ಪ್ರಚಾರಕ್ಕೆ ಕುಟುಂಬ ಸದಸ್ಯರ ಸಾಥ್‌


Team Udayavani, Aug 30, 2018, 4:20 PM IST

30-agust-21.jpg

ಹಾವೇರಿ: ನಗರಸಭೆ ಚುನಾವಣೆ ಬಹಿರಂಗ ಪ್ರಚಾರ ಕೊನೆಗೊಂಡ ಹಿನ್ನೆಲೆಯಲ್ಲಿ ಬುಧವಾರ ಅಭ್ಯರ್ಥಿಗಳು, ತಮ್ಮ ನಾಯಕರು, ಅಭಿಮಾನಿಗಳು ಹಾಗೂ ಕಾರ್ಯಕರ್ತರೊಂದಿಗೆ ಮನೆ ಮನೆ ಭೇಟಿ ನೀಡಿ ಮತಯಾಚಿಸಿದರು. ಮನೆಮನೆ ಭೇಟಿ ಪ್ರಚಾರ ಎಲ್ಲೆಡೆ ನಡೆದಿದ್ದರಿಂದ ನಗರದ ಎಲ್ಲ 31 ವಾರ್ಡ್‌ಗಳಲ್ಲಿ ಜನಸಂಚಾರ, ಜನದಟ್ಟಣೆ ಹೆಚ್ಚಾಗಿತ್ತು. ಎಲ್ಲೆಡೆ ಮತಯಾಚನೆಯ ದೃಶ್ಯ ಕಂಡು ಬಂದಿತು. ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ಮುಖಂಡರು, ಕಾರ್ಯಕರ್ತರೊಂದಿಗೆ ಮನೆ ಮನೆ ಮತಯಾಚಿಸಿದರೆ, ಮತ್ತೆ ಕೆಲ ಪಕ್ಷೇತರರು ವಿವಿಧ ಜಾತಿ, ಸಮುದಾಯಗಳ ನಾಯಕರನ್ನು ಕರೆಸಿ ಅವರೊಂದಿಗೆ ಮತಯಾಚಿಸಿದರು.

ಕೆಲ ಅಭ್ಯರ್ಥಿಗಳಂತೂ ತಮ್ಮ ಮನೆಯ ಎಲ್ಲ ಸದಸ್ಯರನ್ನು ಮತಯಾಚನೆಗೆ ಬಳಸಿಕೊಂಡಿದ್ದು ಕಂಡು ಬಂದಿತು. ಹೆಂಡತಿ, ಮಕ್ಕಳು, ಸಹೋದರ, ಸಹೋದರಿಯರು, ಅತ್ತಿಗೆ, ನಾದಿನಿ ಎಲ್ಲರೂ ತಮ್ಮ ಸಂಬಂಧಿ  ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮತದಾರರಲ್ಲಿ ತಮ್ಮದೇ ಆದ ಆತ್ಮೀಯ ಶೈಲಿಯಲ್ಲಿ ಕೋರಿದರು.

ಅಭ್ಯರ್ಥಿಗಳು ಮುಂಜಾನೆ ಏಳು ಗಂಟೆಯಿಂದಲೇ ಮನೆ ಮನೆಗೆ ಹೋಗಿ ಮತದಾರರನ್ನು ಭೇಟಿಯಾಗಿ ಮತಯಾಚಿಸಿದರು. ರಾತ್ರಿ 9ಗಂಟೆವರೆಗೂ ಮನೆ ಭೇಟಿ ನೀಡಿದರು. ಕೆಲ ವಾರ್ಡ್‌ಗಳಲ್ಲಿ ರಾಜಕೀಯ ಪಕ್ಷಗಳು, ಕೆಲ ಪಕ್ಷೇತರ ಅಭ್ಯರ್ಥಿಗಳು ಈ ಸ್ಪರ್ಧೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದು, ಮತದಾರರಿಗೆ ಹಣದ ಆಮಿಷಯೊಡ್ಡಲು ಸಹ ಮುಂದಾಗಿದ್ದಾರೆ.

ಮಳೆ ಸಹಕಾರ: ಕಳೆದ ಎರಡು ದಿನಗಳಿಂದ ಮಳೆ ಕಡಿಮೆಯಾಗಿದ್ದು ಇಡೀ ದಿನ ಬಿಸಿಲು ಬೀಳುತ್ತಿರುವುದರಿಂದ ಮತ ಪ್ರಚಾರಕ್ಕೆ ಮಳೆರಾಯ ಭಾರಿ ಅನುಕೂಲ ಮಾಡಿಕೊಟ್ಟಂತಾಗಿದೆ. ಆದರೆ, ಈ ಹಿಂದೆ ಸುರಿದ ಮಳೆಯಿಂದ ಕೆಸರುಗದ್ದೆಯಂತಾದ ರಸ್ತೆಗಳು ನಗರಸಭೆ ಅಭ್ಯರ್ಥಿಗಳನ್ನು ಅಣಕಿಸುತ್ತಿದ್ದು ಹೊಸ ಅಭ್ಯರ್ಥಿಗಳು ಇಂಥ ರಸ್ತೆಗಳಿಗೆ ಕಾಯಕಲ್ಪ ಮಾಡುವುದಾಗಿ ಭರವಸೆ ನೀಡಿದರೆ, ಈ ಹಿಂದೆ ಸದಸ್ಯರಾಗಿ ಈ ಬಾರಿ ಮತ್ತೆ ಅಭ್ಯರ್ಥಿಗಳಾದವರು ಈ ರಸ್ತೆ ಅಭಿವೃದ್ಧಿ ಪಟ್ಟಿಯಲ್ಲಿ ಸೇರಿಕೊಂಡಿದ್ದು ಶೀಘ್ರದಲ್ಲಿಯೇ ಸರಿಪಡಿಸಲಾಗುತ್ತದೆ ಎಂಬ ಪೊಳ್ಳು ಭರವಸೆ ನೀಡುತ್ತ ಮುಜುಗರದಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಡುತ್ತಿದ್ದರು.

ಬಾರ್‌, ಹೋಟೆಲ್‌ಗ‌ಳಿಗೆ ಶುಕ್ರದೆಸೆ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆ ಆರಂಭವಾದಾಗಿನಿಂದ ಹೋಟೆಲ್‌ಗ‌ಳಲ್ಲಿ ಕಾರ್ಯಕರ್ತರಿಗೆ ಅಭ್ಯರ್ಥಿಗಳಿಂದ ಸಾಮೂಹಿಕ ಭೋಜನ ವ್ಯವಸ್ಥೆ ಮಾಡಲಾಗುತ್ತಿದ್ದು, ಹೊಟೆಲ್‌ ಗಳಿಗೆ ಶುಕ್ರದೆಸೆ ಶುರುವಾಗಿದೆ. ರಾತ್ರಿ 8 ಗಂಟೆ ಆಗುತ್ತಿದ್ದಂತೆ ಬಾರ್‌ ಮತ್ತು ಹೊಟೆಲ್‌ಗ‌ಳು ಹೌಸ್‌ಫುಲ್‌. ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ, ಬೆಂಬಲಿಗರಿಗೆ ಮದ್ಯ, ಊಟದ ವ್ಯವಸ್ಥೆ ಮಾಡುವುದು ಮಾಮೂಲು ಆಗಿದೆ.

ಪತ್ನಿ ಪರ ಪತಿ ಪ್ರಚಾರ 
ಇನ್ನು ಸ್ಪರ್ಧೆಯಲ್ಲಿ ಶೇ. 50ರಷ್ಟು ಮಹಿಳಾ ಮೀಸಲಾತಿ ಇರುವುದರಿಂದ ಅನೇಕ ಮಹಿಳಾ ಅಭ್ಯರ್ಥಿಗಳ ಪರವಾಗಿ ಅವರ ಪತಿ, ಸಹೋದರರು, ಸಂಬಂಧಿ ಕರೇ ಮತಯಾಚನೆಗೆ ತೊಡಗಿದರು. ಕೆಲ ಪತಿ ಮಹಾಶಯರಂತೂ ತಮ್ಮನ್ನು ನೋಡಿಯೇ ಮತ ಹಾಕಿ. ಮುಂದೆ ತಾವೇ ಪತ್ನಿಯ ಪರವಾಗಿ ಅಧಿಕಾರ ಚಲಾಯಿಸುವವರು ಎನ್ನುವ ರೀತಿಯಲ್ಲಿ ಸಮಸ್ಯೆ ಬಗೆಹರಿಸುವ ಭರವಸೆ ವರಸೆ ಪ್ರಯೋಗಿಸುತ್ತಿರುವ ದೃಶ್ಯ ಹಲವೆಡೆ ಕಂಡು ಬಂದಿತು. 

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.