ಲೋಕ ಸಮರಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ


Team Udayavani, Mar 12, 2019, 7:43 AM IST

loka-samara.jpg

ಹಾಸನ: ಲೋಕಸಭಾ ಚುನಾವಣೆಗೆ ಹಾಸನ ಕ್ಷೇತ್ರದಲ್ಲಿ ಅಧಿಸೂಚನೆ ಮಾ.19ರಂದು ಹೊರ ಬೀಳಲಿದ್ದು, ಏ.18 ರಂದು 2,235 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಅಕ್ರಂಪಾಷಾ ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಚುನಾವಣಾ ಸಿದ್ಧತೆಯ ವಿವರ ನೀಡಿದ ಅವರು, ಚಿಕ್ಕಮಗಳೂರು ಜಿಲ್ಲೆ ಕಡೂರು ವಿಧಾನಸಭಾ ಕ್ಷೇತ್ರ ಒಳಗೊಂಡಂತೆ ಹಾಸನ ಕ್ಷೇತ್ರದಲ್ಲಿ 16,29,587 ಲಕ್ಷ ಮತದಾರರಿದ್ದು, ಇನ್ನೂ 20 ಸಾವಿರ ಮತದಾರರು ನೋಂದಾಯಿಸಿಕೊಳ್ಳುವ ನಿರೀಕ್ಷೆಯಿದೆ. ಮತದಾರರು ನೋಂದಾಯಿಸಿಕೊಳ್ಳಲು ಮಾ.26ರ ವರೆಗೂ ಕಾಲಾವಕಾಶವಿದೆ ಎಂದು ಹೇಳಿದರು.

ಜಿಲ್ಲಾದ್ಯಂತ ಮಾದರಿ ನೀತಿ ಸಂತೆ ಕಟ್ಟನಿಟ್ಟಾಗಿ ಜಾರಿಗೊಳಿಸಲು ವಿಧಾನಸಭಾ ಕ್ಷೇತ್ರಗಳ ಹಂತದಲ್ಲಿ ನೋಡಲ್ ಅಧಿಕಾರಿಗಳು, ಫ್ಲೈಯಿಂಗ್‌ ಸ್ಕ್ವಾಡ್‌, ವಿಚಕ್ಷಣಾ ದಳಗಳುನ್ನು ನೇಮಿಸಲಾಗಿದೆ. ಮಾದರಿ ನೀತಿ ಸಂತೆ ಮಾ. 10ರಿಂದಲೇ ಜಾರಿಯಲ್ಲಿದ್ದು, ಜೂನ್‌ 3 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.

ವೆಬ್‌ಸೈಟ್‌ನಲ್ಲಿ ಭಾವಚಿತ್ರ ತೆರವು: ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಸರ್ಕಾರಿ ವೆಬ್‌ಸೈಟ್‌ನಲ್ಲಿ ಚುನಾ ಯಿತ ಜನಪ್ರತಿನಿಧಿಗಳ ಭಾವಚಿತ್ರವನ್ನು ತೆಗೆಯ ಲಾಗಿದೆ. ಸರ್ಕಾರಿ ವಾಹನವನ್ನು ಹಿಂಪಡೆಯಲಾಗಿದೆ. ಸರ್ಕಾರಿ ಕಚೇರಿ, ಸಾರ್ವಜನಿಕ ಸ್ಥಳಗಳಲ್ಲಿ ಜಾಹೀ ರಾತು ಫ‌ಲಕ ತೆರವುಗೊಳಿಸಲಾಗಿದೆ ಎಂದರು.

ಸಾಮಾಜಿಕ ಜಾಲತಾಣದ ದುರುಪಯೋಗ ತಡೆಗೆ ಪ್ರೊಬೇಷನರಿ ಐಎಎಸ್‌ ಅಧಿಕಾರಿ ಪ್ರಿಯಾಂಕ ನೇತೃತ್ವದ ತಂಡ ನಿಗಾವಹಿಸಲಿದೆ. ನೀತಿ ಸಂತೆ ಉಲ್ಲಂಘನೆ ಹಾಗೂ ಅಕ್ರಮ ತಡೆಗೆ 16 ನೋಡೆಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ದಿನದ 24 ತಾಸು ಕಾರ್ಯನಿರ್ವಸುವ ಕಂಟ್ರೋಲ್ ರೂಂ 261111 ತೆರೆಯಲಾಗಿದ್ದು, ಸಾರ್ವಜನಿಕರು ಚುನಾವಣಾ ಮಾಹಿತಿ, ಹಣ ಹಂಚಿಕೆ ಇತರೆ ದೂರು ನೀಡಬಹುದಾಗಿದೆ. ಜಿಲ್ಲೆಯ ಗಡಿಭಾಗದಲ್ಲಿ ಕಣ್ಗಾವಲು ಚಕ್ಷಣದಳ ಹಾಗೂ 20 ಚೆಕ್‌ಪೋಸ್ಟ್‌ ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಹೊಸ ಕಾಮಗಾರಿ ಘೋಷಿಸುವಂತಿಲ್ಲ: ಪ್ರಸ್ತುತ ಪ್ರಗತಿಯಲ್ಲಿ ಇರುವ ಕಾಮಗಾರಿ ಹೊರತುಪಡಿಸಿದರೆ ಹೊಸ ಯೋಜನೆ ಘೋಷಿಸುವಂತಿಲ್ಲ. ಹಾಗೂ ಹೊಸ ಕಾಮಗಾರಿಗಳಿಗೆ ಟೆಂಡರ್‌ ಕರೆಯುವಂತಿಲ್ಲ. ಆದರೆ ಈಗಾಗಲೇ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡು ಕಾರ್ಯಾದೇಶ ಪಡೆದಿರುವ ಹಾಗೂ ಈಗಾಗಲೇ ಪ್ರಗತಿಯಲ್ಲಿರುವ ಕಾಮಗಾರಿಗಳು ಮುಂದುವರಿಸಲು ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ದೂರು ಸಲ್ಲಿಸಲು ಅವಕಾಶ: ಚುನಾವಣಾ ಆಯೋಗದ ನಿರ್ದೇಶನದಂತೆ ನೀತಿ ಸಂತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಬೈಲ್ ಅಪ್ಲಿಕೇಷನ್‌ ಮೂಲಕವೂ ದೂರುಗಳನ್ನು ದಾಖ ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಸುವಿಧಾ ವೆಬ್‌ ಸೈಟ್ ಆರಂಭ: ರಾಜಕೀಯ ಪಕ್ಷಗಳು ಸಭೆ, ಸಮಾರಂಭ ಮಾಡಲು ಆಯಾ ಸಹಾಯಕ ಚುನಾವಣಾಧಿಕಾರಿಗಳ ಹಂತದಲ್ಲಿಯೇ ಏಕಗವಾಕ್ಷಿ ಮಾದರಿಯಲ್ಲಿ ಅನುಮತಿ ಪಡೆದುಕೊಳ್ಳಲು ಸುವಿಧಾ ಎಂಬ ವೆಬ್‌ಸೈಟ್ ತೆರೆಯಲಾಗಿದ್ದು, 

ಅಲ್ಲಿಂದ ಅರ್ಜಿ ಡೌನ್‌ಲೋಡ್‌ ಮಾಡಿಕೊಂಡು ಅರ್ಜಿ ಸಲ್ಲಿಸಿ ಅನುಮತಿ ಪಡೆಯಬಹುದಾಗಿದೆ, ಜಿಲ್ಲಾ ಮಟ್ಟದಲ್ಲಿ ಚುನಾವಣಾ ಪ್ರಚಾರಕ್ಕೆ ವಾಹನ ಬಳಕೆ ಹಾಗೂ ಹೆಲಿಕಾಫ್ಟರ್‌ ಲ್ಯಾಂಡಿಂಗ್‌ ಅನುಮತಿಯನ್ನು ಚುನಾವಣಾಧಿಕಾರಿಗಳ ಹಂತದಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದರು. ಎಸ್ಪಿ ಪ್ರಕಾಶ್‌ಗೌಡ, ಅಪರ ಜಿಲ್ಲಾಧಿಕಾರಿ ವೈಶಾಲಿ ಅವರೂ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.