ಸರ್ಕಾರಿ ಕಚೇರಿಯಲ್ಲಿ ಕೇಳ್ಳೋರಿಲ್ಲ ಗೋಳು


Team Udayavani, Sep 21, 2018, 3:56 PM IST

21-sepctember-21.jpg

ಸವಣೂರು: ಸರ್ಕಾರ ಸಾರ್ವಜನಿಕರಿಗೆ ಒಂದೇ ಸೂರಿನಡಿ ನೂರು ಸೌಲಭ್ಯಗಳನ್ನು ಒದಗಿಸಲು ಪ್ರಾರಂಭಿಸಿದ ಪಡಸಾಲೆಗೆ ಬರುವ ಸಾರ್ವಜನಿಕರು, ಪ್ರಮಾಣ ಪತ್ರಗಳನ್ನು ಪಡೆಯಲು ಬೆಳಗ್ಗೆಯಿಂದಲೇ ಸರದಿಯಲ್ಲಿ ನಿಂತು ಹೈರಾಣಾಗುವುದು ನಿತ್ಯದ ಕಾಯಕವಾಗಿದೆ.

ಮಧ್ಯಮ ವರ್ಗದವರು, ಬಡವರು, ರೈತರು, ಗ್ರಾಮೀಣ ಪ್ರದೇಶದ ಜನರು ಜಾತಿ-ಆದಾಯ, ವಿಧವಾ ವೇತನ, ಸಂಧ್ಯಾ ಸುರಕ್ಷೆ, ತಹಶೀಲ್ದಾರ್‌ ರಹವಾಸಿ ಸೇರಿದಂತೆ ದಿನನಿತ್ಯ ಒಂದಲ್ಲೊಂದು ಕೆಲಸಕ್ಕಾಗಿ ಪಡಸಾಲೆಗೆ ಬರುತ್ತಾರೆ. ಬೆಳಗ್ಗೆಯಿಂದಲೇ ಪಡಸಾಲೆ ಮುಂದೆ ಸರದಿ ಸಾಲಿನಲ್ಲಿ ನಿಂತುಕೊಳ್ಳುವ ಸಾರ್ವಜನಿಕರಿಗೆ ಸಿಬ್ಬಂದಿಗಳಿಂದ ಇಂಟರ್‌ನೆಟ್‌, ಕಂಪ್ಯೂಟರ್‌, ವಿದ್ಯುತ್‌ ತೊಂದರೆ ಸೇರಿದಂತೆ ಅನುಕೂಲಕ್ಕಿಂತ ಅನಾನುಕೂಲಗಳೇ ಹೆಚ್ಚಾಗುತ್ತಿವೆ. ವ್ಯವಸ್ಥೆ ಇನ್ನೂ ಸ್ಪಲ್ಪ ಹೊತ್ತಿಗೆ ಸರಿ ಹೋಗಿ ತಮಗೆ ಪ್ರಮಾಣ ಪತ್ರಗಳು ಸಿಗಬಹುದು ಎಂದು ಕಾಯುವಷ್ಟರಲ್ಲಿ; ಊಟದ ಹೊತ್ತಾಗಿದೆ ಎಂದು ಹೇಳಿ ಸಿಬ್ಬಂದಿಗಳು ಎದ್ದು ಹೋಗುವರು. ಬೆಳಗ್ಗೆಯಿಂದಲೇ ಸರದಿಯಲ್ಲಿ ನಿಂತು ಬೇಸತ್ತ ಜನರು ಅತ್ತ ಊಟಕ್ಕೂ ಹೋಗದೆ ಇತ್ತ ನಿಲ್ಲಲೂ ಆಗದೆ ನಿತ್ರಾಣಗೊಳ್ಳುತ್ತಿದ್ದಾರೆ.

ಸ್ಥಳ ಬಿಟ್ಟು ಕದಲಿದರೆ ಎಲ್ಲಿ ತಮ್ಮ ಸರದಿ ತಪ್ಪಿ ಹೋಗುತ್ತದೆಯೋ ಎನ್ನುವ ಭಯದಿಂದ ತಾವು ತಂದ ದಾಖಲೆಗಳ ಫೈಲ್‌, ಚೀಲಗಳನ್ನೇ ವಾರಸುದಾರರನ್ನಾಗಿ ಸರದಿಯಲ್ಲಿಟ್ಟು ಕಾಯುವಂತಹ ಪರಿಸ್ಥಿತಿ ತಹಶೀಲ್ದಾರ್‌ ಕಚೇರಿಯ ಪಡಸಾಲೆಯಲ್ಲಿ ನಿರ್ಮಾಣವಾಗಿರುವುದು ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.

ಕಚೇರಿಗೆ ಆಗಮಿಸುವ ಸಾರ್ವಜನಿಕರಿಗೆ ಕುಳಿತುಕೊಳ್ಳಲು ಕನಿಷ್ಟ ವ್ಯವಸ್ಥೆಯನ್ನೂ ಕಲ್ಪಿಸದಿರುವುದು ಕಂದಾಯ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ. ತಮ್ಮ ಕೆಲಸ ಕಾರ್ಯಬಿಟ್ಟು ದಿನಪೂರ್ತಿ ಕಾಯ್ದು ಪ್ರಮಾಣ ಪತ್ರ ಪಡೆದ ಕೆಲವೇ ಕೆಲವು ಜನ ಸಾಹಸ ಮಾಡಿದಷ್ಟು ಖುಷಿ ಪಡುತ್ತಿದ್ದಾರೆ. ಗ್ರಾಮೀಣ ಪ್ರದೇಶದಿಂದ ಬರುವ ಜನರಿಗೆ ಅಂದು ಕೆಲಸವಾಗದಿದ್ದರೆ ದಿನವೂ ಹೋಯ್ತಿ, ಹಣವೂ ಹೋಯ್ತು ಎಂದು ಅಧಿಕಾರಿಗಳನ್ನು ಶಪಿಸುತ್ತ ಗ್ರಾಮಕ್ಕೆ ಮರಳಿ ಹೋಗುವ ದೃಶ್ಯ ಇಲ್ಲಿ ಸಾಮಾನ್ಯ ಎನ್ನುವಂತಾಗಿದೆ.

ಈ ಕುರಿತು ಕಂದಾಯ ಇಲಾಖೆ ಅಧಿಕಾರಿಗಳು ಗಮನ ಹರಿಸುವ ಮೂಲಕ ಸಾರ್ವಜನಿಕರಿಗೆ ಸರ್ಕಾರದ ಸೌಲಭ್ಯ ವ್ಯವಸ್ಥಿತವಾಗಿ ಕಲ್ಪಿಸುವ ಕಾರ್ಯ ಮಾಡಬೇಕಿದೆ. ಇನ್ನಾದರೂ ಸೂಕ್ತ ವ್ಯವಸ್ಥೆ ಕಲ್ಪಿಸಲು ಮುಂದಾಗುವರೆ ಕಾದು ನೋಡಬೇಕಿದೆ. ದಿನಗೂಲಿ ಕೆಲಸಾ ಬಿಟ್ಟ ಇಲ್ಲಿಗ ಬರ್ತಿವ್ರಿ. ಮುಂಜಾನೆಯಿಂದ ಪಾಳೆದಾಗ ನಿಂತ್ರೂ ಬಂದ ಕೆಲಸ ಆಗಲ್ಲರಿ. ಕಂಪ್ಯೂಟರ್‌ ಪ್ರಾಬ್ಲಿಮ್‌ ಇರತೇತಿ, ನೆಟ್‌ ಪ್ರಾಬ್ಲಿಮ್‌ ಇರತೈತಿ. ಎರಡೂ ಸರಿ ಇದ್ದಾಗ ಅರ್ಜಿ ತಗೋಳ್ಳೋರ ಇರಾಂಗಿಲ್ಲ. ಇಷ್ಟ ದಿನದಾಗ ಒಮ್ಮೆಯೂ ಬಂದ ತಕ್ಷಣ ನಮ್ಮ ಕೆಲಸ ಸರಾಗವಾಗಿ ಆಗಿಲ್ಲ. ಮ್ಯಾಗೀನ ಸಾಹೇಬ್ರಿಗಿ ಹೇಳಿ ನಮ್ಮ ಕಷ್ಟಕ್ಕ ಒಂದ ಮುಕ್ತಿ ಕೊಡಸ್ರಿ.
ಹನುಮಂತಪ್ಪ, ರೈತ

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.