ಕೈ ಮಗ್ಗದ ಉತ್ಪನ್ನ ಖರೀದಿಸಿ ಪ್ರೋತ್ಸಾಹಿಸಿ: ಉದಾಸಿ


Team Udayavani, Oct 13, 2018, 4:50 PM IST

13-october-21.gif

ಹಾವೇರಿ: ಕೈ ಮಗ್ಗದ ಉತ್ಪನ್ನಗಳನ್ನು ಖರೀದಿಸುವ ಮೂಲಕ ನೇಕಾರರಿಗೆ ಹಾಗೂ ಜವಳಿ ಉದ್ಯಮಕ್ಕೆ ಸಾರ್ವಜನಿಕರು ಬೆಂಬಲ ನೀಡಬೇಕು ಎಂದು ಹಾನಗಲ್ಲ ಶಾಸಕ ಸಿ.ಎಂ. ಉದಾಸಿ ಹೇಳಿದರು. ಭಾರತ ಸರ್ಕಾರದ ಜವಳಿ ಮಂತ್ರಾಲಯ, ಕರ್ನಾಟಕ ಸರ್ಕಾರದ ಕೈ ಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಕಾವೇರಿ ಹ್ಯಾಂಡ್‌ ಲೂಮ್‌ ಸಹಯೋಗದಲ್ಲಿ ನಗರದ ಜಿಲ್ಲಾ ಗುರುಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ವಸ್ತ್ರ ಕೌಶಲ್ಯ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಕೈ ಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳದಿಂದ ಖಾದಿ ಉದ್ಯಮ ಹಾಗೂ ಕೈ ಮಗ್ಗ ಉದ್ಯಮದ ಬೆಳವಣಿಗೆಗೆ ಅನುಕೂಲವಾಗಲಿದೆ. ಈ ಉದ್ಯಮದಲ್ಲಿ ತೊಡಗಿಸಿಕೊಂಡ ಸಣ್ಣಪುಟ್ಟ ನೇಕಾರರಿಗೆ ಮಾರುಕಟ್ಟೆ ಸೌಕರ್ಯ ಕಲ್ಪಿಸಿದಂತಾಗುತ್ತದೆ. ವಿಶೇಷವಾಗಿ ಜನರಿಗೆ ಕೈ ಮಗ್ಗ ಉತ್ಪನ್ನಗಳನ್ನು ಪರಿಚಯಿಸಲು ಅನುಕೂಲವಾಗಲಿದೆ ಎಂದರು.

ಕೈ ಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಬಿ.ತಿಪ್ಪೇಸ್ವಾಮಿ ಮಾತನಾಡಿ, ಕೈ ಮಗ್ಗ ನೇಕಾರರು ಉತ್ಪಾದಿಸಿರುವ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಈ ಮೇಳವನ್ನು ಆಯೋಜಿಸಲಾಗಿದೆ. ಬಾಗಲಕೋಟೆ, ಗದಗ, ಧಾರವಾಡ, ಹಾವೇರಿ, ಗುಲ್ಬರ್ಗ, ತುಮಕೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಹಾಗೂ ಹೊರ ರಾಜ್ಯಗಳ ಕೈಮಗ್ಗ ಸಂಘಗಳ ಉತ್ಪನ್ನಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದರು. ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ನೆಹರು ಓಲೇಕಾರ, ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಕೈ ಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಬಿ. ತಿಪ್ಪೇಸ್ವಾಮಿ ಇತರರು ಇದ್ದರು.

ಶೇ. 20 ರಿಯಾಯಿತಿ
ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ಜಿಲ್ಲೆಗಳಿಂದ 40 ಕೈ ಮಗ್ಗ ಸಹಕಾರಿ ಸಂಘಗಳು ವಸ್ತ್ರ ಕೌಶಲ್ಯ ವಿಶೇಷ ಕೈ ಮಗ್ಗ ಮೇಳದಲ್ಲಿ ಭಾಗವಹಿಸಿವೆ. ರೇಷ್ಮೆ ಸೀರೆ, ಇಳಕಲ್‌ ಮಾದರಿ ಸೀರೆ, ಬೆಡ್‌ ಶಿಟ್‌, ಪಂಚೆ, ಲುಂಗಿ, ದೇವರ ವಸ್ತ್ರ, ತಲೆದಿಂಬಿನ ಹೊದಿಕೆ, ಕಂಬಳಿ ಸೇರಿದಂತೆ ವಿವಿಧ ಕೈ ಮಗ್ಗ ವಸ್ತುಗಳ ಮಾರಾಟ ವ್ಯವಸ್ಥೆ ಮಾಡಲಾಗಿದೆ. ಹಬ್ಬದ ಪ್ರಯುಕ್ತ ಶೇ.20 ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಅ. 26ರ ವರೆಗೆ ಮಾರಾಟ ಮೇಳ ನಡೆಯಲಿದೆ.

ಹನುಮನಮಟ್ಟಿಯ ತೋಟಗಾರಿಕಾ ಇಲಾಖೆಗೆ ಸೇರಿದ 18 ಎಕರೆ ಜಾಗೆಯಲ್ಲಿ ಜವಳಿ ಪಾರ್ಕ್‌ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಈ ಜಮೀನಿಗೆ ಪರ್ಯಾಯವಾಗಿ ತೋಟಗಾರಿಕೆ ಇಲಾಖೆಗೆ ಬೇರೆ ಜಮೀನು ಗುರುತಿಸಿ ನೀಡಬೇಕಾಗಿದೆ. ಈ ಕುರಿತು ಜಿಲ್ಲಾಡಳಿತದಿಂದ ಪ್ರಸ್ತಾವನೆ ಸಲ್ಲಿಕೆಯಾಗಿರುವ ಮಾಹಿತಿ ಇದೆ. ಜವಳಿ ಪಾರ್ಕ್‌ ಸ್ಥಾಪನೆಯಿಂದ ಉದ್ಯೋಗಾವಕಾಶಗಳಿಗೆ ಅನುಕೂಲವಾಗಲಿದೆ.
 ಸಿ.ಎಂ. ಉದಾಸಿ, ಶಾಸಕರು

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.