ಪ್ರಚಾರಕ್ಕೆ ಕುಟುಂಬ ಸದಸ್ಯರ ಸಾಥ್‌


Team Udayavani, Aug 30, 2018, 4:20 PM IST

30-agust-21.jpg

ಹಾವೇರಿ: ನಗರಸಭೆ ಚುನಾವಣೆ ಬಹಿರಂಗ ಪ್ರಚಾರ ಕೊನೆಗೊಂಡ ಹಿನ್ನೆಲೆಯಲ್ಲಿ ಬುಧವಾರ ಅಭ್ಯರ್ಥಿಗಳು, ತಮ್ಮ ನಾಯಕರು, ಅಭಿಮಾನಿಗಳು ಹಾಗೂ ಕಾರ್ಯಕರ್ತರೊಂದಿಗೆ ಮನೆ ಮನೆ ಭೇಟಿ ನೀಡಿ ಮತಯಾಚಿಸಿದರು. ಮನೆಮನೆ ಭೇಟಿ ಪ್ರಚಾರ ಎಲ್ಲೆಡೆ ನಡೆದಿದ್ದರಿಂದ ನಗರದ ಎಲ್ಲ 31 ವಾರ್ಡ್‌ಗಳಲ್ಲಿ ಜನಸಂಚಾರ, ಜನದಟ್ಟಣೆ ಹೆಚ್ಚಾಗಿತ್ತು. ಎಲ್ಲೆಡೆ ಮತಯಾಚನೆಯ ದೃಶ್ಯ ಕಂಡು ಬಂದಿತು. ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ಮುಖಂಡರು, ಕಾರ್ಯಕರ್ತರೊಂದಿಗೆ ಮನೆ ಮನೆ ಮತಯಾಚಿಸಿದರೆ, ಮತ್ತೆ ಕೆಲ ಪಕ್ಷೇತರರು ವಿವಿಧ ಜಾತಿ, ಸಮುದಾಯಗಳ ನಾಯಕರನ್ನು ಕರೆಸಿ ಅವರೊಂದಿಗೆ ಮತಯಾಚಿಸಿದರು.

ಕೆಲ ಅಭ್ಯರ್ಥಿಗಳಂತೂ ತಮ್ಮ ಮನೆಯ ಎಲ್ಲ ಸದಸ್ಯರನ್ನು ಮತಯಾಚನೆಗೆ ಬಳಸಿಕೊಂಡಿದ್ದು ಕಂಡು ಬಂದಿತು. ಹೆಂಡತಿ, ಮಕ್ಕಳು, ಸಹೋದರ, ಸಹೋದರಿಯರು, ಅತ್ತಿಗೆ, ನಾದಿನಿ ಎಲ್ಲರೂ ತಮ್ಮ ಸಂಬಂಧಿ  ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮತದಾರರಲ್ಲಿ ತಮ್ಮದೇ ಆದ ಆತ್ಮೀಯ ಶೈಲಿಯಲ್ಲಿ ಕೋರಿದರು.

ಅಭ್ಯರ್ಥಿಗಳು ಮುಂಜಾನೆ ಏಳು ಗಂಟೆಯಿಂದಲೇ ಮನೆ ಮನೆಗೆ ಹೋಗಿ ಮತದಾರರನ್ನು ಭೇಟಿಯಾಗಿ ಮತಯಾಚಿಸಿದರು. ರಾತ್ರಿ 9ಗಂಟೆವರೆಗೂ ಮನೆ ಭೇಟಿ ನೀಡಿದರು. ಕೆಲ ವಾರ್ಡ್‌ಗಳಲ್ಲಿ ರಾಜಕೀಯ ಪಕ್ಷಗಳು, ಕೆಲ ಪಕ್ಷೇತರ ಅಭ್ಯರ್ಥಿಗಳು ಈ ಸ್ಪರ್ಧೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದು, ಮತದಾರರಿಗೆ ಹಣದ ಆಮಿಷಯೊಡ್ಡಲು ಸಹ ಮುಂದಾಗಿದ್ದಾರೆ.

ಮಳೆ ಸಹಕಾರ: ಕಳೆದ ಎರಡು ದಿನಗಳಿಂದ ಮಳೆ ಕಡಿಮೆಯಾಗಿದ್ದು ಇಡೀ ದಿನ ಬಿಸಿಲು ಬೀಳುತ್ತಿರುವುದರಿಂದ ಮತ ಪ್ರಚಾರಕ್ಕೆ ಮಳೆರಾಯ ಭಾರಿ ಅನುಕೂಲ ಮಾಡಿಕೊಟ್ಟಂತಾಗಿದೆ. ಆದರೆ, ಈ ಹಿಂದೆ ಸುರಿದ ಮಳೆಯಿಂದ ಕೆಸರುಗದ್ದೆಯಂತಾದ ರಸ್ತೆಗಳು ನಗರಸಭೆ ಅಭ್ಯರ್ಥಿಗಳನ್ನು ಅಣಕಿಸುತ್ತಿದ್ದು ಹೊಸ ಅಭ್ಯರ್ಥಿಗಳು ಇಂಥ ರಸ್ತೆಗಳಿಗೆ ಕಾಯಕಲ್ಪ ಮಾಡುವುದಾಗಿ ಭರವಸೆ ನೀಡಿದರೆ, ಈ ಹಿಂದೆ ಸದಸ್ಯರಾಗಿ ಈ ಬಾರಿ ಮತ್ತೆ ಅಭ್ಯರ್ಥಿಗಳಾದವರು ಈ ರಸ್ತೆ ಅಭಿವೃದ್ಧಿ ಪಟ್ಟಿಯಲ್ಲಿ ಸೇರಿಕೊಂಡಿದ್ದು ಶೀಘ್ರದಲ್ಲಿಯೇ ಸರಿಪಡಿಸಲಾಗುತ್ತದೆ ಎಂಬ ಪೊಳ್ಳು ಭರವಸೆ ನೀಡುತ್ತ ಮುಜುಗರದಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಡುತ್ತಿದ್ದರು.

ಬಾರ್‌, ಹೋಟೆಲ್‌ಗ‌ಳಿಗೆ ಶುಕ್ರದೆಸೆ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆ ಆರಂಭವಾದಾಗಿನಿಂದ ಹೋಟೆಲ್‌ಗ‌ಳಲ್ಲಿ ಕಾರ್ಯಕರ್ತರಿಗೆ ಅಭ್ಯರ್ಥಿಗಳಿಂದ ಸಾಮೂಹಿಕ ಭೋಜನ ವ್ಯವಸ್ಥೆ ಮಾಡಲಾಗುತ್ತಿದ್ದು, ಹೊಟೆಲ್‌ ಗಳಿಗೆ ಶುಕ್ರದೆಸೆ ಶುರುವಾಗಿದೆ. ರಾತ್ರಿ 8 ಗಂಟೆ ಆಗುತ್ತಿದ್ದಂತೆ ಬಾರ್‌ ಮತ್ತು ಹೊಟೆಲ್‌ಗ‌ಳು ಹೌಸ್‌ಫುಲ್‌. ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ, ಬೆಂಬಲಿಗರಿಗೆ ಮದ್ಯ, ಊಟದ ವ್ಯವಸ್ಥೆ ಮಾಡುವುದು ಮಾಮೂಲು ಆಗಿದೆ.

ಪತ್ನಿ ಪರ ಪತಿ ಪ್ರಚಾರ 
ಇನ್ನು ಸ್ಪರ್ಧೆಯಲ್ಲಿ ಶೇ. 50ರಷ್ಟು ಮಹಿಳಾ ಮೀಸಲಾತಿ ಇರುವುದರಿಂದ ಅನೇಕ ಮಹಿಳಾ ಅಭ್ಯರ್ಥಿಗಳ ಪರವಾಗಿ ಅವರ ಪತಿ, ಸಹೋದರರು, ಸಂಬಂಧಿ ಕರೇ ಮತಯಾಚನೆಗೆ ತೊಡಗಿದರು. ಕೆಲ ಪತಿ ಮಹಾಶಯರಂತೂ ತಮ್ಮನ್ನು ನೋಡಿಯೇ ಮತ ಹಾಕಿ. ಮುಂದೆ ತಾವೇ ಪತ್ನಿಯ ಪರವಾಗಿ ಅಧಿಕಾರ ಚಲಾಯಿಸುವವರು ಎನ್ನುವ ರೀತಿಯಲ್ಲಿ ಸಮಸ್ಯೆ ಬಗೆಹರಿಸುವ ಭರವಸೆ ವರಸೆ ಪ್ರಯೋಗಿಸುತ್ತಿರುವ ದೃಶ್ಯ ಹಲವೆಡೆ ಕಂಡು ಬಂದಿತು. 

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.