ಸ್ವಚ್ಛ ಭಾರತ್‌ ಘೋಷಣೆಗಿಲ್ಲ ಮನ್ನಣೆ


Team Udayavani, Sep 10, 2018, 5:01 PM IST

secptember-21.jpg

ರಾಣಿಬೆನ್ನೂರ: ವಾಣಿಜ್ಯ ನಗರ ಹಾಗೂ ಬೀಜೋತ್ಪಾದನೆ ಕಣಜವೆಂದೇ ವಿಶ್ವದಲ್ಲಿ ಪ್ರಖ್ಯಾತಿ ಪಡೆದ ನಗರದ ರೈಲ್ವೇ ನಿಲ್ದಾಣದಲ್ಲಿ ಸ್ವಚ್ಛತೆ ಎನ್ನುವುದು ಮರಿಚಿಕೆಯಾಗಿದ್ದು, ಪ್ರಧಾನಿ ಮೋದಿಯವರ ಸ್ವಚ್ಛ ಭಾರತದ ಕನಸು ಕೇಂದ್ರ ಸರ್ಕಾರದ ಅಧೀನದಲ್ಲಿರುವ ಇಲಾಖೆಯಲ್ಲಿಯೇ ಸಾಕಾರವಾಗದಿರುವುದು ವಿಪರ್ಯಾಸ.

ಪ್ರಧಾನಿ ನರೇಂದ್ರ ಮೋದಿಯವರು ಸ್ವಚ್ಛ ಭಾರತ ಅಭಿಯಾನ ಆರಂಭಿಸಿ 4 ವರ್ಷಗಳು ಗತಿಸಿದರೂ ಕೇಂದ್ರ ಸರ್ಕಾರದ ಅಧೀನದಲ್ಲಿರುವ ರೈಲ್ವೆ ನಿಲ್ದಾಣಗಳು ಸ್ವಚ್ಛತೆ ಕಾಪಾಡಿಕೊಳ್ಳುವಲ್ಲಿ ವಿಫಲವಾಗಿವೆ.ನಿಲ್ದಾಣದಲ್ಲಿನ ಶೌಚಾಲಯಕ್ಕೆ ಕಳೆದ 2 ತಿಂಗಳಿಂದ ಬೀಗ ಜಡಿಯಲಾಗಿದ್ದು, ಪ್ರಯಾಣಿಕರು ಶೌಚಾಲಯ ಬಳಸಬೇಕು ಎಂದರೇ ರೈಲು ಬರುವವರೆಗೆ ಕಾಯಬೇಕಿದೆ. ಈ ಕುರಿತು ಹಲವು ಬಾರಿ ಪ್ರಯಾಣಿಕರು ಸ್ಟೇಶನ್‌ ಅಧಿಕಾರಿಗಳಲ್ಲಿ ಮೌಖಿಕ ಮನವಿ ಮಾಡಿಕೊಂಡಿದ್ದರೂ ಯಾವ ಪ್ರಯೋಜನೆಯಾಗಿಲ್ಲ.

ಕಸಗುಡಿಸಲು ದಿನಗೂಲಿ: ಸಾಮಾನ್ಯವಾಗಿ ದೇಶದ ಎಲ್ಲ ರೈಲು ನಿಲ್ದಾಣಗಳಲ್ಲಿ ಇಲಾಖೆಯ ಸಿಬ್ಬಂದಿಗಳೇ ತುಂಬಿರುತ್ತಾರೆ. ಅದರಲ್ಲೂ ಸ್ವತ್ಛತಾ ಕಾರ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿಯೇ ಕಾರ್ಮಿಕರು ಇರುತ್ತಾರೆ. ಆದರೆ, ರಾಣಿಬೆನ್ನೂರಿನ ರೈಲ್ವೆ ನಿಲ್ದಾಣದಲ್ಲಿ ಸ್ಥಳೀಯ ಇಬ್ಬರು ಕಾರ್ಮಿಕರನ್ನು ಸ್ವಚ್ಛತಾ ಕಾರ್ಯಕ್ಕೆ ತೆಗೆದುಕೊಳ್ಳಲಾಗಿದೆ. ಈ ಇಬ್ಬರೇ ಕಾರ್ಮಿಕರಿಂದ ಇಡೀ ರೈಲು ನಿಲ್ದಾಣ ಸ್ವಚ್ಛತೆ ಅಸಾಧ್ಯ. ಇಲಾಖೆ ಅಧಿಕಾರಿಗಳು ಈ ಕುರಿತು ಮುತುವರ್ಜಿ ವಹಿಸಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕಿದ್ದು, ಅಗತ್ಯ ಕಾರ್ಮಿಕರನ್ನು ನೇಮಿಸಿಕೊಳ್ಳಬೇಕಿದೆ.

ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ: ರೈಲ್ವೆ ಇಲಾಖೆಯಿಂದ ಸ್ವಚ್ಛತೆ ಮಾಡುವ ಗುತ್ತಿಗೆದಾರರ ಟೆಂಡರ್‌ ಪ್ರಕ್ರಿಯೆ ಫೆ. 2018ರಲ್ಲಿಯೇ ನಡೆದಿದೆ. ಡಬಲ್‌ ಟ್ರ್ಯಾಕ್  ಕಾಮಗಾರಿ ಕೈಗೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಚಳಗೇರಿ (ಕರೂರು) ನಿಲ್ದಾಣದಿಂದ ರಾಣಿಬೆನ್ನೂರು-ಶಿಕಾರಿಪುರ -ಶಿವಮೊಗ್ಗ ಹೊಸ ರೈಲ್ವೆ ಮಾರ್ಗ ಪ್ರಾರಂಭವಾಗಲಿದೆ. ಪ್ರಯಾಣಿಕರ ಸಂಖ್ಯೆಯೂ ಹೆಚ್ಚಲಿದ್ದು, ಇಲಾಖೆ ನಿಲ್ದಾಣದ ಸ್ವತ್ಛತೆಗೆ ಮೊದಲ ಆದ್ಯತೆ ನೀಡಲಿ ಎನ್ನುವುದು ಪ್ರಯಾಣಿಕರ ಒತ್ತಾಸೆಯಾಗಿದೆ.

ಸಾರ್ವಜನಿಕರ ಸಹಕಾರ ಅಗತ್ಯ: ಕೇಂದ್ರ ಸರ್ಕಾರ ಸ್ವಚ್ಛ ಭಾರತ ಎನ್ನುವ ವಿಭಿನ್ನ ಘೋಷಣೆ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪಣತೊಟ್ಟಿದ್ದು ಶ್ಲಾಘನೀಯ.ಆದರೆ, ಇಂತಹ ಯೋಜನೆಗಳ ಯಶಸ್ಸಿಗೆ ಅಧಿಕಾರಿಗಳು ಶ್ರಮಿಸಬೇಕಿದೆ. ಎಲ್ಲವನ್ನೂ ಸರ್ಕಾರವೇ ಮಾಡಲಿ ಎಂದರೇ ಯಾವ ಯೋಜನೆಯೂ ಅರ್ಥಪೂರ್ಣವಾಗದು. ಸಾರ್ವಜನಿಕರ ಸಹಾಯ, ಸಹಕಾರವೂ ಮೊದಲು ಬೇಕಿದೆ. ಬಸ್‌ ನಿಲ್ದಾಣ, ರೈಲು ನಿಲ್ದಾಣ ಸೇರಿದಂತೆ ಕಂಡ ಕಂಡಲ್ಲಿ ಉಗುಳುವುದು, ಕಸ ಚೆಲ್ಲುವುದು ಮಾಡಿದರೆ ಸ್ವಚ್ಛ, ಸುಂದರ, ಆರೋಗ್ಯವಂತ ಸಮಾಜ ನಿರ್ಮಾಣವಾಗದು.

ಶೌಚಾಲಯದಲ್ಲಿ ಸಾರ್ವಜನಿಕರು ತಂಬಾಕು, ಎಲೆ,ಅಡಕೆ ತಿಂದು ಉಗುಳಿ ಹಾಗೂ ಕಸ ಹಾಕಿದ ಪರಿಣಾಮ ಪದೇ ಪದೆ ಚಂಬರ್‌ ಕಟ್ಟಿಕೊಳ್ಳುತ್ತಿವೆ. ಹೀಗಾಗಿ ಬೀಗ ಹಾಕಲಾಗಿದೆ. ಇಗಾಗಲೇ ಟೆಂಡರ್‌ ಕರೆದಿದ್ದು, ಶೀಘ್ರವೇ ದುರಸ್ತಿ ಮಾಡಿಸಿ ಸಾರ್ವಜನಿಕರ ಉಪಯೋಗಕ್ಕೆ ಮುಕ್ತಗೊಳಿಸಲಾಗುವುದು.
ಕನ್ನಯ್ಯ, ಸ್ಟೇಶನ್‌ ಮಾಸ್ಟರ್‌ 

ಮಂಜುನಾಥ ಎಚ್‌.ಕುಂಬಳೂರು

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.