ಮಹಿಳೆ-ಮಕ್ಕಳ ಸಾಗಾಣಿಕೆ ಹೀನ ಕೃತ್ಯ


Team Udayavani, Sep 9, 2018, 3:32 PM IST

9-sepctember-21.jpg

ಹಾವೇರಿ: ಮಹಿಳೆ ಮತ್ತು ಮಕ್ಕಳ ಸಾಗಾಣಿಕೆ ಅತ್ಯಂತ ಹೀನ ಕೃತ್ಯವಾಗಿದೆ. ಪೊಲೀಸ್‌ ಠಾಣೆಗಳಲ್ಲಿ ದಾಖಲಾಗುವ ದೂರುಗಳಲ್ಲಿ ಶೇ. 60ರಷ್ಟು ಹೆಣ್ಣು ಮಕ್ಕಳ ಸಾಗಾಣಿಕೆ ಪ್ರಕರಣಗಳಾಗಿವೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿ ಕೆ.ಪರಶುರಾಮ ಹೇಳಿದರು.

ನಗರದ ದೇವರಾಜ ಅರಸು ಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರ, ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಪೊಲೀಸ್‌ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಸರ್ಕಾರೇತರ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಸಾಗಾಣಿಕೆ ಹಾಗೂ ವಾಣಿಜ್ಯಿಕ ಲೈಂಗಿಕ ಶೋಷಣೆ ಸಂತ್ರಸ್ತರ ಯೋಜನೆ-2015’ ಕುರಿತ ಕಾರ್ಯಕ್ರಮ ಹಾಗೂ ಪೊಲೀಸ್‌ ದೂರು ಪ್ರಾಧಿಕಾರ ಮತ್ತು ಸಂತ್ರಸ್ತರ ಪರಿಹಾರ ಯೋಜನೆ ಕುರಿತು ಕಾನೂನು ಸಾಕ್ಷರತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಹಿಳೆ ಮತ್ತು ಮಕ್ಕಳ ಸಾಗಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಯಾವುದೋ ಆಮಿಷಕ್ಕೆ ಒಳಗಾಗಿ ಮಹಿಳೆಯರು ಶೋಷಣೆಗೊಳಲಾಗುತ್ತಿದ್ದಾರೆ. ಸುಪ್ರೀಂ ಕೋರ್ಟ್‌ ಆದೇಶದನ್ವಯ 18ವರ್ಷದೊಳಗಿನ ಹೆಣ್ಣುಮಕ್ಕಳು ಕಾಣೆಯಾದಲ್ಲಿ ಅಪಹರಣ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗುತ್ತಿದೆ ಎಂದರು. 

ಹೆಣ್ಣುಮಕ್ಕಳ ಅನುಕೂಲಕ್ಕಾಗಿ ಸರ್ಕಾರ ಮಹಿಳಾ ಪೊಲೀಸ್‌ ಠಾಣೆಗಳನ್ನು ತೆರೆದಿದೆ. ಈ ಠಾಣೆಗಳಲ್ಲಿ ಮಹಿಳಾ ಪೊಲೀಸರೇ ಕರ್ತವ್ಯ ನಿರ್ವಹಿಸುತ್ತಾರೆ. ದೌರ್ಜನ್ಯಕ್ಕೆ ಹಾಗೂ ಶೋಷಣೆಗೆ ಒಳಗಾದ ಮಹಿಳೆಯರು ಈ ಠಾಣೆಗಳಲ್ಲಿ ದೂರು ಸಲ್ಲಿಸಿ ನ್ಯಾಯ ಪಡೆದುಕೊಳ್ಳಬಹುದು ಎಂದು ಹೇಳಿದರು. ಈ ಕುರಿತು ಪೊಲೀಸ್‌ ಇಲಾಖೆಯಲ್ಲಿ ಮಾತ್ರ ದೂರ ಪ್ರಾಧಿಕಾರವಿದ್ದು, ಬೇರಾವ ಇಲಾಖೆಯಲ್ಲೂ ಈ ಸೌಲಭ್ಯ ಒದಗಿಸಿಲ್ಲ. ಪೊಲೀಸ್‌ ಇಲಾಖೆಯಲ್ಲಿ ದೌರ್ಜನ್ಯ ನಡೆಯುತ್ತದೆ ಎಂಬ ಆರೋಪಗಳು ಬಂದ ಕಾರಣ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಪೊಲೀಸ್‌ ದೂರು ಪ್ರಾಧಿಕಾರ ರಚಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಅಧ್ಯಕ್ಷರಾಗಿದ್ದು ಪೊಲೀಸ್‌ ಅಧೀಕ್ಷಕರು ಸದಸ್ಯ ಕಾರ್ಯದರ್ಶಿಗಳಾಗಿದ್ದಾರೆ. ಜಿಲ್ಲಾ ಮಟ್ಟದ ದೂರುಗಳನ್ನು ಡಿಸಿ ಕಚೇರಿಯಲ್ಲಿನ ದೂರು ಪ್ರಾಧಿಕಾರಕ್ಕೆ ದೂರು ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರದ ಸದಸ್ಯ ಕಾರ್ಯದರ್ಶಿ ಹಿರಿಯ ಸಿವಿಲ್‌ ನ್ಯಾಯಾಧೀಶ ವೈ.ಎಲ್‌. ಲಾಡಖಾನ್‌ ಮಾತನಾಡಿ, ಹಿಂದಿನ ಕಾಲದಲ್ಲಿ ನಗ, ನಾಣ್ಯ, ಬಂಗಾರ ಕಳ್ಳತನವಾಗುತ್ತಿತ್ತು. ಆದರೆ, ಇಂದಿನ ಸಮಾಜದಲ್ಲಿ ಮನುಷ್ಯರ ಕಳ್ಳತನವಾಗುತ್ತಿದೆ. ಮಹಿಳೆ ಮತ್ತು ಮಕ್ಕಳನ್ನು ಅಪಹರಿಸಿ ದಾರಿತಪ್ಪಿಸಿ ವೇಶ್ಯಾವಾಟಿಕೆಗೆ ತಳ್ಳುತ್ತಿರುವುದು ಆತಂಕಕಾರಿ ಸಂಗತಿ ಎಂದರು.

ಇದೊಂದು ಹೀನ ಕೃತ್ಯವಾಗಿದ್ದು, ಪೊಲೀಸ್‌ ಠಾಣೆಗಳಲ್ಲಿ ದಾಖಲಾಗುವ ದೂರುಗಳಲ್ಲಿ ಶೇ. 60 ರಷ್ಟು ಹೆಣ್ಣು ಮಕ್ಕಳ ಸಾಗಾಣಿಕೆ ಪ್ರಕರಣಗಳಾಗಿವೆ. ಲೈಂಗಿಕ ಶೋಷಣೆಗೊಳಗಾದಾಗ ಮಹಿಳೆಯರು ಮತ್ತು ಮಕ್ಕಳು ಘಟನೆ ನಡೆದ 24 ತಾಸಿನಲ್ಲಿ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದರೆ ಅಂಥವರಿಗೆ ನ್ಯಾಯ ಒದಗಿಸಲಾಗುವುದು. ಇದು ಕೇವಲ ಸರ್ಕಾರದ ಕಾರ್ಯ ಮಾತ್ರವಲ್ಲದೇ ಸಮಾಜದ ಎಲ್ಲರೂ ಇಂತಹ ಘಟನೆ ವಿರುದ್ಧ ಹೋರಾಡಬೇಕು. ಜಾಗೃತಿ ಮೂಡಿಸಲು ಕೈಜೋಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಶೋಕ ಸಿ. ನೀರಲಗಿ, ಕಾರ್ಯದರ್ಶಿ ದೇವರಾಜ ನಾಯ್ಡು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎನ್‌. ಮಾಳಗೇರ, ಎಎಸ್‌ಐ ಉದಯ ಕುಲಕರ್ಣಿ ಇದ್ದರು.ಶಿಶು ಅಭಿವೃದ್ಧಿ ಯೋಜನಾ ಧಿಕಾರಿ ಉಮಾ ಕೆ.ಎಸ್‌. ಸ್ವಾಗತಿಸಿದರು. ವಿನಯ ಗುಡಗೂರ ನಿರೂಪಿಸಿದರು.

ವೇಶ್ಯಾವಾಟಿಕೆ ಅಂತಾರಾಷ್ಟ್ರೀಯ ಮಟ್ಟದ ವೃತ್ತಿಯಾಗಿ ಬೆಳೆದಿದೆ. ತಿಳಿದೋ ತಿಳಿಯದೆಯೋ ಈ ವೃತ್ತಿಯಲ್ಲಿ ತೊಡಗಿಕೊಂಡವರು ಮರಳಿ ಆ ಜಗತ್ತಿನಿಂದ ಹೊರಬರುವುದು ಕಷ್ಟಸಾಧ್ಯ. ಲೈಂಗಿಕ ದೌರ್ಜನ್ಯ ಹಾಗೂ ಶೋಷಣೆಗೆ ಒಳಗಾದವರನ್ನು ಸಮಾಜದ ಮುಖ್ಯವಾಹಿನಿಗೆ ತಂದು, ಸಮಾಜದಲ್ಲಿ ಗೌರಯುತವಾಗಿ ಬಾಳಲು ಅವಕಾಶ ನೀಡುವುದು ಕಾನೂನು ಸೇವೆಗಳ ಪ್ರಾಧಿ ಕಾರದ ಉದ್ದೇಶ.
 ವೈ.ಎಲ್‌. ಲಾಡಖಾನ್‌, ನ್ಯಾಯಾಧೀಶರು

ಉಪನ್ಯಾಸ
ವಕೀಲರಾದ ಎಂ.ಎಚ್‌. ವಾಲಿಕರ ಕಲಂ-357ಎ, ಪಿಸಿ ಮತ್ತು ಸಂತ್ರಸ್ತರ ಪರಿಹಾರಧನ ಯೋಜನೆ ಕುರಿತು, ಆಶಾಕಿರಣ ಸಂಸ್ಥೆಯ ಅಧ್ಯಕ್ಷ ಮುತ್ತುರಾಜ ಮಾದರ ಸಾಗಾಣಿಕೆ ಹಾಗೂ ವಾಣಿಜ್ಯಿಕ ಲೈಂಗಿಕ ಶೋಷಣೆ ಸಂತ್ರಸ್ತರ ಕಾಯಿದೆ-2015ರ ಕುರಿತು ಹಾಗೂ ಪಿಎಸ್‌ಐ ಮಾಲತೇಶ, ಪೊಲೀಸ್‌ ದೂರು ಪ್ರಾಧಿಕಾರ ರಚನೆ, ಮಹತ್ವ ಮತ್ತು ಅದರ ಕಾರ್ಯ ಚಟುವಟಿಕೆ ಕುರಿತು ಉಪನ್ಯಾಸ ನೀಡಿದರು. 

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.