ಕಲಿಕಾ ಪದ್ಧತಿಯಲ್ಲಿ ತಂತ್ರಜ್ಞಾನ ಬಳಸಿ
Team Udayavani, Sep 5, 2018, 4:05 PM IST
ಹಾವೇರಿ: ಭೂ ಮಂಡಲ, ನಕ್ಷತ್ರಗಳು, ಗ್ರಹಗಳು, ಚಂದ್ರಮಂಡಲ, ಸೂರ್ಯ ಮಂಡಲ, ಬುಧ, ಶುಕ್ರ, ಶನಿ, ಮಂಗಳ ಗ್ರಹಗಳ ಚಲನವಲನಗಳ ಕುರಿತಂತೆ ವಿದ್ಯಾರ್ಥಿಗಳಿಗೆ ಪರಿಚಯಿಸಲು ರಾಜ್ಯ ವಿಜ್ಞಾನ ಪರಿಷತ್ ಹಮ್ಮಿಕೊಂಡಿದ್ದ ‘ಶಾಲಾ ಅಂಗಳದಲ್ಲಿ ತಾರಾಲಯ’ ಕಾರ್ಯಕ್ರಮ ನಗರದ ವಿದ್ಯಾರ್ಥಿಗಳಲ್ಲಿ ನಭೋಮಂಡಲದ ವಿಸ್ಮಯಗಳನ್ನು ಪರಿಚಯಿಸಿತು. ನಗರದ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಆಯೋಜಿಸಿದ್ದ ಶಾಲಾ ಅಂಗಳದಲ್ಲಿ ತಾರಾಲಯ ಕಾರ್ಯಕ್ರಮದ ಅಂಗವಾಗಿ ತ್ರಿಡಿ ವಿಡಿಯೋ ಹಾಗೂ ವಿವಿಧ ಮಾದರಿಗಳೊಂದಿಗೆ ಭೂಮಿ ಮತ್ತು ಅಂತರಿಕ್ಷಗಳ ಕೌತುಕಗಳನ್ನು ತಾರಾಲಯಗಳ ಕಾರ್ಯನಿರ್ವಹಣೆ ಕುರಿತಂತೆ ವಿವರನಾತ್ಮಕ ಪರಿಚಯ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಜಿಪಂ ಉಪ ಕಾರ್ಯದರ್ಶಿ ಜಿ.ಗೋವಿಂದಸ್ವಾಮಿ ಮಾತನಾಡಿ, ಆಧುನಿಕ ಕಲಿಕಾ ಪದ್ಧತಿಯಲ್ಲಿ ಮಕ್ಕಳ ಪಠ್ಯ ವಿಷಯ ಹೆಚ್ಚು ಮನದಟ್ಟಾಗಲು ವಿಜ್ಞಾನ ಮತ್ತು ತಂತ್ರಜ್ಞಾನದ ಬಳಕೆ ಅತ್ಯಂತ ಅವಶ್ಯವಾಗಿದೆ ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ ಮಾತನಾಡಿ, ಆಧುನಿಕ ಜಗತ್ತಿನಲ್ಲಿ ಎಲ್ಲ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಮಕ್ಕಳನ್ನು ವೈಜ್ಞಾನಿಕವಾಗಿ ಹೆಚ್ಚು ಬುದ್ಧಿವಂತರನ್ನಾಗಿಸುವುದು ಅವಶ್ಯವಾಗಿದೆ. ಶಾಲಾ ಅಂಗಳದಲ್ಲಿ ತಾರಾಲಯ ಕಾರ್ಯಕ್ರಮ ಭೂಮಿ ಮತ್ತು ಅಂತರಿಕ್ಷದ ಬಗ್ಗೆ ಮಕ್ಕಳಲ್ಲಿರುವ ಕೌತುಕವನ್ನು ತಣಿಸಲು ಮತ್ತು ಅರಿತುಕೊಳ್ಳಲು ಉಪಕಾರಿಯಾಗಿದೆ ಎಂದರು. ಕಾರ್ಯಕ್ರಮ ವೀಕ್ಷಿಸಿದ ವಿದ್ಯಾರ್ಥಿಗಳು, ತಾರಾಲಯಗಳನ್ನು ವೀಕ್ಷಿಸಲು ನಾವು ಬೆಂಗಳೂರು ಅಥವಾ ಹೈದ್ರಾಬಾದಿಗೆ ಹೋಗಬೇಕಾಗಿತ್ತು.
ಈ ಹಂತದಲ್ಲಿ ಅಲ್ಲಿಗೆ ಹೋಗಿ ವೀಕ್ಷಿಸಲು ನಮಗೆ ಸಾಧ್ಯವಾಗುವುದಿಲ್ಲ. ಆದರೆ, ಪಠ್ಯದಲ್ಲಿ ಮಾತ್ರ ಈ ವಿಷಯವನ್ನು ತಿಳಿದುಕೊಂಡಿದ್ದೇವು. ತಾರಾಲಯದ ಬಗ್ಗೆ ನಮಗಿರುವ ಕೌತುಕವನ್ನು ಹಲವು ಪ್ರಶ್ನೆಗಳು ಈ ಕಾರ್ಯಕ್ರಮದಿಂದ ತಿಳಿದುಕೊಳ್ಳಲು ಸಹಕಾರಿಯಾಗಿದೆ. ಭೂ ಮಂಡಲ, ತಾರಾಮಂಡಲಗಳ ಬಗ್ಗೆ ನಮ್ಮ ತಿಳಿವಳಿಕೆ ಹೆಚ್ಚಾಗಿದೆ ಎಂದು ಸಂತಸ ಹಂಚಿಕೊಂಡರು.
ರಾಜ್ಯ ವಿಜ್ಞಾನ ಪರಿಷತ್ತಿನ ನಿರ್ದೇಶಕ ಆರ್.ಎಸ್. ಪಾಟೀಲ ಹಾಗೂ ಬೆಂಗಳೂರಿನ ಸಂಚಾರಿ ತಾರಾಲಯದ ವ್ಯವಸ್ಥಾಪಕ ಮಲ್ಲಿಕಾರ್ಜುನ ಬಳಗೇರಿ ಮಾತನಾಡಿ, ತಾರಾ ಮಂಡಲಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ ವೈಜ್ಞಾನಿಕ ಜ್ಞಾನ ಬೆಳೆಸುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಶಾಲಾ ಅಂಗಳದಲ್ಲಿ ತಾರಾಲಯ ಕಾರ್ಯಕ್ರಮ ಆಯೋಜಿಸಿದೆ. ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಈ ಕಾರ್ಯಕ್ರಮ ನಡೆಸುತ್ತ ಬಂದಿದ್ದೇವೆ. ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಇಂದಿನಿಂದ ಈ ಕಾರ್ಯಕ್ರಮವನ್ನು ನಡೆಸುತ್ತೇವೆ ಎಂದು ತಿಳಿಸಿದರು. ಸರ್ಕಾರಿ ಉರ್ದು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎಚ್.ಎಂ. ಫಡ್ನೀಸ್, ಆಂಗ್ಲ ಶಿಕ್ಷಕ ನಾಗರಾಜ ನಡುವಿನಮಠ ವಿವಿಧ ಶಿಕ್ಷಕರು, 270 ಕ್ಕೂ ಅಧಿಕ ವಿದ್ಯಾರ್ಥಿಗಳು ರಾಲಯ ವೀಕ್ಷಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ