ನೆರಳು ಪರದೆ ಸೌಲಭ್ಯದಲ್ಲೂ ಹಣ ಲೂಟಿ: ಗುರುಮಠ 


Team Udayavani, Sep 12, 2018, 4:21 PM IST

12-sepctember-21.jpg

ಹಾವೇರಿ: ಕೃಷಿಭಾಗ್ಯ ಯೋಜನೆಯಡಿ ರೈತರಿಗೆ ಪಾಲಿಹೌಸ್‌ (ನೆರಳು ಮನೆ) ಸೌಲಭ್ಯ ಕಲ್ಪಿಸುವಲ್ಲಿ ಅಧಿಕಾರಿಗಳಿಂದ ಕೋಟ್ಯಂತರ ರೂ. ಲೂಟಿ ಹೊಡೆಯಲಾಗಿದ್ದು, ಈ ಬಗ್ಗೆ ಸರ್ಕಾರ ಸಮಗ್ರ ತನಿಖೆ ನಡೆಸಬೇಕು ಎಂದು ಅಖಿಲ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಶಿವಾನಂದ ಗುರುಮಠ ಆಗ್ರಹಿಸಿದರು.

ನಗರದ ಪ್ರವಾಸಿ ಗೃಹದಲ್ಲಿ ಮಂಗಳವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಈ ಅಕ್ರಮದ ಕುರಿತು ಮಾಹಿತಿ ನೀಡಿದರು. ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರ ಅನುಕೂಲಕ್ಕಾಗಿ ಏನೆಲ್ಲ ಸೌಲಭ್ಯಗಳನ್ನು ನೀಡುತ್ತಿದೆ. ಆದರೆ, ವಾಸ್ತವವಾಗಿ ಅದರ ಲಾಭ ಆ ಸಮುದಾಯದವರಿಗೆ ದಕ್ಕದೇ ಅಧಿಕಾರಿಗಳೇ ರೈತರ ಹೆಸರಲ್ಲಿ ಲೂಟಿ ಹೊಡೆಯುತ್ತಾರೆ ಎಂಬುದಕ್ಕೆ ತಾಲೂಕಿನಲ್ಲಿ 2015-16ನೇ ಸಾಲಿನಲ್ಲಿ ನೆರಳುಪರದೆ ಯೋಜನೆ ಅನುಷ್ಠಾನವೊಂದೇ ಸಾಕ್ಷಿ ಸಾಕು ಎಂದರು.

2015-16ನೇ ಸಾಲಿನಲ್ಲಿ ತಾಲೂಕಿಗೆ 3,36,60,000ರೂ. ನೆರಳು ಪರದೆ ಸೌಲಭ್ಯ ಕಲ್ಪಿಸಲು ಸರ್ಕಾರದಿಂದ ಮಂಜೂರಾಗಿದೆ. ಪ್ರತಿಯೊಬ್ಬ ರೈತನಿಗೆ 15.30 ಲಕ್ಷ ರೂ. ಸಹಾಯಧನ ಕೊಟ್ಟು ನೆರಳುಪರದೆ ಹಾಕಿಕೊಳ್ಳಲು ಅಧಿ ಕಾರಿಗಳು ಹಾವೇರಿ ತಾಲೂಕಿನ ಭರಡಿ ಒಂದೇ ಗ್ರಾಮವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅಲ್ಲಿ 22 ರೈತರಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿ, ಕಳಪೆ ಗುಣಮಟ್ಟದ ವಸ್ತುಗಳನ್ನು ಹಾಕಿ ಅಂದಾಜು 2.25 ಲಕ್ಷ ರೂ.ಗಳಲ್ಲಿ ಪಾಲಿಹೌಸ್‌ ನಿರ್ಮಿಸಿ ಸರ್ಕಾರದ ಕೋಟ್ಯಂತರ ರೂ.ಗಳನ್ನು ಲೂಟಿ ಹೊಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ರೈತರಿಗೆ ಒಂದಿಷ್ಟು ಹಣದ ಆಮಿಷಯೊಡ್ಡಿ, ಅವರ ಹೊಲದಲ್ಲಿ ನೆರಳುಪರದೆ ಹಾಕಿ, ಇದರ ಜತೆಗೆ ಹನಿ ನೀರಾವರಿ ಯೋಜನೆ ಮಾಡಲಾಗಿದೆ ಎಂದು ಕಳಪೆ ಗುಣಮಟ್ಟದ ಸಾಮಗ್ರಿಗಳನ್ನು ಹಾಕಿ ಪ್ರತಿಯೊಬ್ಬ ರೈತನಿಗೆ 16ರಿಂದ 17 ಲಕ್ಷ ರೂ. ಖರ್ಚು ಹಾಕಿದ್ದಾರೆ. ಫೋಟೋ ತೆಗೆದು, ಹಣ ಸಂದಾಯವಾದ ಬಳಿಕ ಕೆಲವು ಸಾಮಗ್ರಿಗಳನ್ನು ಕಿತ್ತುಕೊಂಡು ಬೇರೆ ಹೊಲದಲ್ಲಿ ಹಾಕಿ, ಅಲ್ಲಿಂದ ಮತ್ತೆ ಬೇರೆ ಕಡೆ ಹಾಕುತ್ತಾರೆ. ಹೀಗಾಗಿ ಕೇವಲ ಒಂದೇ ವರ್ಷದಲ್ಲಿ ಯೋಜನೆಯಡಿ ವ್ಯಯಿಸಿ ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿಗಳಲ್ಲಿ ಒಂದೇ ಒಂದು ಅವಶೇಷವೂ ಈಗ ಹೊಲದಲ್ಲಿ ಉಳಿದಿಲ್ಲ ಎಂದರು.

ಅಧಿಕಾರಿಗಳು, ರಾಜಕಾರಣಿಗಳು ಶಾಮೀಲಾಗಿ ಪ್ರತಿ ವರ್ಷ ಸರ್ಕಾರದಿಂದ ಬರುವ ಹಣ ನುಂಗುತ್ತಿದ್ದು, ಅವರಿಗೆ ಯಾರ ಹೆದರಿಕೆಯೂ ಇಲ್ಲದಂತಾಗಿದೆ. ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಂದ ಬಡ್ಡಿ ಸಹಿತ ಹಣ ವಸೂಲಿ ಮಾಡಿ ಅವರನ್ನು ನೌಕರಿಯಿಂದ ವಜಾಗೊಳಿಸಬೇಕೆಂದು ಅವರು ಒತ್ತಾಯಿಸಿದರು.

ಸರ್ಕಾರ ಪ್ರತಿವರ್ಷ ರೈತರಿಗಾಗಿ ಕೋಟ್ಯಂತರ ರೂ. ಖರ್ಚು ಮಾಡುತ್ತಿದ್ದರೂ ಲಂಚಬಡುಕ ಅಧಿಕಾರಿಗಳು ಲಕ್ಷಾಂತರ ರೂ. ಸಂಬಳ ಪಡೆದು ಜತೆಗೆ ರೈತರ ಹೆಸರಲ್ಲಿಯೂ ಲೂಟಿ ಹೊಡೆಯುತ್ತಿದ್ದಾರೆ. ಇಂಥ ಸಾವಿರಾರು ಯೋಜನೆಗಳು ಇದ್ದರೂ ಹಿಂದುಳಿದವರನ್ನು ಮೇಲೆತ್ತಲು ಸಾಧ್ಯವಾಗುವುದಿಲ್ಲ. ಸರ್ಕಾರಗಳು ಶಾಶ್ವತ ಯೋಜನೆಗಳನ್ನು ರೂಪಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲದಿದ್ದರೆ ಇದೇ ರೀತಿ ಸರ್ಕಾರದ ಹಣ ದುರುಪಯೋಗವಾಗುತ್ತಲೇ ಇರುತ್ತದೆ ಎಂದರು.

ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಎಷ್ಟು ಖರ್ಚು ಮಾಡಿದೆ. ಅದರ ಪ್ರಯೋಜನ ಪಡೆದು ಎಷ್ಟು ಜನ ಬದುಕು ಕಟ್ಟಿಕೊಂಡಿದ್ದಾರೆ. ಎಷ್ಟು ಹಣ ದುರುಪಯೋಗವಾಗಿದೆ ಎಂಬುದನ್ನು ಸರ್ಕಾರ ತನಿಖೆ ಮಾಡಬೇಕು ಎಂದು ಶಿವಾನಂದ ಗುರುಮಠ ಆಗ್ರಹಿಸಿದರು.

ಸಂಘಟನೆಯ ಉಪಾಧ್ಯಕ್ಷ ಶಿವಯೋಗಿ ಬೆನ್ನೂರು ಮಾತನಾಡಿ, ಪಶು ಇಲಾಖೆಯಿಂದ ಶೇ.50ರ ಸಹಾಯಧನದಲ್ಲಿ 14,500ರೂ. ಕೊಟ್ಟು ಮೇವು ಕತ್ತರಿಸುವ ಯಂತ್ರ ಸ್ವತಃ ಪಡೆದುಕೊಂಡಿದ್ದೆ. ಆ ಯಂತ್ರ ಕೇವಲ ಅರ್ಧ ದಿನ ಮಾತ್ರ ಕೆಲಸ ಸರಿಯಿತ್ತು. ಬಳಿಕ ಕೆಟ್ಟಿದೆ. ಇದು ಸರ್ಕಾರದಿಂದ ಪೂರೈಸುವ ಸಾಮಗ್ರಿಗಳ ಕಳಪೆ ಗುಣಮಟ್ಟಕ್ಕೆ ತಾಜಾ ಉದಾಹರಣೆ ಎಂದರು. ರೈತ ಪ್ರಮುಖರಾದ ಬಿ.ಎಂ. ಕುಲಕರ್ಣಿ, ರಮೇಶ ಶಂಕ್ರಪ್ಪನವರ, ಎಸ್‌.ಎಂ. ಚಿಗೌಡ್ರ ಸುದ್ದಿಗೋಷ್ಠಿಯಲ್ಲಿದ್ದರು.

ಎಸಿಬಿಗೆ ದೂರು
ಪಾಲಿಹೌಸ್‌ ನಿರ್ಮಾಣದ ಅಕ್ರಮ ಕುರಿತು ಮಾಹಿತಿ ಹಕ್ಕು ಕಾಯಿದೆಯಡಿ ಮಾಹಿತಿ ಪಡೆದುಕೊಂಡಿದ್ದು ಈ ಕುರಿತು ಭ್ರಷ್ಟಾಚಾರ ನಿಗ್ರಹದಳಕ್ಕೆ ದೂರು ನೀಡಿ, ಸಮಗ್ರ ತನಿಖೆ ನಡೆಸಲು ಒತ್ತಾಯಿಸಲಾಗುವುದು. ಒಂದು ವೇಳೆ ತನಿಖಾ ಸಂಸ್ಥೆಯಿಂದಲೂ ಅಧಿಕಾರಿಗಳ ಪರ ವರದಿ ಬಂದರೆ ನ್ಯಾಯಾಲಯದ ಮೆಟ್ಟಿಲು ಸಹ ಏರಲಾಗುವುದು. ಇದರಲ್ಲಿ ಯಾವುದೇ ರಾಜೀ ಇಲ್ಲ ಎಂದು ಶಿವಾನಂದ ಗುರುಮಠ ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.