ಚುನಾವಣೆ ಸ್ಪರ್ಧೆ: ಕಾರ್ಯಕರ್ತರ ತೀರ್ಮಾನ ಅಂತಿಮ


Team Udayavani, Mar 15, 2019, 7:26 AM IST

chunavanee-sa.jpg

ಅರಕಲಗೂಡು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿ ಜಿಲ್ಲೆಯ ಎಲ್ಲಾ ವಿಧಾನಸಭಾ ವ್ಯಾಪ್ತಿಯ ಕಾರ್ಯಕರ್ತರು,ಅಭಿಮಾನಿಗಳು ಹಾಗೂ ಹಿರಿಯರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಲುವಾಗಿ ಸಭೆಯನ್ನು ಕರೆದು ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಮಾಜಿ ಸಚಿವ ಎ.ಮಂಜು ತಿಳಿಸಿದರು. ಗುರುವಾರ ಪಟ್ಟಣದಲ್ಲಿ ಚನ್ನಬಸವೇಶ್ವರ ಸಮುದಾಯ ಭವನದಲ್ಲಿ ಎ.ಮಂಜು ಅಭಿಮಾನಿಗಳು,ಹಿತೈಷಿಗಳು ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಸೋಲಿನ ರುಚಿ ತೋರಿಸಿ: ಮೈಸೂರಿನ ಚಾಮುಂಡೇಶ್ವರಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಪಿತೂರಿಯ ಕಾರ್ಯತಂತ್ರವನ್ನು ದೇವೇಗೌಡರು ರೂಪಿಸಿದ್ದರೋ.ಅದೇ ನಿಟ್ಟಿನಲ್ಲಿ ಹಾಸನ ಜಿಲ್ಲೆಯಲ್ಲಿ ಕಾರ್ಯಕರ್ತರು ತೊಡಗಿಕೊಂಡು ಈ ಬಾರಿಯ ಚುನಾವಣೆಯಲ್ಲಿ ದೇವೇಗೌಡರು,ಮೊಮ್ಮಕ್ಕಳನ್ನು ಸೋಲಿಸುವ ಮೂಲಕ ಸಮಾಜಕ್ಕೆ ಹೊಸ ಭರವಸೆಯ ರಾಜಕೀಯ ಇತಿಹಾಸ ನಿರ್ಮಿಸಬೇಕೆಂದು ಕಾರ್ಯಕರ್ತರಲ್ಲಿ ಕೈಮುಗಿದು ವಿನಂತಿಮಾಡಿದರು.

ಕುಟುಂಬದ ರಾಜಕಾರಣ: ನಿಯಮದಂತೆ ಸರಕಾರಿ,ಅರೆ ಸರಕಾರಿ ನೌಕರನಿಗೆ ಹಂತ ಹಂತವಾಗಿ ಬಡ್ತಿ ಸಿಗುತ್ತದೆ.ಆದರೆ ದೇವೇಗೌಡರ ಕುಟುಂಬದಲ್ಲಿ ಮಾತ್ರ ಅದು ವಿರುದ್ಧವಾಗಿರುತ್ತದೆ. ಹಾಸನ ಮತ್ತು ಮಂಡ್ಯದಲ್ಲಿ ಮೊಮ್ಮಕ್ಕಳಿಗೆ ಸೀಟು ಕೊಡಿಸಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ವಂಚನೆ ಮಾಡುತ್ತಿದ್ದಾರೆ ಎಂದು ಕೆಂಡಕಾರಿದರು.

ಕಣ್ಣೀರಿಗೆ ವ್ಯಂಗ್ಯ: ಮಾಜಿ ಪ್ರಧಾನಿ ದೇವೇಗೌಡ,ಸಚಿವ ರೇವಣ್ಣ,ಮೊಮ್ಮಗ ಪ್ರಜ್ವಲ್‌ ರೇವಣ್ಣ ವೇದಿಕೆಯಲ್ಲಿ ಭಾವುಕರಾಗಿ ಕಣ್ಣೀರು ಹಾಕಿರುವ ಬಗ್ಗೆ ಮಾಧ್ಯಮದಲ್ಲಿ ವರದಿಯಾಗಿದೆ.ಮನುಷ್ಯ ಕಷ್ಟಬಂದಾಗ ಕಣ್ಣೀರು ಹಾಕುತ್ತಾನೆ. ಆದರೆ ಎಲ್ಲಾ ರಾಜಕೀಯ ಅಧಿಕಾರ ಅನುಭವಿಸಿ ವೇದಿಕೆಯಲ್ಲಿ ಕಣ್ಣೀರು ಹಾಕುವ ದೇವೇಗೌಡರ ನಡೆ ಸರಿಯಿಲ್ಲ. ಈ ವೇಳೆ ದೇವೇಗೌಡರ ಮಗ ಸಚಿವ ರೇವಣ್ಣ,ಮೊಮ್ಮಗ,ಸೊಸೆ ಸಹ ವೇದಿಕೆಯಲ್ಲಿದ್ದು, ಕಣ್ಣೀರು ಹಾಕಿದ್ದಾರೆ ವಿನಃ ನಿವೇ ಹಾಸನದಲ್ಲಿ ನಿಂತುಕೊಳ್ಳಿ ಎಂದು ವೇದಿಕೆಯಲ್ಲಿ ಹೇಳಿದ್ದರೇ ಅದನ್ನು ಒಪ್ಪಬಹುದಿತ್ತು ಎಂಧರು.

ನಾನು ಮತ್ತೂಮ್ಮೆ ಹೇಳುತ್ತೇನೆ.ದೇವೇಗೌಡ್ರೆ ಹಾಸನದಿಂದ ಸ್ಪರ್ಧಿಸಿ ನನ್ನ ಸಂಪೂರ್ಣ ಸಹಕಾರವಿದೆ ಎಂದು ವೇದಿಕೆಯಲ್ಲಿ ಪುನರುಚ್ಚರಿಸಿದರು. ಅಳುವ ಮೂಲಕ ಮೊಮ್ಮಕ್ಕಳಿಗೆ ಸಹಾಯಮಾಡಿ ಎಂಬ ನಾಟಕದಿಂದ ದೇವೇಗೌಡ ಕಣ್ಣೀರು ಹಾಕುತ್ತಾರೆ ವಿನಃ ಅದು ಸಂಕಷ್ಟದ ಕಣ್ಣೀರು ಅಲ್ಲ ಎಂದು ಅವರು ವ್ಯಂಗ್ಯವಾಡಿದರು.

ಕಾಂಗ್ರೆಸ್‌ ಕಾರ್ಯಕರ್ತರ ನಿರ್ಲಕ್ಷ್ಯ: ಜಿಲ್ಲಾ ಕಾಂಗ್ರೆಸ್‌ ಮುಖಂಡ ನಾರಾಯಣಗೌಡ,ಹಳ್ಳಿ ಮೈಸೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶಾಂಭಶಿವಪ್ಪ,ಜಿಪಂ ಸದಸ್ಯ ರೇವಣ್ಣ,ಕಾಂಗ್ರೆಸ್‌ ಮುಖಂಡ ಮುನಿಸ್ವಾಮಿ,ಎಂಡಿ ಹಾಸಂ ಮಾತನಾಡಿ,ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಬಂದಾಗಿನಿಂದ ಕಾಂಗ್ರೆಸ್‌ ಕಾರ್ಯಕರ್ತರು,ಮುಖಂಡರನ್ನು ಕೇಳುವವರಿಲ್ಲ.ಮಾಜಿ ಸಚಿವ ಮಂಜು ಅವರು ಲೋಕಸಭೆ ಚುನಾವಣೆಯಲ್ಲಿ ತೆಗೆದುಕೊಳ್ಳುವ ನಿರ್ಧಾರವನ್ನು ಸ್ವಾಗತಿಸಿ ಅವರ ಬೆಂಬಲಕ್ಕೆ ನಿಲ್ಲುವ ಭರವಸೆಯನ್ನು ನೀಡಿದರು.

ವೇದಿಕೆಯಲ್ಲಿ ಮಾಜಿ ಎಪಿಎಂಸಿ ಅಧ್ಯಕ್ಷ ಕಂಬೇಗೌಡ,ಕಾಂಗ್ರೆಸ್‌ ಮುಖಂಡ ರಾಜೇಗೌಡ,ಕಮಲಮ್ಮ,ಪ್ರಸನ್ನಕುಮಾರ್‌,ರಂಗೇಗೌಡ ಇತರರು ಹಾಜರಿದ್ದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.