ಪುರಾತತ್ವ ಇಲಾಖೆ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ


Team Udayavani, Feb 13, 2019, 7:28 AM IST

purt.jpg

ಹಾಸನ: ಜಿಲ್ಲೆಯ ಭಾರತೀಯ ಪುರಾತತ್ವ ಸವೇಕ್ಷಣಾ ಇಲಾಖೆಯ ಐತಿಹಾಸಿಕ ಸ್ಮಾರಕಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆಯ ಕಾರ್ಮಿಕರಿಗೆ ಕಳೆದ 7 ತಿಂಗಳಿಂದ ವೇತನ ನೀಡದಿರುವುದನ್ನು ಖಂಡಿಸಿ ಸಿಐಟಿಯು ನೇತೃತ್ವದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಕಾಯಂ ಅಲ್ಲದ ಕಾರ್ಮಿಕರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಕನಿಷ್ಠ ವೇತನ ನೀಡಿ: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ನಡೆಸಿದ ಕಾರ್ಮಿಕರು ಶಾಸನಾತ್ಮಕ ಸೌಲಭ್ಯಗಳಾದ ಕನಿಷ್ಠ ವೇತನ, ವೇತನ ಚೀಟಿ, ಭವಿಷ್ಯ ನಿಧಿ, ಇಎಸ್‌ಐ ಮತ್ತಿತರ ಸೌಲಭ್ಯಗಳನ್ನು ತಮಗೂ ಜಾರಿ ಮಾಡಬೇಕು ಎಂದು ಆಗ್ರಹಿಸಿದರು. 

ಕೇಂದ್ರ ಸರ್ಕಾರದ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಬೆಂಗಳೂರು ವಲಯದ ವ್ಯಾಪ್ತಿಗೊಳಪಡುವ ಹಾಸನ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ರಕ್ಷಣೆಯಲ್ಲಿ ಸುಮಾರು 25 ವರ್ಷಗಳಿಗಿಂತಲೂ ಅವಧಿ ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ ಯಲ್ಲಿ ನಿರಂತರವಾಗಿ ಕಾರ್ಮಿಕರು ದುಡಿಯುತ್ತಿದ್ದಾರೆ.

ಹಳೇಬೀಡು, ಬೇಲೂರು, ಸಕಲೇಶಪುರದ ಮಂಜರಾಬಾದ್‌ ಕೋಟೆ, ದೇವನಹಳ್ಳಿ ಕೋಟೆ, ಅಮೃತಪುರ, ಗೇರುಸೋಪ್ಪ, ಬೆಳವಾಡಿ, ದೊಡ್ಡಗದ್ದವಳ್ಳಿ, ಮುಂತಾದ ಕಡೆಗಳಲ್ಲಿ ದೇವಸ್ಥಾನದ ಹಾಳಾದ ಭಾಗಗಳನ್ನು ಪುನರ್‌ ಜೋಡಿಸಿ ಮತ್ತು ದುರಸ್ತಿ ಕಾರ್ಯಗಳಿಗೆ ರಾತ್ರಿ, ಹಗಲು ಪಾಳಿಯದಲ್ಲಿ ನಮ್ಮಿಂದ ಕೆಲಸ ಮಾಡಿಸುತ್ತಿದ್ದಾರೆ.

ಭಾರತೀಯ ಪುರಾತತ್ವ ಸವೇಕ್ಷಣಾ ಇಲಾಖೆಯು ಈ ಹಿಂದೆ ಇವರಿಗೆ ಬ್ಯಾಂಕ್‌ ಖಾತೆಯ ಮುಖಾಂತರ ತಿಂಗಳಿಗೆ 9,300 ರೂ. ವೇತನ ಜಮಾ ಮಾಡುತ್ತಿದ್ದರು. ಆದರೆ 2018ರ ಜನವರಿ ನಂತರ ಕಾರ್ಮಿಕರಿಗೆ ಬ್ಯಾಂಕ್‌ ಮುಖಾಂತರ ವೇತನ ಪಾವತಿಸದೆ ತಿಂಗಳಿಗೆ ಕೇವಲ 4 ಸಾವಿರರೂ. ಗಳ ನಗದು ಕೊಡಲಾಗುತ್ತಿತ್ತು ಕಳೆದ 7 ತಿಂಗಳಿಂದ ಅದನ್ನೂ ಕೊಟ್ಟಿಲ್ಲ ಎಂದು ದೂರಿದರು. 

ಕಾರ್ಮಿಕರಿಗೆ ಮೋಸ: ಸರ್ಕಾರದ ಕನಿಷ್ಠ ವೇತನದ ಆದೇಶಕ್ಕಿಂತ ಕಡಿಮೆ ವೇತನ ಪಾವತಿಸಲಾಗುತ್ತಿದೆ. ವೇತನವನ್ನು ಬ್ಯಾಂಕ್‌ ಮುಖಾಂತರ ಪಾವತಿಸದೆ ಕೈಗೆ ನಗದು ನೀಡಲಾಗುತ್ತಿದೆ. ವೇತನ ಚೀಟಿ ನೀಡುತ್ತಿಲ್ಲ . ಭಷ್ಯನಿಧಿ, ಇಎಸ್‌ಐ ಸೌಲಭ್ಯಗಳನ್ನ ಜಾರಿ ಮಾಡಿಲ್ಲ. ಕಾನೂನು ಪ್ರಕಾರ ನೀಡಬೇಕಾದ ಹಾಜರಾತಿ, ವಾರದ ರಜೆ ನೀಡುತ್ತಿಲ್ಲ. ಗುತ್ತಿಗೆದಾರರ ಹೆಸರಿನಲ್ಲಿ ಕಾರ್ಮಿಕರಿಗೆ ಮೋಸ ಮಾಡಲಾಗುತ್ತಿದೆ.

ದಿನದಲ್ಲಿ 8 ಗಂಟೆಗಳಿಗೂ ಅಧಿಕ ಕಾಲ ದುಡಿಸಿಕೊಳ್ಳಲಾಗುತ್ತಿದೆ. ಕೆಲವು ಕಾರ್ಮಿಕರನ್ನು ಅಕ್ರಮವಾಗಿ ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ದೂರಿದರು. ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್‌, ಪ್ರಧಾನ ಕಾರ್ಯದರ್ಶಿ ಎಚ್‌.ಎನ್‌. ನಾಗರಾಜು, ಖಜಂಚಿ ಮಹದೇವ್‌, ಉಪಾಧ್ಯಕ್ಷ ಸೋಮಶೇಖರ್‌, ಅರವಿಂದ್‌ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.