ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಮುಂದೂಡಿಕೆ


Team Udayavani, Oct 26, 2018, 4:35 PM IST

26-october-19.gif

ಹಾವೇರಿ: ಆನ್‌ಲೈನ್‌ ವ್ಯವಸ್ಥೆಯಲ್ಲಿನ ತಾಂತ್ರಿಕ ತೊಂದರೆಯಿಂದಾಗಿ ಪ್ರಾಥಮಿಕ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಮುಂದೂಡಲಾಗಿದೆ. ಪ್ರಸಕ್ತ ಸಾಲಿನ ಪ್ರಾಥಮಿಕ ಶಾಲಾ ಸಹ ಶಿಕ್ಷಕರು, ಮುಖ್ಯ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರ ಘಟಕದೊಳಗಿನ ಕೋರಿಕೆ ವರ್ಗಾವಣೆಗಾಗಿ ವೇಳಾಪಟ್ಟಿಯಂತೆ ಗುರುವಾರ ಕೌನ್ಸೆಲಿಂಗ್‌ ನಿಗದಿಯಾಗಿತ್ತು. ಇಲ್ಲಿಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಕೌನ್ಸೆಲಿಂಗ್‌ ನಡೆಸಲು ತಯಾರಿ ಮಾಡಿಕೊಳ್ಳಲಾಗಿತ್ತು. ಆದರೆ, ಕೌನ್ಸೆಲಿಂಗ್‌ ಪ್ರಕ್ರಿಯೆ ನಡೆಸಲು ತಾಂತ್ರಿಕ ತೊಂದರೆ ಎದುರಾಗಿದ್ದರಿಂದ ಕೌನ್ಸೆಲಿಂಗ್‌ಗೆ ಬಂದಿದ್ದ ನೂರಾರು ಶಿಕ್ಷಕರು ಪರದಾಡುವಂತಾಯಿತು.

ಕೌನ್ಸೆಲಿಂಗ್‌ಗಾಗಿ ಜಿಲ್ಲೆಯ ವಿವಿಧ ಭಾಗಗಳಿಂದ ನೂರಾರು ಶಿಕ್ಷಕರು ಬೆಳಗ್ಗೆಯೇ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಜಮಾಯಿಸಿದ್ದರು. ಗಣಕಯಂತ್ರದ ಪರದೆಯಲ್ಲಿ ಖಾಲಿ ಹುದ್ದೆ ಪಟ್ಟಿ ತೆರೆದುಕೊಳ್ಳಲೇ ಇಲ್ಲ. ಹೀಗಾಗಿ ಬೆಳಗ್ಗೆ 10 ಗಂಟೆಗೆ ಆರಂಭವಾಗಬೇಕಿದ್ದ ಪ್ರಕ್ರಿಯೆ ಮಧ್ಯಾಹ್ನ 12 ಗಂಟೆಯಾದರೂ ಆರಂಭವಾಗಲಿಲ್ಲ. ಇದೇ ಮೊದಲ ಬಾರಿಗೆ ಖಾಲಿ ಹುದ್ದೆಗಳನ್ನು ಬೆಂಗಳೂರಿನಿಂದಲೇ ನಿರ್ವಹಿಸುವ ಕಾರ್ಯಮಾಡಲಾಗುತ್ತಿದೆ. ಜಿಲ್ಲೆಯೊಳಗಿನ ವರ್ಗಾವಣೆ ಪ್ರಕ್ರಿಯೆ ಕೇಂದ್ರೀಕೃತ ವ್ಯವಸ್ಥೆಯಲ್ಲಿ ನಡೆಸುತ್ತಿರುವುದರಿಂದ ಸ್ಥಳೀಯವಾಗಿ ಏನನ್ನೂ ಮಾಡಲು ಸಾಧ್ಯವಾಗದೇ ಎಲ್ಲವೂ ಕೇಂದ್ರ ಕಚೇರಿಯಿಂದಲೇ ಸರಿಪಡಿಸಬೇಕಾಗಿದ್ದರಿಂದ ಮಧ್ಯಾಹ್ನ 1 ಗಂಟೆ ವರೆಗೆ ಕಾದು ಬಳಿಕ ಕೌನ್ಸೆಲಿಂಗ್‌ ಪ್ರಕ್ರಿಯೆ ಮುಂದೂಡಲಾಯಿತು.

ಸುಸ್ತಾದ ಶಿಕ್ಷಕರು:
ಇತ್ತೀಚೆಗೆ ಕ್ಷೇತ್ರ ಶಿಕ್ಷಣಾಧಿ ಕಾರಿ ಕಚೇರಿಯನ್ನು ದೂರದ ಆರ್‌ಟಿಒ ಕಚೇರಿ ಬಳಿ ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದ್ದು, ಜಿಲ್ಲೆಯ ವಿವಿಧ ಭಾಗಗಳಿಂದ ಬಂದ ಶಿಕ್ಷಕರು ಬಸ್‌ನಿಲ್ದಾಣಕ್ಕೆ ಬಂದು ಅಲ್ಲಿಂದ ಆಟೋ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಬಂದಿದ್ದರು. ಹೊಸ ಕಚೇರಿಯಾಗಿದ್ದರಿಂದ ಅಲ್ಲಿ ಸಾಕಷ್ಟು ಸ್ಥಳಾವಕಾಶ, ಕುಡಿಯುವ ನೀರು, ನೆರಳು ಇಲ್ಲದೇ ಶಿಕ್ಷಕರು ಬಿಸಿಲಿನ ಪ್ರಖರತೆಗೆ ಬಸವಳಿದರು. ಬೆಳಗ್ಗೆಯಿಂದ ಕಾದು ಕಾದು ಸುಸ್ತಾದ ಶಿಕ್ಷಕರು, ಮಧ್ಯಾಹ್ನದ ವೇಳೆಗೆ ಕೌನ್ಸೆಲಿಂಗ್‌ಮುಂದೂಡಿಕೆ ಘೋಷಿಸಿದಾಗ ‘ಬಂದ ದಾರಿಗೆ ಸುಂಕುವಿಲ್ಲ’ ಎಂದು ಬೇಸರದಿಂದ ಮರಳಿದರು.

ಕೋರಿಕೆ ವರ್ಗಾವಣೆಗೆ ಅರ್ಜಿ ಸಲ್ಲಿಸಿದವರ ಆದ್ಯತಾ ಪಟ್ಟಿಯಲ್ಲಿ ಗುರುವಾರ ಪದವಿಧರೇತರ ಮುಖ್ಯಶಿಕ್ಷಕರು, 1ರಿಂದ 90 ಕ್ರಮ ಸಂಖ್ಯೆವರೆಗೆ ಮುಖ್ಯ ಶಿಕ್ಷಕರು, 1ರಿಂದ 59 ಕ್ರಮ ಸಂಖ್ಯೆವರೆಗಿನ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ 1ರಿಂದ 100 ಕ್ರಮ ಸಂಖ್ಯೆ ವರೆಗಿನ ಸಹ ಶಿಕ್ಷಕರಿಗೆ ಕೌನ್ಸಿಲಿಂಗ್‌ ನಿಗದಿಯಾಗಿತ್ತು. ತಾಂತ್ರಿಕ ತೊಂದರೆಯಿಂದಾಗಿ ಕೌನ್ಸಿಲಿಂಗ್‌ ಆರಂಭವಾಗಿಲ್ಲ. ಹೀಗಾಗಿ ಪ್ರಕ್ರಿಯೆ ಮುಂದೂಡಲಾಗಿದ್ದು, ಶೀಘ್ರವೇ ಕೌನ್ಸಿಲಿಂಗ್‌ ದಿನಾಂಕ ನಿಗದಿಪಡಿಸಿ ಮಾಹಿತಿ ನೀಡಲಾಗುವುದು.
ಅಂದಾನಪ್ಪ ವಡಗೇರಿ,
ಡಿಡಿಪಿಐ

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.