ಲಾರಿಗೆ ಕಾರ್ ಡಿಕ್ಕಿ: ಚಾಲಕ ದುರ್ಮರಣ; ದಾಬೋಲಿ ಶ್ರೀ ಪಾರು
Team Udayavani, Mar 25, 2018, 11:28 AM IST
ರಾಣಿಬೆನ್ನೂರ: ಲಾರಿಗೆ ಹಿಂದಿನಿಂದ ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಕಮದೋಡ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ನಸುಕಿನ ವೇಳೆ ಸಂಭವಿಸಿದೆ. ಕಾರಿನಲ್ಲಿದ್ದ ಮಹಾರಾಷ್ಟ್ರದ ದಾಬೋಲಿಯ ಶ್ರೀಸಂಸ್ಥಾನಮಠದ ದತ್ತಾನಂದ ಸರಸ್ವತಿ ಸ್ವಾಮೀಜಿ ಗಾಯಗೊಂಡಿದ್ದು ಅಪಾಯದಿಂದ ಪಾರಾಗಿದ್ದಾರೆ.
ಮೃತ ದುರ್ದೈವಿ ಚಾಲಕ ಪುಣೆಯ ಶೈಲೇಂದ್ರ ಶ್ಯಾಮ ಶಿರೋಡ್ಕರ್ (40) ಎಂದು ಗುರುತಿಸಲಾಗಿದೆ.
ಮಹರಾಷ್ಟ್ರದ ಕುಡಾಲದ ವೆಂಗುರ್ಲದ ಮಠದಿಂದ ದತ್ತಾನಂದ ಸ್ವಾಮೀಜಿಗಳು, ಶೃಂಗೇರಿ ಮಠಕ್ಕೆ ತೆರಳುತ್ತಿದ್ದರು. ಶ್ರೀಗಳು ರಾಣಿಬೆನ್ನೂರಿನ ಖಾಸಗಿ ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ.
ಎದುರುಗಡೆ ಚಲಿಸುತ್ತಿದ್ದ ಲಾರಿಯು ಏಕಾಏಕಿ ವೇಗ ಕಡಿತಗೋಳಿಸಿದ ಕಾರಣ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಹಲಗೇರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
ಹಾವೇರಿ: ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ
ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ