ಕೃಷಿ ಮೇಳದಲ್ಲಿ ಶ್ವಾನಗಳ ಪ್ರದರ್ಶನದ ಆಕರ್ಷಣೆ 


Team Udayavani, Feb 18, 2019, 7:27 AM IST

krushi.jpg

ಹಾಸನ: ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರದಿಂದ ಆರಂಭವಾದ ಎರಡು ದಿನಗಳ ಕೃಷಿ ಮೇಳದಲ್ಲಿ ಶ್ವಾನಗಳ ಪ್ರದರ್ಶನ ಜನರನ್ನು ಆಕರ್ಷಿಸಿತು. ಪಶು ಸಂಗೋಪನಾ ಇಲಾಖೆಯಿಂದ ಆಯೋಜಿಸಿದ್ದ ಶ್ವಾನ ಪ್ರದರ್ಶನದಲ್ಲಿ 24 ತಳಿಯ ಸುಮಾರು 120ಕ್ಕೂ ಹೆಚ್ಚು ಶ್ವಾನಗಳನ್ನು ಒಂದಡೆ ನೋಡಿ ಶ್ವಾನಪ್ರಿಯರು ಸಂತಸ ವ್ಯಕ್ತಪಡಿಸಿದರು. 

ಆರು ತಿಂಗಳ ಮರಿಗಳಿಂದ ಬೃಹದಾಕಾರದ ಶ್ವಾನಗಳನ್ನು ಕಂಡು ಜನರು ಅಚ್ಚರಿಪಟ್ಟರು. ತಮ್ಮ ಪ್ರೀತಿಯ ಶ್ವಾನಗಳನ್ನು ಮಾಲೀಕರು ಭಿನ್ನ ಹೆಸರುಗಳಿಂದ ಕರೆಯುತ್ತಾ ಮುದ್ದಿಸುತ್ತಾ ಪ್ರದರ್ಶಿಸಿದರು. ಕೆಲವು ಶ್ವಾನಗಳು ಪ್ರದರ್ಶನದಲ್ಲಿ ಗತ್ತಿನಿಂದ ಹೆಜ್ಜೆ ಹಾಕಿದರೆ, ಇನ್ನು ಕೆಲ ಶ್ವಾನಗಳು ತಮ್ಮ ಮಾಲೀಕರನ್ನು ಅಪ್ಪಿಕೊಂಡು ಪ್ರೀತಿ ತೋರಿದವು. 

ಅಪರಿಚಿತ ನಾಯಿಗಳನ್ನು ಕಂಡು ಅವು ಪರಸ್ಪರ ಬೊಗಳುತ್ತಿದ್ದರಿಂದ ಮೈದಾನದ ತುಂಬಾ ಶ್ವಾನಗಳ ಕೂಗು ಕೇಳಿ ಬಂದಿತು. ಪ್ರದರ್ಶನ ನೋಡಲು ಬಂದಿದ್ದ ಮಕ್ಕಳು, ಮಹಿಳೆಯರು, ಹಿರಿಯರು ಮುದ್ದಾದ ನಾಯಿಗಳ ಜತೆ ಸೆಲ್ಫಿ ತೆಗೆಸಿಕೊಂಡರು. ಮಕ್ಕಳು ಪುಟ್ಟ ಶ್ವಾನಗಳ ಮೈದಡವಿ ಖುಷಿಪಟ್ಟರು. 

ದೇಶಿ ತಳಿಗಳಾದ ಬಾಗಲಕೋಟೆಯ ಮುಧೋಳ, ಸೈಬೀರಿಯನ್‌ ಹಸ್ಕಿ ಗಮನಸೆಳೆದವು. ದುಬಾರಿ ಬೆಲೆಯ ಪಗ್‌, ಪಮೇರಿಯನ್‌, ಡಾಬರ್‌ ಮನ್‌, ಜರ್ಮನ್‌ ಶಫ‌ರ್ಡ್‌, ಗ್ರೇಟ್‌ಡೇನ್‌, ಬಾಕ್ಸರ್‌, ಲ್ಯಾಬ್ರಡಾರ್‌, ಗೋಲ್ಡನ್‌ ರಿಟ್ರೀವರ್‌ ತಳಿಯ ಶ್ವಾನಗಳು ಚುರುಕಿನ ಪ್ರದರ್ಶನ ನೀಡಿದರು. ಮಳಿಗಳಲ್ಲಿ ಪ್ರದರ್ಶನದಲ್ಲಿದ್ದ ಬೃಹದಾಕಾರದ ಶ್ವಾನಗಳು, ಅವುಗಳನ್ನು ಸಾಕುವ ವಿಧಾನ, ಆಹಾರ-ವಿಹಾರದ ಮಾಹಿತಿ ಪಡೆದು ಅಚ್ಚರಿ ವ್ಯಕ್ತಪಡಿಸಿದರು.

ಜನಪ್ರಿಯ ತಳಿಗಳ ನಾಯಿ ಮರಿಗಳು 15 ಸಾವಿರೂ.ನಿಂದ 18 ಸಾವಿರರೂ ವರೆಗೂ ಮಾರಾಟಕ್ಕಿದ್ದವು.  ಶ್ವಾನಪ್ರದರ್ಶನದಲ್ಲಿ ಪಾಲ್ಗೊಂಡಿದ್ದ ಶ್ವಾನಗಳ ಸ್ವಭಾವ, ಚುರುಕುತನ, ಭಾಷೆ, ಗಾತ್ರ, ನಡಿಗೆ, ಹಲ್ಲು, ಬಾಲ, ದೇಹದ ರಚನೆ, ಅನುಕರಣೆ ಆಧಾರದ ಮೇಲೆ ಸ್ಪರ್ಧೆ ನಡೆಸಲಾಯಿತು. ವಿಜೇತ ಶ್ವಾನಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಲಾಯಿತು.

ಶ್ವಾನಗಳ ಕುತ್ತಿಗೆಗೆ ಹಾಕುವ ಬೆಲ್ಟ್, ಆಹಾರ, ಔಷಧಿ ಮಾರಾಟ ಮಳಿಗೆಗಳು ಇದ್ದವು. ಒಂದೆ ಕಡೆ ಲಭ್ಯವಿದ್ದ ಈ ವಸ್ತುಗಳನ್ನು ಶ್ವಾನ ಮಾಲೀಕರು ಖರೀದಿಸಿದರು. ಶ್ವಾನ ಪ್ರದರ್ಶನಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಬೆಳಗಿನಿಂದಲೇ ತಮ್ಮ ಶ್ವಾನಗಳೊಂದಿಗೆ ಮಾಲೀಕರು ಮೈದಾನಕ್ಕೆ ಬಂದು ಹೆಸರು ನೋಂದಣಿ ಮಾಡಿಸಿಕೊಂಡು ಸರದಿಗಾಗಿ ಕಾಯುತ್ತಿದ್ದರು. ಶ್ವಾನಗಳಿಗೆ ನೆರಳಿನ ವ್ಯವಸ್ಥೆ ಮಾಡಲಾಗಿತ್ತು.

ಬೆಳಿಗ್ಗೆ ಆರಂಭಗೊಂಡ ಸ್ಪರ್ಧೆ ಮಧ್ಯಾಹ್ನದವರೆಗೂ ನಡೆಯಿತು. ಹಾಸನ ಪಶುವೈದ್ಯಕೀಯ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಬಾಳಪ್ಪನವರ್‌ ಶ್ವಾನಗಳ ಪ್ರದರ್ಶನದ ಉಸ್ತುವಾರಿ ನೋಡಿಕೊಂಡರು. ಶ್ವಾನಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಅವುಗಳನ್ನು ಸಾಕುವ ವಿಧಾನಗಳ ಬಗ್ಗೆ ಮಾಹಿತಿ ನೀಡಲು ಶ್ವಾನ ಪ್ರದರ್ಶನ ಏರ್ಪಡಿಸಲಾಗಿದೆ. ದೇಶ, ದೇಶಗಳ 24 ತಳಿಗಳು ಶ್ವಾನಗಳ ತಳಿಗಳು ಸ್ಪರ್ಧೆಯಲ್ಲಿ ಭಾಗವಹಿಸಿವೆ ಎಂದು ಮಾಹಿತಿ ನೀಡಿದರು. 

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.