕ್ಕಿ ಬೆಳೆಗೆ ರೋಗ ಬಾಧೆ ಹೆಚ್ಚುತ್ತಿರುವುದರಿಂದ ಏಲಕ್ಕಿಗೆ ಪರ್ಯಾಯವಾಗಿ ಕಾಫಿ ಬೆಳೆಯುವುದಾಗಿ, ಈಗಿರುವ ಮರಗಳಿಂದ ನೆರಳು ಹೆಚ್ಚಾಗಿದ್ದು ಕಾಫಿ ಬೆಳೆಯಲು ಸಾಧ್ಯವಾಗದು. ಆದ್ದರಿಂದ ಮರ ಕಡಿದು ಮಾರಾಟ ಮಾಡಲು ಅನುಮತಿ ನೀಡಬೇಕೆಂದು ರೈತರ ಬೇಡಿಕೆ ಆಧರಿಸಿ ಹಿರಿಯ ಅಧಿಕಾರಿಗಳಿಗೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಹೇಳುತ್ತಾರೆ.

ಈಗ ವಸತಿ ಶಾಲೆಗಳ ಪ್ರಸ್ತಾಪ: ಆನೆ ಕಾರಿಡಾರ್‌ ನಿರ್ಮಾಣದ ಬಗ್ಗೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಆಸಕ್ತಿ ಇದ್ದಂತಿಲ್ಲ. ಈ ಬಗ್ಗೆ ಅವರು ಹೆಚ್ಚು ಪ್ರಸ್ತಾಪ ಮಾಡುತ್ತಲೂ ಇಲ್ಲ. ಕಾಡಾನೆ ಗಳ ಹಾವಳಿಯಿಂದ ಶಾಲೆ, ಕಾಲೇಜುಗಳಿಗೆ ಬಂದು ಹೋಗಲು ಈಗ ಅರಣ್ಯ ಇಲಾಖೆ ವಿದ್ಯಾರ್ಥಿಗಳನ್ನು ಮನೆಯಿಂದ ಆಲೂರು ಮತ್ತು ಸಕಲೇಶಪುರ ಮತ್ತು ಅಯಾ ತಾಲೂಕಿನ ಶಿಕ್ಷಣ ಸಂಸ್ಥೆಗಳಿಗೆ ಕರೆ ತಂದು ಮತ್ತೆ ಮನೆಗೆ ಬಿಡುತ್ತಿದೆ. ಸಕಲೇಶಪುರ ತಾಲೂಕಿನಲ್ಲಿ 2 ವ್ಯಾನ್‌ಗಳನ್ನು ಬಾಡಿಗೆ ಪಡೆದು ಓಡಿಸುತ್ತಿದೆ. ಆಲೂರು ತಾಲೂಕಿನಲ್ಲಿ ಇಲಾಖೆಯ ಒಂದು ವಾಹನವನ್ನು ವಿದ್ಯಾರ್ಥಿಗಳಿಗಾಗಿ ಓಡಿಸುತ್ತಿದೆ.

ಆಲೂರು ಮತ್ತು ಸಕಲೇಶಪುರ ತಾಲೂಕಿನಲ್ಲಿ ಒಂದೊಂದು ವಸತಿ ಶಾಲೆ ಆರಂಭಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ. ರೇವಣ್ಣ ಮುಂದಾಗಿದ್ದಾರೆ. 1ನೇ ತರಗತಿಯಿಂದ ಪಿಯು ವರೆಗೂ ಶಿಕ್ಷಣ ನೀಡುವ ಸಂಸ್ಥೆ ಗಳನ್ನು ಸರ್ಕಾರದಿಂದ ನಿರ್ಮಿಸಲು ಸೂಕ್ತ ಸ್ಥಳ ಗುರ್ತಿಸಲು ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಈ ವಸತಿ ಶಾಲೆಗಳ ನಿರ್ಮಾಣ ಬಜೆಟ್‌ನಲ್ಲಿ ಘೋಷಣೆ ಆಗುವ ಸಾಧ್ಯತೆಯೂ ಇದೆ.

* ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.