ಕಲಿಕಾ ಪದ್ಧತಿಯಲ್ಲಿ ತಂತ್ರಜ್ಞಾನ ಬಳಸಿ


Team Udayavani, Sep 5, 2018, 4:05 PM IST

5-september-21.jpg

ಹಾವೇರಿ: ಭೂ ಮಂಡಲ, ನಕ್ಷತ್ರಗಳು, ಗ್ರಹಗಳು, ಚಂದ್ರಮಂಡಲ, ಸೂರ್ಯ ಮಂಡಲ, ಬುಧ, ಶುಕ್ರ, ಶನಿ, ಮಂಗಳ ಗ್ರಹಗಳ ಚಲನವಲನಗಳ ಕುರಿತಂತೆ ವಿದ್ಯಾರ್ಥಿಗಳಿಗೆ ಪರಿಚಯಿಸಲು ರಾಜ್ಯ ವಿಜ್ಞಾನ ಪರಿಷತ್‌ ಹಮ್ಮಿಕೊಂಡಿದ್ದ ‘ಶಾಲಾ ಅಂಗಳದಲ್ಲಿ ತಾರಾಲಯ’ ಕಾರ್ಯಕ್ರಮ ನಗರದ ವಿದ್ಯಾರ್ಥಿಗಳಲ್ಲಿ ನಭೋಮಂಡಲದ ವಿಸ್ಮಯಗಳನ್ನು ಪರಿಚಯಿಸಿತು. ನಗರದ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ ಆಯೋಜಿಸಿದ್ದ ಶಾಲಾ ಅಂಗಳದಲ್ಲಿ ತಾರಾಲಯ ಕಾರ್ಯಕ್ರಮದ ಅಂಗವಾಗಿ ತ್ರಿಡಿ ವಿಡಿಯೋ ಹಾಗೂ ವಿವಿಧ ಮಾದರಿಗಳೊಂದಿಗೆ ಭೂಮಿ ಮತ್ತು ಅಂತರಿಕ್ಷಗಳ ಕೌತುಕಗಳನ್ನು ತಾರಾಲಯಗಳ ಕಾರ್ಯನಿರ್ವಹಣೆ ಕುರಿತಂತೆ ವಿವರನಾತ್ಮಕ ಪರಿಚಯ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಜಿಪಂ ಉಪ ಕಾರ್ಯದರ್ಶಿ ಜಿ.ಗೋವಿಂದಸ್ವಾಮಿ ಮಾತನಾಡಿ, ಆಧುನಿಕ ಕಲಿಕಾ ಪದ್ಧತಿಯಲ್ಲಿ ಮಕ್ಕಳ ಪಠ್ಯ ವಿಷಯ ಹೆಚ್ಚು ಮನದಟ್ಟಾಗಲು ವಿಜ್ಞಾನ ಮತ್ತು ತಂತ್ರಜ್ಞಾನದ ಬಳಕೆ ಅತ್ಯಂತ ಅವಶ್ಯವಾಗಿದೆ ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ ಮಾತನಾಡಿ, ಆಧುನಿಕ ಜಗತ್ತಿನಲ್ಲಿ ಎಲ್ಲ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಮಕ್ಕಳನ್ನು ವೈಜ್ಞಾನಿಕವಾಗಿ ಹೆಚ್ಚು ಬುದ್ಧಿವಂತರನ್ನಾಗಿಸುವುದು ಅವಶ್ಯವಾಗಿದೆ. ಶಾಲಾ ಅಂಗಳದಲ್ಲಿ ತಾರಾಲಯ ಕಾರ್ಯಕ್ರಮ ಭೂಮಿ ಮತ್ತು ಅಂತರಿಕ್ಷದ ಬಗ್ಗೆ ಮಕ್ಕಳಲ್ಲಿರುವ ಕೌತುಕವನ್ನು ತಣಿಸಲು ಮತ್ತು ಅರಿತುಕೊಳ್ಳಲು ಉಪಕಾರಿಯಾಗಿದೆ ಎಂದರು. ಕಾರ್ಯಕ್ರಮ ವೀಕ್ಷಿಸಿದ ವಿದ್ಯಾರ್ಥಿಗಳು, ತಾರಾಲಯಗಳನ್ನು ವೀಕ್ಷಿಸಲು ನಾವು ಬೆಂಗಳೂರು ಅಥವಾ ಹೈದ್ರಾಬಾದಿಗೆ ಹೋಗಬೇಕಾಗಿತ್ತು.

ಈ ಹಂತದಲ್ಲಿ ಅಲ್ಲಿಗೆ ಹೋಗಿ ವೀಕ್ಷಿಸಲು ನಮಗೆ ಸಾಧ್ಯವಾಗುವುದಿಲ್ಲ. ಆದರೆ, ಪಠ್ಯದಲ್ಲಿ ಮಾತ್ರ ಈ ವಿಷಯವನ್ನು ತಿಳಿದುಕೊಂಡಿದ್ದೇವು. ತಾರಾಲಯದ ಬಗ್ಗೆ ನಮಗಿರುವ ಕೌತುಕವನ್ನು ಹಲವು ಪ್ರಶ್ನೆಗಳು ಈ ಕಾರ್ಯಕ್ರಮದಿಂದ ತಿಳಿದುಕೊಳ್ಳಲು ಸಹಕಾರಿಯಾಗಿದೆ. ಭೂ ಮಂಡಲ, ತಾರಾಮಂಡಲಗಳ ಬಗ್ಗೆ ನಮ್ಮ ತಿಳಿವಳಿಕೆ ಹೆಚ್ಚಾಗಿದೆ ಎಂದು ಸಂತಸ ಹಂಚಿಕೊಂಡರು.

ರಾಜ್ಯ ವಿಜ್ಞಾನ ಪರಿಷತ್ತಿನ ನಿರ್ದೇಶಕ ಆರ್‌.ಎಸ್‌. ಪಾಟೀಲ ಹಾಗೂ ಬೆಂಗಳೂರಿನ ಸಂಚಾರಿ ತಾರಾಲಯದ ವ್ಯವಸ್ಥಾಪಕ ಮಲ್ಲಿಕಾರ್ಜುನ ಬಳಗೇರಿ ಮಾತನಾಡಿ, ತಾರಾ ಮಂಡಲಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ ವೈಜ್ಞಾನಿಕ ಜ್ಞಾನ ಬೆಳೆಸುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ ಶಾಲಾ ಅಂಗಳದಲ್ಲಿ ತಾರಾಲಯ ಕಾರ್ಯಕ್ರಮ ಆಯೋಜಿಸಿದೆ. ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಈ ಕಾರ್ಯಕ್ರಮ ನಡೆಸುತ್ತ ಬಂದಿದ್ದೇವೆ. ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಇಂದಿನಿಂದ ಈ ಕಾರ್ಯಕ್ರಮವನ್ನು ನಡೆಸುತ್ತೇವೆ ಎಂದು ತಿಳಿಸಿದರು. ಸರ್ಕಾರಿ ಉರ್ದು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎಚ್‌.ಎಂ. ಫಡ್ನೀಸ್‌, ಆಂಗ್ಲ ಶಿಕ್ಷಕ ನಾಗರಾಜ ನಡುವಿನಮಠ ವಿವಿಧ ಶಿಕ್ಷಕರು, 270 ಕ್ಕೂ ಅಧಿಕ ವಿದ್ಯಾರ್ಥಿಗಳು  ರಾಲಯ ವೀಕ್ಷಣೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.