ಹೆಣ್ಣು-ಗಂಡೆಂಬ ಭೇದ ಬೇಡ : ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ – ಪ್ರೋತ್ಸಾಹಿಸಿ
Team Udayavani, Jan 17, 2021, 2:57 PM IST
ಹಾವೇರಿ: ಹೆಣ್ಣು-ಗಂಡು ಎಂಬ ಭೇದಬೇಡ. ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ಸರ್ಕಾರಿ ಹಾಗೂ ಖಾಸಗಿ ವಲಯಗಳಲ್ಲಿ ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡುವಂತೆ ಪ್ರೋತ್ಸಾಹಿಸಬೇಕು ಎಂದು ಶಾಸಕ ನೆಹರು ಓಲೇಕಾರ ಹೇಳಿದರು. ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಹಯೋಗದಲ್ಲಿ “ಮಗಳನ್ನು
ಉಳಿಸಿ ಮಗಳನ್ನು ಓದಿಸಿ’ ಯೋಜನೆ ಅಂಗವಾಗಿ ಶುಕ್ರವಾರ ಆಯೋಜಿಸಲಾದ ಹೆಣ್ಣು ಮಕ್ಕಳ ಹುಟ್ಟುಹಬ್ಬದ ಆಚರಣೆ
ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕುರಹಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಹೆಣ್ಣು ಮಕ್ಕಳ ಲಿಂಗಾನುಪಾತವನ್ನು ಹೆಚ್ಚಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಇಲಾಖೆಯಿಂದ ಬೀದಿ ನಾಟಕ, ಜಾಗೃತಿ ಜಾಥಾಗಳು, ಭಿತ್ತಿ ಪತ್ರಗಳ ಮೂಲಕ ಹೆಣ್ಣು ಮಗುವಿನ ರಕ್ಷಣೆ ಕುರಿತಾಗಿ ಅರಿವು ಮೂಡಿಸಲಾಗುತ್ತಿದೆ ಹೇಳಿದರು.
ಇದೇ ಸಂದರ್ಭದಲ್ಲಿ ಜನವರಿ ಮಾಹೆಯಲ್ಲಿ ಜನಿಸಿದ ಅಂಗನವಾಡಿ ಹೆಣ್ಣು ಮಕ್ಕಳೊಂದಿಗೆ ಕೇಕ್ ಕತ್ತರಿಸಿದರು. ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಅಡಿಯಲ್ಲಿ 5 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನದ ಚೆಕ್ ಮತ್ತು 5 ಫಲಾನುಭವಿಗಳಿಗೆ ಭಾಗ್ಯ ಲಕ್ಷ್ಮಿ ಬಾಂಡ್ಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.
ಇದನ್ನೂ ಓದಿ:ಬರ್ತ್ಡೇ ಬದಲು ಪುಣ್ಯದ ಕೆಲಸದಲ್ಲಿ ಕೈ ಜೋಡಿಸಿ: ದುನಿಯಾ ವಿಜಯ್ ಮನವಿ
ತಾಪಂ ಸದಸ್ಯ ವಿರೂಪಾಕ್ಷಪ್ಪ ಹುಲ್ಲೂರು, ನಿಗಮ ಮಂಡಳಿ ಮಾಜಿ ಅಧ್ಯಕ್ಷ ಭೋಜರಾಜ ಕೆರೂಡಿ, ಕೆ.ಸಿ. ಕೋರಿ, ತಾಪಂ ಇಒ ಬಸರಾಜ ಡಿ.ಸಿ., ಬಿಇಒ ಎಂ.ಎಚ್. ಪಾಟೀಲ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಿಕಾರ್ಜುನ ಕೆಂಪಳ್ಳೆರ,
ಮೇಲ್ವಿಚಾರಕಿಯರು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್