ವಿದ್ಯಾರ್ಥಿಗಳಿಗೆ ಸಂಸದೀಯ ವ್ಯವಸ್ಥೆ ಅರಿವಿನ ಅಗತ್ಯ


Team Udayavani, Feb 22, 2019, 7:25 AM IST

vidyar.jpg

ಹಾಸನ: ಪಠ್ಯದ ಶಿಕ್ಷಣದ ಜೊತೆಗೆ ಶಾಲಾ ಹಂತದಲ್ಲೇ ಮಕ್ಕಳಿಗೆ ಸಂಸದೀಯ ವ್ಯವಸ್ಥೆ ಹಾಗೂ ರಾಜಕೀಯದ ಬಗ್ಗೆ ತಿಳುವಳಿಕೆ ಇರಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಎಸ್‌ ತಿಮ್ಮಣ್ಣಚಾರ್‌ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಗ್ರಾಸ್‌ ರೂಟ್ಸ್‌ ರಿಸರ್ಚ್‌ ಆ್ಯಂಡ್‌ ಅಡ್ವಕಸಿ ಮೂವ್‌ಮೆಂಟ್‌, ಪೊಲೀಸ್‌ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಜಿಲ್ಲಾ ಪಂಚಾಯತಿ ಹೊಯ್ಸಳ ಸಭಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳ ಸಂಸತ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಂವಿಧಾನದ ಅಡಿಯಲ್ಲಿ ಸಂಸದೀಯ ವ್ಯವಸ್ಥೆಯನ್ನು ರೂಪಿಸಲಾಗಿದೆ. ಲೋಕಸಭೆ ಮತ್ತು ರಾಜ್ಯಸಭೆ, ವಿಧಾನ ಸಭೆ, ವಿಧಾನ ಪರಿಷತ್‌ಗಳಿಗೆ ಆಯ್ಕೆಯ ವಿಧಾನ ಮಕ್ಕಳು ತಿಳಿದಿರಬೇಕು ಎಂಬ ಕಾರಣಕ್ಕಾಗಿ ಮಕ್ಕಳ ಸಂಸತ್‌ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಪ್ರಜಾಪ್ರಭುತ್ವ ಸಾರ್ವತ್ರಿಕ ವೇದಿಕೆ: ಗ್ರಾಸ್‌ ರೂಟ್ಸ್‌ ರಿಸರ್ಚ್‌ ಆ್ಯಂಡ್‌ ಅಡ್ವಕಸಿ ಮೂವ್‌ಮೆಂಟ್‌ನ ಕಾರ್ಯನಿರ್ವಾಹಕ ನಿರ್ದೇಶಕ‌ ಬಸವರಾಜು ಮಾತನಾಡಿ ಪ್ರಜಾಪ್ರಭುತ್ವ ಒಂದು ಸಾರ್ವತ್ರಿಕ ವೇದಿಕೆ. ದೇಶದ ಈ ವ್ಯವಸ್ಥೆಯ ಬಗ್ಗೆ ಆಡಳಿತ ನಾಯಕನ ಜೊತೆಗೆ ಪ್ರಜೆಯ ಪಾತ್ರ ಏನು ಎಂಬುದನ್ನು ಸಾರ್ವಜನಿಕರು ತಿಳಿದಿರಬೇಕು ಎಂದು ಹೇಳಿದರು.

ಸುಗಮ ಶಿಕ್ಷಾ ಮುಖ್ಯಸ್ಥೆ ಉಷಾ ಮಾತನಾಡಿ, ಸರ್ಕಾರಿ ಶಾಲೆಗಳು ಆಂಗ್ಲ ಭಾಷೆ ಹಾಗೂ ತಾಂತ್ರಿಕ ಶಿಕ್ಷಣ ವ್ಯವಸ್ಥೆ ಗೆ ಹೆಚ್ಚಿನ ಆದ್ಯತೆ ನೀಡಬೇಕು. ಆಗ ಮಾತ್ರ ಸರ್ಕಾರಿ ಶಾಲೆಗಳ ಮೇಲೆ ಆಸಕ್ತಿ ಸಾರ್ವಜನಿಕ ಅಥವಾ ಗ್ರಾಮೀಣ ಪ್ರದೇಶದ ಜನರಿಗೆ ಆಸಕ್ತಿ ಮೂಡುತ್ತದೆ ಎಂದರು.

ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಕೆ ಬಸವರಾಜ್‌ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪೊಲೀಸ್‌ ಮುಖ್ಯಾಧಿಕಾರಿ ಡಾ.ಎ.ಎನ್‌.ಪ್ರಕಾಶ್‌ಗೌಡ, ಅಪರ ಜಿಲ್ಲಾಧಿಕಾರಿ ಎಂ ಎಲ್‌.ವೈಶಾಲಿ, ಉಪಭಾಗಾಧಿಕಾರಿ ಡಾ.ಎಚ್‌.ಎಲ್‌.ನಾಗರಾಜು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್‌. ಮಂಜುನಾಥ್‌, ವಕೀಲರ ಸಂಘದ ಅಧ್ಯಕ್ಷ ಜಿ.ಪಿ. ಶಂಕರ್‌ ಭಾಗವಸಿದ್ದರು.

ಗಮನ ಸೆಳೆದ ಮಕ್ಕಳ ಸಂಸತ್‌: ಹಾಸನ ತಾಲೂಕಿನ ಬಿ.ಕಾಟೀಹಳ್ಳಿ, ಬೂವನಹಳ್ಳಿ, ದೇವೆಗೌಡ ನಗರ, ಹನುಮಂತಪುರ, ದೊಡ್ಡ ಮಂಡಿಗನಹಳ್ಳಿ ಹಾಗೂ ಸಿದ್ದಯ್ಯನಗರ 7 ಶಾಲೆಗಳಿಂದ ಸುಮಾರು 140 ವಿದ್ಯಾರ್ಥಿಗಳು, ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗಮನ ಸೆಳೆದರು. 

ವಿದ್ಯಾಥಿನಿಯೊಬ್ಬರು ಸ್ಪೀಕರ್‌ ಆಗಿ ಸಭೆಯನ್ನು ನಿರ್ವಸಿದರು. ಯುವ ಪ್ರತಿಭಾವಂತ ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಾಗಿ, ವಿಧ ಸಚಿವರಾಗಿ ಪಾಲ್ಗೊಂಡು ತಮ್ಮ ಇಲಾಖೆಗಳಿಗೆ ಸಂಬಂಧಿಸಿಂತೆ ಪ್ರಶ್ನೆಗಳಿಗೆ ಉತ್ತರಿಸಿ ಅಭಿಪ್ರಾಯ ಪಂಡಿಸಿದರು. 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.