ಮತ ಎಣಿಕೆಗೆ ಆಯೋಗ ಸಕಲ ಸಿದ್ಧತೆ


Team Udayavani, Sep 2, 2018, 3:42 PM IST

2-september-21.jpg

ಹಾವೇರಿ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸಿದ 480 ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದ್ದು ಮತಯಂತ್ರಗಳು ಭದ್ರತಾ ಕೊಠಡಿಯಲ್ಲಿ ಪೊಲೀಸ್‌ ಬಿಗಿಭದ್ರತೆಯಲ್ಲಿವೆ.

ಜಿಲ್ಲೆಯಾದ್ಯಂತ ಶುಕ್ರವಾರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಶೇ. 69.07ರಷ್ಟು ಮತದಾನ ನಡೆದಿದ್ದು 1,41,541 ಮತದಾರರು ಮತ ಚಲಾಯಿಸಿದ್ದಾರೆ. ಮತಯಂತ್ರಗಳನ್ನಿಟ್ಟಿರುವ ಪ್ರತಿಯೊಂದು ಭದ್ರತಾ ಕೊಠಡಿಗೂ ದಿನದ 24ಗಂಟೆಗಳ ಕಾಲ ಭದ್ರತೆಗೆ ಐವರು ಪೊಲೀಸ್‌ ಪೇದೆಗಳು, ಒಂದು ಜಿಲ್ಲಾ ಮೀಸಲು ಪಡೆ, ಒಬ್ಬ ಪಿಎಸ್‌ಐ ಹಾಗೂ ಎಎಸ್‌ಐ ಸಿಬ್ಬಂದಿಗಳು ಕಾವಲಿದ್ದಾರೆ.

ಸೆ. 3ರಂದು ಮತ ಎಣಿಕೆ ಕಾರ್ಯ ಬೆಳಗ್ಗೆ 8ರಿಂದ ನಡೆಯಲಿದ್ದು, ಇದಕ್ಕಾಗಿ ಜಿಲ್ಲಾ ಚುನಾವಣಾ ಆಯೋಗ ಸಿದ್ಧತೆಯಲ್ಲಿ ತೊಡಗಿದೆ. ಹಾವೇರಿ ನಗರಸಭೆಯ 31 ಹಾಗೂ ರಾಣೆಬೆನ್ನೂರ ನಗರಸಭೆ 35 ವಾರ್ಡ್‌ಗಳ ಮತ ಎಣಿಕೆಗೆ ತಲಾ ಎಂಟು ಟೇಬಲ್‌ ಗಳನ್ನು ಪುರಸಭೆ, ಪಪಂಗಳಿಗೆ ತಲಾ ನಾಲ್ಕು ಟೇಬಲ್‌ಗ‌ಳಂತೆ ಒಟ್ಟು 36 ಟೇಬಲ್‌ಗ‌ಳನ್ನು ಮತ ಎಣಿಕೆ ಕಾರ್ಯಕ್ಕೆ ಬಳಸಲು ಆಯೋಗ ನಿರ್ಧರಿಸಿದೆ. ಒಬ್ಬರು ಮೇಲ್ವಿಚಾರಕರು, ಒಬ್ಬರು ಸಹಾಯಕರು ಹಾಗೂ ಡಿ ವರ್ಗದ ನೌಕರ ಪ್ರತಿಯೊಬ್ಬ ಚುನಾವಣಾಧಿಕಾರಿಗೆ ಒಬ್ಬ ಸಹಾಯಕರು ಮತ ಎಣಿಕೆ ಕಾರ್ಯ ನಿರ್ವಹಿಸುವರು.

ಈ ಬಾರಿ ಇವಿಎಂ ಬಳಸಿರುವುದರಿಂದ ಮತ ಎಣಿಕೆ ಆರಂಭಗೊಂಡ ಎರಡು ತಾಸಿನಲ್ಲಿ ಜಿಲ್ಲೆಯ ಎಲ್ಲ ಐದು ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರ ಬೀಳುವ ಸಾಧ್ಯತೆ ಇದೆ. ಹಾವೇರಿ ನಗರಸಭೆಯ ಮತ ಎಣಿಕೆ ಹಾವೇರಿ ನಗರದ ರಾಚೋಟೇಶ್ವರ ಪದವಿಪೂರ್ವ ಕಾಲೇಜಿನಲ್ಲಿ, ರಾಣಿಬೆನ್ನೂರ ನಗರಸಭೆಯದ್ದು ಸೇಂಟ್‌ ಲಾರೆನ್ಸ್‌ ಸ್ಕೂಲ್‌, ಹಾನಗಲ್ಲ ಹಾಗೂ ಹಿರೇಕೆರೂರು ಮತ ಎಣಿಕೆ ಆಯಾ ತಹಶೀಲ್ದಾರ್‌ ಕಚೇರಿ ಹಾಗೂ ಸವಣೂರ ಮತ ಎಣಿಕೆ ಸರ್ಕಾರಿ ಪ್ರಾಥಮಿಕ ಶಾಲೆ ನಂ. 2ರಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.