ಮಾನವೀಯ ಮೌಲ್ಯ ಅಳವಡಿಸಿಕೊಳ್ಳಿ
Team Udayavani, Feb 17, 2019, 7:34 AM IST
ಬೇಲೂರು: ಮನುಷ್ಯ ಮಾನವೀಯ ಮೌಲ್ಯ ಅಳವಡಿಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖ ಮಠದ ಶ್ರೀ ಶಂಭುನಾಥ ಸ್ವಾಮೀಜಿ ತಿಳಿಸಿದರು. ತಾಲೂಕಿನ ಕಿರಗಡಲು ಗ್ರಾಮದಲ್ಲಿ ವೀರ ಹನುಮಾನ್ ದೇವಾಲಯ ಪುನರ್ಪ್ರತಿಷ್ಠಾಪನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇವಾಲಯಗಳಿಂದ ನೆಮ್ಮದಿ ದೊರೆಯುತ್ತದೆ ಎಂದರು.
ಗುರುಹಿರಿಯರನ್ನು ಗೌರವಿಸಿ: ತಂದೆ ತಾಯಿಗಳಿಗೆ ಗುರುಹಿರಿಯರಿಗೆ ಮತ್ತು ಮಹಿಳೆಯರಿಗೆ ಗೌರವ ನೀಡುವುದು ಬಹು ಮುಖ್ಯವಾಗಿದ್ದು ದೇವಾಲಯಗಳ ನಿರ್ಮಾಣದಿಂದ ಮನುಷ್ಯನಿಗೆ ನೆಮ್ಮದಿ, ಶಾಂತಿ ಸಿಗಲಿದೆ ಎಂದು ಹೇಳಿದರು. ಶಾಸಕ ಕೆ.ಎಸ್.ಲಿಂಗೇಶ್ ಮಾತನಾಡಿ, ಕಿರಗಡಲು ದೇವಾಲಯಕ್ಕೆ ಶಾಸಕರ ನಿಧಿಯಿಂದ 2 ಲಕ್ಷ ನೀಡಿರುವುದಲ್ಲದೇ ಗ್ರಾಮದ ರಸ್ತೆ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು ಎಂದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹುಲ್ಲಹಳ್ಳಿ ಸುರೇಶ್ ಮಾತನಾಡಿ ಗ್ರಾಮದ ಪರಿಸರವನ್ನು ಸ್ವತ್ಛವಾಗಿಡಲು ಜನರು ಮುಂದಾಗಬೇಕು ಎಂದರು. ಈ ಸಂದರ್ಭದಲ್ಲಿ ಹೊನ್ನಾಳಿ ಹಿರೇಕಲ್ಮಠ ಶ್ರೀ ಒಡೆಯರ್ ಚನ್ನಮಲ್ಲಿಕಾರ್ಜುನ ಸ್ವಾಮೀಜಿ, ಡಿಸಿಸಿಬ್ಯಾಂಕ್ ನಿರ್ದೇಶಕ ಎಂ.ಎ.ನಾಗರಾಜ್, ಜಿಪಂ ಮಾಜಿ ಸದಸ್ಯರಾದ ಸಿ.ಎಸ್.ಪ್ರಕಾಶ್, ಬಿ.ಡಿ.ಚಂದ್ರೇಗೌಡ, ಶ್ರೀರಾಹನುಮಾನ್ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್(ರಾಜಶೆಟ್ಟಿ) ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ