ಪರಿಷ್ಕೃತ ವೇತನದಲ್ಲಿನ ಗೊಂದಲ ಸರಿಪಡಿಸಲು ಒತ್ತಾಯ  


Team Udayavani, Oct 8, 2018, 5:13 PM IST

8-october-20.gif

ಹಾವೇರಿ: ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಪ್ರಾಚಾರ್ಯರು ಹಾಗೂ ಬೋಧಕೇತರ ಸಿಬ್ಬಂದಿಯವರಿಗೆ ಆರನೇ ವೇತನ ಆಯೋಗದ ಪರಿಷ್ಕೃತ ವೇತನ ಶ್ರೇಣಿಗಳನ್ನು ನೀಡುವಲ್ಲಿ ಸೃಷ್ಟಿಯಾದ ಗೊಂದಲಗಳನ್ನು ನಿವಾರಿಸಬೇಕು ಎಂದು ಒತ್ತಾಯಿಸಿ ಜಿಲ್ಲೆಯ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರರ, ಉಪನ್ಯಾಸಕರ ಹಾಗೂ ನೌಕರರ ಸಂಘ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದೆ.

ಇತ್ತೀಚೆಗೆ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ನೌಕರರು ಜಿಲ್ಲಾಧಿಕಾರಿ ಡಾ| ವೆಂಕಟೇಶ್‌ ಅವರ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು.

ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ 6ನೇ ವೇತನ ಆಯೋಗದ ಶಿಪಾರಸ್ಸಿನಂತೆ ಪಪೂ ನೌಕರರ ವೇತನ ತಾರತಮ್ಯ ಸರಿಪಡಿಸಲು ರಚಿಸಿದ ಕುಮಾರ ನಾಯಕ ವರದಿಯಂತೆ 01-06-2016ರಿಂದ ಒಂದು ವಾರ್ಷಿಕ ವೇತನ ಬಡ್ತಿಯನ್ನು ಹೊಸ ವೇತನ ಶ್ರೇಣಿ ಮೂಲ ವೇತನದಲ್ಲಿ ಸೇರಿಸಿ ಈಗಾಗಲೇ ಏಪ್ರಿಲ್‌ನಿಂದ ಅಗಷ್ಟ ತಿಂಗಳವರೆಗೆ; ಅಂದರೆ 5 ತಿಂಗಳ ಹೊಸ ವೇತನ ಶ್ರೇಣಿಯನ್ನು ನೀಡಲಾಗಿದೆ. 

ಆದರೆ, ಸರ್ಕಾರವು ಇತ್ತೀಚಿಗೆ ಮತ್ತೊಂದು ಆದೇಶ ಹೊರಡಿಸಿ ಈ ಹಿಂದೆ ಪಡೆದ ಒಂದು ವಾರ್ಷಿಕ ವೇತನ ಬಡ್ತಿಯನ್ನು ಮೂಲವೇತನದಲ್ಲಿ ಸೇರಿಸದೇ ಪ್ರತ್ಯೇಕವಾಗಿ ‘ವೈಯಕ್ತಿಕ ವೇತನ’ ಎಂದು ಎಚ್‌ಆರ್‌ ಎಂಎಸ್‌ನಲ್ಲಿ ನಮೂದಿಸಿ ವೇತನವನ್ನು ಬಿಡುಗಡೆ ಮಾಡಲು ಪಪೂ ಶಿಕ್ಷಣ ಇಲಾಖೆಯ ಎಲ್ಲ ಜಿಲ್ಲಾ ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಈ ರೀತಿ ಮಾಡುವುದರಿಂದ ಉಪನ್ಯಾಸಕರುಗಳಿಗೆ ಪ್ರಾಂಶುಪಾಲರುಗಳಿಗೆ ಆರ್ಥಿಕವಾಗಿ ನಷ್ಟವಾಗುತ್ತದೆ. ಆದ್ದರಿಂದ ಈ ಲೋಪದೋಷವನ್ನು ಸರಿಪಡಿಸಿ ಹಿಂದೆ ನೀಡಿದಂತೆ ಒಂದು ಹೆಚ್ಚುವರಿ ವೇತನ ಬಡ್ತಿಯನ್ನು ಪರಿಷ್ಕೃತ ಮೂಲವೇತನದಲ್ಲಿ ಸೇರ್ಪಡಿಸಿ ವೇತನ ಬಿಡುಗಡೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

6ನೇ ವೇತನ ಆಯೋಗದ ಪರಿಷ್ಕೃತ ವೇತನ ಶ್ರೇಣಿಗಳನ್ನು ಇದುವರೆಗೆ ಅಂದರೆ 6 ತಿಂಗಳು ಕಳೆದರೂ ಅನುದಾನಿತ ಸಿಬ್ಬಂದಿಗೆ ನೀಡಿಲ್ಲ. ಆದಷ್ಟು ಬೇಗನೇ 6ನೇ ವೇತನ ಆಯೋಗದ ಪರಿಷ್ಕೃತ ವೇತನ ಶ್ರೇಣಿ ಅನುದಾನಿತ ಪಪೂ ಕಾಲೇಜುಗಳ ಉಪನ್ಯಾಸಕರಿಗೆ ಪ್ರಾಚಾರ್ಯರಿಗೆ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ನೀಡಲು ಕ್ರಮ ಕೈಗೊಳ್ಳಬೇಕು. ಅನುದಾನಿತ ನೌಕರರಿಗೆ ವೇತನಾನುದಾನ ಸಮಯಕ್ಕೆ ಸರಿಯಾಗಿ ಬಿಡುಗಡೆಯಾಗುತ್ತಿಲ್ಲ. ಒಂದೊಂದು ಸಾರಿ ಎರಡೆರಡು ತಿಂಗಳಾದರೂ ವೇತನಾನುದಾನ ಬಿಡುಗಡೆಯಾಗದೆ, ನೌಕರರಿಗೆ ಬಹಳ ತೊಂದರೆಯಾಗುತ್ತಿದೆ. ಈ ಬಗ್ಗೆಯೂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಅನುಕೂಲ ಮಾಡಿಕೊಡಬೇಕು ಎಂದು ಸಂಘಟನೆಗಳು ಒತ್ತಾಯಿಸಿವೆ.

ಟಾಪ್ ನ್ಯೂಸ್

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.