ಜನರ ನಿರೀಕ್ಷೆ ಹುಸಿ ಮಾಡಲಾರೆ: ಜಮೀರ್‌


Team Udayavani, Sep 6, 2018, 5:13 PM IST

6-september-25.jpg

ಹಾವೇರಿ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಲು ಅನುಕೂಲ ಆಗುತ್ತದೆ ಎಂದು ಪ್ರಚಾರ ವೇಳೆ ಹೇಳಿದ್ದೆ. ಈಗ ಜನ ನಮ್ಮನ್ನು ಗೆಲ್ಲಿಸಿದ್ದು ಕೆಲಸ ಮಾಡಿ ತೋರಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದರು.

ಇಲ್ಲಿನ ಹೊಸಮಠದಲ್ಲಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಬುಧವಾರ ಆಯೋಜಿಸಿದ್ದ ಜಿಲ್ಲೆಯ 5 ನಗರ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಗೆಲುವು ಸಾಧಿ ಸಿರುವ ಕಾಂಗ್ರೆಸ್‌ ಸದಸ್ಯರನ್ನು ಸನ್ಮಾನಿಸಿ ಅವರು ಮಾತನಾಡಿದರು. ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಾಂಗ್ರೆಸ್‌ ಗೆಲ್ಲುವ ನಿರೀಕ್ಷೆ ಇರಲಿಲ್ಲ, ಇಡೀ ರಾಜ್ಯದಲ್ಲಿ ಹಾವೇರಿ ಜಿಲ್ಲೆ ಈಗ ಚರ್ಚಿತ ವಿಷಯವಾಗಿದೆ. ಜಿಲ್ಲೆಯಲ್ಲಿ ನಾಲ್ಕು ಬಿಜೆಪಿ ಶಾಸಕರಿದ್ದಾಗಲೂ ಕಾಂಗ್ರೆಸ್‌ ಗೆ ಇಷ್ಟು ಸಾಧನೆ ಮಾಡಲು ಹೇಗೆ ಸಾಧ್ಯವಾಯಿತು ಎಂದು ಚರ್ಚೆ ಮಾಡುತ್ತಿದ್ದಾರೆ. ಈ ಗೆಲುವು ನನಗಿಂತ ಹೆಚ್ಚಾಗಿ ಪಕ್ಷದ ಕಾರ್ಯಕರ್ತರಿಂದ, ಮುಖಂಡರಿಂದ ಸಾಧ್ಯವಾಗಿದೆ ಎಂದರು.

ನಾವು ಗೆದ್ದಿದ್ದೇವೆ. ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದಾರೆ. ಹೇಗೆ ಕೆಲಸ ಮಾಡೋದು ಎಂದು ಪಕ್ಷದ ಸದಸ್ಯರು ಚಿಂತೆ ಮಾಡಬೇಡುವ ಅಗತ್ಯವಿಲ್ಲ. ನಾನು ಜಿಲ್ಲಾ ಮಂತ್ರಿಯಾಗಿ ನಿಮ್ಮ ಜೊತೆ ಇರುತ್ತೇನೆ. ನಮ್ಮದು ಹೈಕಮಾಂಡ್‌ ಪಕ್ಷ. ನನ್ನ ಕೆಲಸ ನೋಡಿ ಹೈಕಮಾಂಡ್‌ ಮಂತ್ರಿ ಸ್ಥಾನ ನೀಡಿದೆ. ಉತ್ತಮವಾಗಿ ಕೆಲಸ ಮಾಡುವವರನ್ನು ಪಕ್ಷ ಗುರುತಿಸುವುದು ಎಂಬುದಕ್ಕೆ ನಾನೇ ಸಾಕ್ಷಿ ಎಂದರು. 

ರಾಜ್ಯದಲ್ಲಿ ತಿಪ್ಪರಲಾಗ ಹಾಕಿದರೂ ಬಿಜೆಪಿ ಅಧಿಕಾರಕ್ಕೆ ಬರಲ್ಲ, ಜನ ಮೋದಿಗೂ ಒಂದು ಅವಕಾಶ ಕೊಟ್ಟಿದ್ದಾರೆ. ಬಹಳಷ್ಟು ಕಾಂಗ್ರೆಸ್‌ ನಾಯಕರು ಅಚ್ಛೆ ದಿನ್‌ ಬರಲಿಲ್ಲ ಅಂತಾರೆ, ಇದನ್ನು ನಾನು ಒಪ್ಪಲ್ಲ. ಅಚ್ಛೆ ದಿನ್‌ ಬಂದಿದೆ. ಆದರೆ, ಅದು ಬಿಜೆಪಿ, ಆರ್‌ಎಸ್‌ಎಸ್‌, ಮೋದಿ, ಅಮಿತ್‌ ಶಾಗೆ ಮಾತ್ರ ಬಂದಿದೆ ಎಂದ ಅವರು, ನಮಗೆ ಮನ್‌ ಕಿ ಬಾತ್‌ ಬೇಡ, ಕಾಮ್‌ ಕಿ ಬಾತ್‌ ಬೇಕು. ಎಲ್ಲ ಸಮಾಜದರಿಗೆ ನ್ಯಾಯ ಒದಗಿಸಲು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಬಿ.ಸಿ. ಪಾಟೀಲ, ವಿಪ ಸದಸ್ಯ ಶ್ರೀನಿವಾಸ ಮಾನೆ, ಮಾಜಿ ಸಚಿವರಾದ ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ, ಜಿಪಂ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ, ಮಾಜಿ ಶಾಸಕ ಅಜ್ಜಂಫೀರ್‌ ಖಾದ್ರಿ, ಎಸ್‌.ಆರ್‌. ಪಾಟೀಲ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಎಸ್‌.ಸಿ. ಶಿಡೇನೂರ ಇತರರಿದ್ದರು.

ಹುಲಿಯನ್ನು ಇಲಿ ಮಾಡಿದ್ದಾರೆ
ಹಾನಗಲ್ಲನಲ್ಲಿ ಸಚಿವ ಸಿ.ಎಂ. ಉದಾಸಿ, ಸಂಸದ ಶಿವಕುಮಾರ ಉದಾಸಿ ದೊಡ್ಡ ಲೀಡರ್‌.ಅವರು ಹುಲಿ ಇದ್ದಂತೆ. ಆದರೆ, ಜನ ಈಗ ಅವರ ವಾರ್ಡ್ನಲ್ಲೇ ಕಾಂಗ್ರೆಸ್‌ ಗೆಲ್ಲಿಸುವ ಮೂಲಕ ಉದಾಸಿ ಅವರನ್ನ ಇಲಿ ಮಾಡಿದ್ದಾರೆ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಒಂದಾಗಿ ಕೆಲಸ ಮಾಡಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದೇ ನಮ್ಮ ಮುಂದಿನ ಗುರಿ ಎಂದು ಸಚಿವ ಜಮೀರಅಹ್ಮದ್‌ ಹೇಳಿದರು.

ಟಾಪ್ ನ್ಯೂಸ್

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.